AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಜನರ ಉಸಿರುಗಟ್ಟಿಸಿದ್ರೆ, ಬಿಜೆಪಿಗರು ಅಧಿಕಾರಿಗಳ ಉಸಿರುಗಟ್ಸಿದ್ದಾರೆ -ಖಾದರ್ ಕಿಡಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಯು.ಟಿ.ಖಾದರ್ ಟ್ವೀಟ್ ಮಾಡಿದ್ದಾರೆ. ನೈತಿಕ ಪೊಲೀಸ್ ಗಿರಿ ಮಾಡಿದ್ರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಕ್ಕೆ ಜಿಲ್ಲಾಧಿಕಾರಿ ಸಿಂಧೂ.ಬಿ.ರೂಪೇಶ್ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿತ್ತು. ಬೆದರಿಕೆ ಹಾಕಿದವರನ್ನ ಶಿಕ್ಷಿಸೋ ಬದಲು ಸರ್ಕಾರ ಡಿಸಿಯವರಿಗೆ ಶಿಕ್ಷೆ ನೀಡಿದೆ. ಇಂಥಹ ಪರಿಸ್ಥಿತಿಯಲ್ಲಿ ಅಧಿಕಾರಿಗಳಿಗೆ ಧೈರ್ಯ ತುಂಬಬೇಕಿತ್ತು. ಆದ್ರೆ ಇಲ್ಲಿನ ಬಿಜೆಪಿ ಮುಖಂಡರು ರಾಜಕೀಯ ಮೇಲಾಟವಾಡುತ್ತಿದ್ದಾರೆ. ಕೊರೊನಾ ಜನರ ಉಸಿರುಗಟ್ಟಿಸಿದ್ರೆ, ಬಿಜೆಪಿಗರು ಅಧಿಕಾರಿಗಳ […]

ಕೊರೊನಾ ಜನರ ಉಸಿರುಗಟ್ಟಿಸಿದ್ರೆ, ಬಿಜೆಪಿಗರು ಅಧಿಕಾರಿಗಳ ಉಸಿರುಗಟ್ಸಿದ್ದಾರೆ -ಖಾದರ್ ಕಿಡಿ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jul 30, 2020 | 8:45 PM

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಯು.ಟಿ.ಖಾದರ್ ಟ್ವೀಟ್ ಮಾಡಿದ್ದಾರೆ.

ನೈತಿಕ ಪೊಲೀಸ್ ಗಿರಿ ಮಾಡಿದ್ರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಕ್ಕೆ ಜಿಲ್ಲಾಧಿಕಾರಿ ಸಿಂಧೂ.ಬಿ.ರೂಪೇಶ್ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿತ್ತು. ಬೆದರಿಕೆ ಹಾಕಿದವರನ್ನ ಶಿಕ್ಷಿಸೋ ಬದಲು ಸರ್ಕಾರ ಡಿಸಿಯವರಿಗೆ ಶಿಕ್ಷೆ ನೀಡಿದೆ. ಇಂಥಹ ಪರಿಸ್ಥಿತಿಯಲ್ಲಿ ಅಧಿಕಾರಿಗಳಿಗೆ ಧೈರ್ಯ ತುಂಬಬೇಕಿತ್ತು. ಆದ್ರೆ ಇಲ್ಲಿನ ಬಿಜೆಪಿ ಮುಖಂಡರು ರಾಜಕೀಯ ಮೇಲಾಟವಾಡುತ್ತಿದ್ದಾರೆ.

ಕೊರೊನಾ ಜನರ ಉಸಿರುಗಟ್ಟಿಸಿದ್ರೆ, ಬಿಜೆಪಿಗರು ಅಧಿಕಾರಿಗಳ ಉಸಿರುಗಟ್ಟಿಸಿದ್ದಾರೆ. ಉತ್ತರಿಸು ಸರ್ಕಾರ, ನ್ಯಾಯ ಎಲ್ಲಿದೆ? ಎಂದು ಟ್ವಿಟರ್​ನಲ್ಲಿ ಡಿಸಿ ವರ್ಗಾವಣೆ ವಿರುದ್ಧ ಖಾದರ್ ಖಂಡನೆ ವ್ಯಕ್ತಪಡಿಸಿದ್ದಾರೆ.

Published On - 10:32 am, Wed, 29 July 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.