ಕೆಲಸದಿಂದ ತೆಗೆದಿದ್ದಕ್ಕೆ ಮಾಲೀಕನ ವಿರುದ್ಧವೇ ವಾಮಾಚಾರ!

ಬೆಂಗಳೂರು: ಕೆಲಸದಿಂದ ತೆಗೆದಿದ್ದಕ್ಕೆ ಅಂಗಡಿ ಮಾಲೀಕರ ವಿರುದ್ಧವೇ ಕೆಲಸಗಾರ ವಾಮಾಚಾರ ಮಾಡಿರುವ ಘಟನೆ ಕುರುಬರಹಳ್ಳಿಯ ಸರ್ಕಲ್‌ ಬಳಿ ನಡೆದಿದೆ. ಬೆಳಗಿನ ಜಾವ ಅಂಗಡಿ ಬಳಿ ಬಂದು ಮೂಳೆ, ಕಬ್ಬಿಣದ ಮೊಳೆ, ನಿಂಬೆಹಣ್ಣು,‌ ಕರಿ ಎಳ್ಳು, ಅರಿಶಿಣ ಕುಂಕುಮ ಎರಚಿದ್ದಾರೆಂದು ಆರೋಪಿಸಲಾಗಿದೆ. ಶ್ರೀನಿವಾಸ್ ಎಂಬಾತ ಕುರುಬರಹಳ್ಳಿ ಸರ್ಕಲ್​ನ ಭುವನೇಶ್ವರಿ ಹಾರ್ಡ್​ವೇರ್​ನಲ್ಲಿ‌ ಕೆಲಸ ಮಾಡ್ತಿದ್ದ. ಇತ್ತೀಚೆಗೆ ಅಂಗಡಿ ಮಾಲೀಕ ವಿಶ್ವನಾಥ್, ಶ್ರೀನಿವಾಸ್​ನನ್ನು ಕೆಲಸದಿಂದ ತೆಗೆದಿದ್ರು. ಇದೇ ಕೋಪಕ್ಕೆ ಅಂಗಡಿ ಬಳಿ ಬಂದು ವಾಮಾಚಾರ ಮಾಡಿ ಆರೋಪಿ ಎಸ್ಕೇಪ್ ಆಗಿದ್ದಾನೆ. ಬೆಳಗ್ಗೆ […]

ಕೆಲಸದಿಂದ ತೆಗೆದಿದ್ದಕ್ಕೆ ಮಾಲೀಕನ ವಿರುದ್ಧವೇ ವಾಮಾಚಾರ!
ಸಾಧು ಶ್ರೀನಾಥ್​

Updated on: Jan 05, 2020 | 5:16 PM

ಬೆಂಗಳೂರು: ಕೆಲಸದಿಂದ ತೆಗೆದಿದ್ದಕ್ಕೆ ಅಂಗಡಿ ಮಾಲೀಕರ ವಿರುದ್ಧವೇ ಕೆಲಸಗಾರ ವಾಮಾಚಾರ ಮಾಡಿರುವ ಘಟನೆ ಕುರುಬರಹಳ್ಳಿಯ ಸರ್ಕಲ್‌ ಬಳಿ ನಡೆದಿದೆ. ಬೆಳಗಿನ ಜಾವ ಅಂಗಡಿ ಬಳಿ ಬಂದು ಮೂಳೆ, ಕಬ್ಬಿಣದ ಮೊಳೆ, ನಿಂಬೆಹಣ್ಣು,‌ ಕರಿ ಎಳ್ಳು, ಅರಿಶಿಣ ಕುಂಕುಮ ಎರಚಿದ್ದಾರೆಂದು ಆರೋಪಿಸಲಾಗಿದೆ.

ಶ್ರೀನಿವಾಸ್ ಎಂಬಾತ ಕುರುಬರಹಳ್ಳಿ ಸರ್ಕಲ್​ನ ಭುವನೇಶ್ವರಿ ಹಾರ್ಡ್​ವೇರ್​ನಲ್ಲಿ‌ ಕೆಲಸ ಮಾಡ್ತಿದ್ದ. ಇತ್ತೀಚೆಗೆ ಅಂಗಡಿ ಮಾಲೀಕ ವಿಶ್ವನಾಥ್, ಶ್ರೀನಿವಾಸ್​ನನ್ನು ಕೆಲಸದಿಂದ ತೆಗೆದಿದ್ರು. ಇದೇ ಕೋಪಕ್ಕೆ ಅಂಗಡಿ ಬಳಿ ಬಂದು ವಾಮಾಚಾರ ಮಾಡಿ ಆರೋಪಿ ಎಸ್ಕೇಪ್ ಆಗಿದ್ದಾನೆ. ಬೆಳಗ್ಗೆ ಎಂದಿನಂತೆ ಅಂಗಡಿ ತೆರೆದಾಗ ಘಟನೆ ಬೆಳಕಿಗೆ ಬಂದಿದ್ದು, ಆರೋಪಿಯ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us