ಕೊರೊನಾ ಜನರ ಉಸಿರುಗಟ್ಟಿಸಿದ್ರೆ, ಬಿಜೆಪಿಗರು ಅಧಿಕಾರಿಗಳ ಉಸಿರುಗಟ್ಸಿದ್ದಾರೆ -ಖಾದರ್ ಕಿಡಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಯು.ಟಿ.ಖಾದರ್ ಟ್ವೀಟ್ ಮಾಡಿದ್ದಾರೆ. ನೈತಿಕ ಪೊಲೀಸ್ ಗಿರಿ ಮಾಡಿದ್ರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಕ್ಕೆ ಜಿಲ್ಲಾಧಿಕಾರಿ ಸಿಂಧೂ.ಬಿ.ರೂಪೇಶ್ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿತ್ತು. ಬೆದರಿಕೆ ಹಾಕಿದವರನ್ನ ಶಿಕ್ಷಿಸೋ ಬದಲು ಸರ್ಕಾರ ಡಿಸಿಯವರಿಗೆ ಶಿಕ್ಷೆ ನೀಡಿದೆ. ಇಂಥಹ ಪರಿಸ್ಥಿತಿಯಲ್ಲಿ ಅಧಿಕಾರಿಗಳಿಗೆ ಧೈರ್ಯ ತುಂಬಬೇಕಿತ್ತು. ಆದ್ರೆ ಇಲ್ಲಿನ ಬಿಜೆಪಿ ಮುಖಂಡರು ರಾಜಕೀಯ ಮೇಲಾಟವಾಡುತ್ತಿದ್ದಾರೆ. ಕೊರೊನಾ ಜನರ ಉಸಿರುಗಟ್ಟಿಸಿದ್ರೆ, ಬಿಜೆಪಿಗರು ಅಧಿಕಾರಿಗಳ […]

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಯು.ಟಿ.ಖಾದರ್ ಟ್ವೀಟ್ ಮಾಡಿದ್ದಾರೆ.
ನೈತಿಕ ಪೊಲೀಸ್ ಗಿರಿ ಮಾಡಿದ್ರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಕ್ಕೆ ಜಿಲ್ಲಾಧಿಕಾರಿ ಸಿಂಧೂ.ಬಿ.ರೂಪೇಶ್ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿತ್ತು. ಬೆದರಿಕೆ ಹಾಕಿದವರನ್ನ ಶಿಕ್ಷಿಸೋ ಬದಲು ಸರ್ಕಾರ ಡಿಸಿಯವರಿಗೆ ಶಿಕ್ಷೆ ನೀಡಿದೆ. ಇಂಥಹ ಪರಿಸ್ಥಿತಿಯಲ್ಲಿ ಅಧಿಕಾರಿಗಳಿಗೆ ಧೈರ್ಯ ತುಂಬಬೇಕಿತ್ತು. ಆದ್ರೆ ಇಲ್ಲಿನ ಬಿಜೆಪಿ ಮುಖಂಡರು ರಾಜಕೀಯ ಮೇಲಾಟವಾಡುತ್ತಿದ್ದಾರೆ.
ಕೊರೊನಾ ಜನರ ಉಸಿರುಗಟ್ಟಿಸಿದ್ರೆ, ಬಿಜೆಪಿಗರು ಅಧಿಕಾರಿಗಳ ಉಸಿರುಗಟ್ಟಿಸಿದ್ದಾರೆ. ಉತ್ತರಿಸು ಸರ್ಕಾರ, ನ್ಯಾಯ ಎಲ್ಲಿದೆ? ಎಂದು ಟ್ವಿಟರ್ನಲ್ಲಿ ಡಿಸಿ ವರ್ಗಾವಣೆ ವಿರುದ್ಧ ಖಾದರ್ ಖಂಡನೆ ವ್ಯಕ್ತಪಡಿಸಿದ್ದಾರೆ.
ಕಾನೂನು ಕೈಗೆತ್ತಿಕೊಂಡರೆ,ನೈತಿಕ ಪೋಲಿಸ್ ಗಿರಿ ಮಾಡಿದ್ರೆ ಕ್ರಮ ಕೈಗೊಳ್ಳತ್ತೇನೆ ಎಂದಿದ್ದಕ್ಕೆ ದುಷ್ಕರ್ಮಿಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ರವರಿಗೆ ಕೊಲೆ ಬೆದರಿಕೆ ಹಾಕಿದರು.ಸರ್ಕಾರ ಕೊಲೆ ಬೆದರಿಕೆ ಹಾಕಿದವರಿಗೆ ಶಿಕ್ಷೆ ನೀಡುವ ಬದಲು ಜಿಲ್ಲಾಧಿಕಾರಿಗಳಿಗೆ ಶಿಕ್ಷೆ ನೀಡಿದೆ.(1) @CMofKarnataka @BSYBJP @BSBommai
— UT Khadér (@utkhader) July 28, 2020
ಇಂಥಹ ಸಂದಿಗ್ಧ ಪರಿಸ್ಥಿತಿಯಲ್ಲಿ ಅಧಿಕಾರಿಗಳಿಗೆ ಧೈರ್ಯ ತುಂಬುವ ಬದಲು ಬಿಜೆಪಿ ಮುಖಂಡರುರಾಜಕೀಯ ಮೇಲಾಟ ಮಾಡುತ್ತಿದ್ದಾರೆ. ಮಾರಕ ಕೊರೋನಾ ಜನರನ್ನು ಉಸಿರುಗಟ್ಟಿಸುತ್ತಿದ್ದರೆ,ಬಿಜೆಪಿ ಜನಪ್ರತಿನಿಧಿಗಳು ಅಧಿಕಾರಿಗಳ ಉಸಿರುಗಟ್ಟಿಸುತ್ತಿದ್ದಾರೆ…….ಉತ್ತರಿಸು ಸರ್ಕಾರ #ನ್ಯಾಯ ಎಲ್ಲಿದೆ ? ? ?@CMofKarnataka @BSYBJP @BSBommai
— UT Khadér (@utkhader) July 28, 2020
Published On - 10:32 am, Wed, 29 July 20