ಆರೋಗ್ಯ ಇಲಾಖೆ ಕಾರ್ಯಕ್ರಮದ ವೇದಿಕೆಯಲ್ಲೇ ಕುಸಿದುಬಿದ್ದ ಉ.ಕ. DC

ಕಾರವಾರ: ವಾರ್ತಾ ಇಲಾಖೆ ಕಾರ್ಯಕ್ರಮ ವೇಳೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ.ಹರೀಶ್‌ ಕುಮಾರ್‌ ಪ್ರಜ್ಞೆತಪ್ಪಿ ಬಿದ್ದಿದ್ದಾರೆ. ಕಾರವಾರ ನಗರದ ವಾರ್ತಾ ಇಲಾಖೆಯು ವಾರ್ತಾ ಸ್ಪಂದನ‌ ಎಂಬ ಕಾರ್ಯಕ್ರಮವನ್ನು ಆಯೋಜಿಸಿತ್ತು. ಆರೋಗ್ಯ ಇಲಾಖೆ ವೈದ್ಯರ ಜೊತೆ ಹಮ್ಮಿಕೊಂಡಿದ್ದ ಫೋನ್ ಇನ್ ಕಾರ್ಯಕ್ರಮದಲ್ಲಿ ಡಿಸಿ ಡಾ ಹರೀಶ್ ಕುಮಾರ್ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಕುಳಿತುಕೊಳ್ಳುವಾಗ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಕೆಲ ಸಮಯದ ನಂತರ ಸುಧಾರಿಸಿಕೊಂಡು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಅಪಾರ ಜನ ಪರ ಕಾಳಜಿಯ ಜಿಲ್ಲಾಧಿಕಾರಿ ಡಾ.ಹರೀಶ್‌ಕುಮಾರ್‌ ಅವರು ಇತ್ತೀಚೆಗೆ ಉತ್ತರ ಕನ್ನಡ […]

ಆರೋಗ್ಯ ಇಲಾಖೆ ಕಾರ್ಯಕ್ರಮದ ವೇದಿಕೆಯಲ್ಲೇ ಕುಸಿದುಬಿದ್ದ ಉ.ಕ. DC
ಸಾಧು ಶ್ರೀನಾಥ್​

Updated on: Jan 09, 2020 | 2:47 PM

ಕಾರವಾರ: ವಾರ್ತಾ ಇಲಾಖೆ ಕಾರ್ಯಕ್ರಮ ವೇಳೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ.ಹರೀಶ್‌ ಕುಮಾರ್‌ ಪ್ರಜ್ಞೆತಪ್ಪಿ ಬಿದ್ದಿದ್ದಾರೆ. ಕಾರವಾರ ನಗರದ ವಾರ್ತಾ ಇಲಾಖೆಯು ವಾರ್ತಾ ಸ್ಪಂದನ‌ ಎಂಬ ಕಾರ್ಯಕ್ರಮವನ್ನು ಆಯೋಜಿಸಿತ್ತು. ಆರೋಗ್ಯ ಇಲಾಖೆ ವೈದ್ಯರ ಜೊತೆ ಹಮ್ಮಿಕೊಂಡಿದ್ದ ಫೋನ್ ಇನ್ ಕಾರ್ಯಕ್ರಮದಲ್ಲಿ ಡಿಸಿ ಡಾ ಹರೀಶ್ ಕುಮಾರ್ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಕುಳಿತುಕೊಳ್ಳುವಾಗ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಕೆಲ ಸಮಯದ ನಂತರ ಸುಧಾರಿಸಿಕೊಂಡು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಅಪಾರ ಜನ ಪರ ಕಾಳಜಿಯ ಜಿಲ್ಲಾಧಿಕಾರಿ ಡಾ.ಹರೀಶ್‌ಕುಮಾರ್‌ ಅವರು ಇತ್ತೀಚೆಗೆ ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಮೇದನಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮವಾಸ್ತವ್ಯ ಕೈಗೊಂಡು ಗ್ರಾಮಸ್ಥರ ಅಳಲನ್ನು ಕೇಳಿದ್ದರು.

Published On - 1:44 pm, Thu, 9 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us