AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯೋಗ ನೀಡುವಲ್ಲಿ ಯುಪಿಸಿಎಲ್​ನಿಂದ ಮತ್ತೆ ಸಂತ್ರಸ್ತರಿಗೆ ಅನ್ಯಾಯ.. ಕಂಪನಿ ವಿರುದ್ಧ ಉದ್ಯೋಗ ವಂಚಿತ ಯುವಕರ ಆಕ್ರೋಶ

ಅದಾನಿ ನೇತೃತ್ವದ ಯುಪಿಸಿಎಲ್ ಕಲ್ಲಿದ್ದಲು ಆಧಾರಿತ ಉಷ್ಣ ವಿದ್ಯುತ್ ಸ್ಥಾವರ ಮತ್ತೆ ಸಂತ್ರಸ್ತರಿಗೆ ಅನ್ಯಾಯ ಮಾಡಿದೆ. ಉದ್ಯೋಗದ ಭರವಸೆ ಕೊಟ್ಟು ಭೂಸ್ವಾಧೀನ ಮಾಡಿಕೊಂಡಿದ್ದ ಕಂಪನಿ ಸ್ಥಳೀಯ ಯುವಕರಿಗೆ ವಂಚಿಸಿದೆ. ಉದ್ಯೋಗದ ಆಸೆಗೆ ಕೃಷಿ ಬಿಟ್ಟವರು ಈಗ ತಲೆ ಮೇಲೆ ಕೈಹೊತ್ತು ಕುಳಿತಿದ್ದಾರೆ.

ಉದ್ಯೋಗ ನೀಡುವಲ್ಲಿ ಯುಪಿಸಿಎಲ್​ನಿಂದ ಮತ್ತೆ ಸಂತ್ರಸ್ತರಿಗೆ ಅನ್ಯಾಯ.. ಕಂಪನಿ ವಿರುದ್ಧ ಉದ್ಯೋಗ ವಂಚಿತ ಯುವಕರ ಆಕ್ರೋಶ
ಉಡುಪಿಯ ಯುಪಿಸಿಎಲ್ ಕಲ್ಲಿದ್ದಲು ಆಧಾರಿತ ಉಷ್ಣ ವಿದ್ಯುತ್ ಸ್ಥಾವರ
ಆಯೇಷಾ ಬಾನು
|

Updated on:Jan 24, 2021 | 7:03 AM

Share

ಉಡುಪಿಯ ಯುಪಿಸಿಎಲ್ ಕಲ್ಲಿದ್ದಲು ಆಧಾರಿತ ಉಷ್ಣ ವಿದ್ಯುತ್ ಸ್ಥಾವರ ವಿವಾದಗಳ ಸುಳಿಯಲ್ಲಿ ಅಸ್ತಿತ್ವಕ್ಕೆ ಬಂದ ಕಂಪನಿ. ಈಗ ಮತ್ತೊಂದು ವಿವಾದ ಕಂಪನಿಯ ಸುತ್ತ ಸುತ್ತಿಕೊಂಡಿದೆ. ಎಲ್ಲವೂ ನಿರೀಕ್ಷೆಯಂತೆ ಆಗಿದ್ರೆ, ಅನೇಕ ಯುವಕರು ಯುಪಿಸಿಎಲ್ ಕಂಪನಿಯಲ್ಲಿ ಉದ್ಯೋಗಿಗಳಾಗಿರ್ತಿದ್ರು.

ಶೈಕ್ಷಣಿಕ ಅರ್ಹತೆಗೆ ಯೋಗ್ಯವಾದ ಉದ್ಯೋಗದ ಭರವಸೆ ಕೊಟ್ಟು ಈ ಕುಟುಂಬಗಳಿಂದ ಫಲವತ್ತಾದ ಕೃಷಿ ಭೂಮಿಯನ್ನ ಭೂಸ್ವಾಧೀನ ಮಾಡಿಕೊಂಡಿತ್ತು. ಕೃಷಿ ಭೂಮಿಯನ್ನ ಮಾರಿ ಐದು ವರ್ಷ ಕಳೆದ್ರೂ ಉದ್ಯೋಗ ಮರೀಚಿಕೆಯಾಗಿದೆ. ಬಹುತೇಕ ಯುವಕರ ವಯಸ್ಸು ಮೀರುತ್ತಾ ಬಂದಿದೆ. ಭೂ ಸ್ವಾಧೀನ ಮಾಡಿಕೊಂಡ ಎರಡೇ ವರ್ಷಗಳಲ್ಲಿ ಉದ್ಯೋಗ ನೀಡೋದಾಗಿ ಕಂಪನಿ ಹೇಳಿತ್ತು. ಐದು ವರ್ಷವಾದ್ರೂ ಕಂಪನಿ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ಇದರಿಂದ ಉದ್ಯೋಗ ವಂಚಿತ ಯುವಕರು ಆಕ್ರೋಶಗೊಂಡಿದ್ದಾರೆ.

ದೇಶದ ಪ್ರತಿಷ್ಠಿತ ಉದ್ಯಮಿ ಅದಾನಿಗೆ ಸೇರಿದ ಯುಪಿಸಿಎಲ್, ಮೊದಲನೇ ಹಂತದಲ್ಲಿ ಸಾವಿರದ ಇನ್ನೂರು ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡ್ತಿದೆ. ಎರಡನೇ ಹಂತದಲ್ಲಿ 1,600 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲು ಕೆಐಎಎಡಿಬಿ ಮೂಲಕ ಹೆಚ್ಚುವರಿ ಭೂಮಿ ವಶಕ್ಕೆ ಪಡೆದಿತ್ತು. ಈ ವೇಳೆ ಸಂತ್ರಸ್ತ ಕುಟುಂಬಗಳಿಗೆ ಉದ್ಯೋಗದ ಭರವಸೆ ನೀಡಲಾಗಿದೆ. ಐದು ವರ್ಷ ಕಳೆದರೂ ಎರಡನೇ ಹಂತದ ಯೋಜನೆಗೆ ಹಸಿರು ನಿಶಾನೆ ಸಿಕ್ಕಿಲ್ಲ. ಹೀಗಾಗಿ ಭರವಸೆ ನೀಡಿದಂತೆ ಉದ್ಯೋಗ ನೀಡಲು ಕಂಪನಿಗೆ ಸಾಧ್ಯವಾಗಿಲ್ಲ.

ಉಡುಪಿ ಜಿಲ್ಲಾಧಿಕಾರಿಗಳು ನಡೆಸಿದ ಸಂಧಾನ ಮಾತುಕತೆಯಲ್ಲಿ ಭೂಮಿ ಕಳೆದುಕೊಂಡವರಿಗೆ ಪರಿಹಾರ ಮತ್ತು ಉದ್ಯೋಗದ ಭರವಸೆ ನೀಡಲಾಗಿತ್ತು. ಭೂ ಪರಿಹಾರವೇನೋ ಸಿಕ್ಕಿದೆ, ಆದರೆ ಕೃಷಿಭೂಮಿ ಮಾರಿಕೊಂಡ ಕಾರಣ ಸಂಪಾದನೆ ಇಲ್ಲದೆ ಈ ಕುಟುಂಬಗಳು ಕಂಗಾಲಾಗಿವೆ. ಹೀಗಾಗಿ ಶೀಘ್ರವೇ ಉದ್ಯೋಗ ನೀಡಲು ಆಗ್ರಹಿಸ್ತಿದ್ದಾರೆ.

ನಿಗೂಢ ಶಬ್ದ, ಭೂ ಕಂಪನ: ವಿದ್ಯುತ್​ ಸ್ಥಾವರ, ಆಲಮಟ್ಟಿ ಡ್ಯಾಂ ನಡುವಿನ ಗ್ರಾಮಸ್ಥರು ಹೈರಾಣ

Published On - 7:01 am, Sun, 24 January 21

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್