AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೂಪಾಂತರಿ ಕೊರೊನಾ: ಕ್ವಾರಂಟೈನ್​ ಕೇಂದ್ರಕ್ಕೆ ಹೋಗಲು ಒಪ್ಪದ ಸಂಪರ್ಕಿತರು.. ಅಪಾರ್ಟ್​ಮೆಂಟ್​ ಸೀಲ್​ಡೌನ್​!

ಅಪಾರ್ಟ್​ಮೆಂಟ್​ ಗೇಟ್​ಗೆ ಬೀಗ ಹಾಕಲಾಗಿದ್ದು, ‘ನಾವೀಗ ಗೃಹ ಬಂಧನದಲ್ಲಿ ಇದ್ದೇವೆ..’ ಎಂದು ಭಿತ್ತಿಪತ್ರ ಅಂಟಿಸಿದ್ದಾರೆ. ಅಪಾರ್ಟ್​​ಮೆಂಟ್​ ಸಂಪರ್ಕಿಸುವ ರಸ್ತೆಯನ್ನೂ ಸಹ ಕ್ಲೋಸ್ ಮಾಡಲಾಗಿದೆ.

ರೂಪಾಂತರಿ ಕೊರೊನಾ: ಕ್ವಾರಂಟೈನ್​ ಕೇಂದ್ರಕ್ಕೆ ಹೋಗಲು ಒಪ್ಪದ ಸಂಪರ್ಕಿತರು.. ಅಪಾರ್ಟ್​ಮೆಂಟ್​ ಸೀಲ್​ಡೌನ್​!
ಅಪಾರ್ಟ್​ಮೆಂಟ್​ ನಿವಾಸಿಗಳ ಮನವೊಲಿಸುವ ಪ್ರಯತ್ನ
Lakshmi Hegde
| Edited By: |

Updated on: Dec 29, 2020 | 2:55 PM

Share

ಬೆಂಗಳೂರು: ಬೆಂಗಳೂರು ದಕ್ಷಿಣ ಭಾಗದ  ವಸಂತಪುರದಲ್ಲಿ ಖಾಸಗಿ ಅಪಾರ್ಟ್​ಮೆಂಟ್​ನಲ್ಲಿ ವಾಸವಾಗಿದ್ದ ಮೂವರಲ್ಲಿ ರೂಪಾಂತರಿ ಕೊರೊನಾ ಸೋಂಕು ಪತ್ತೆಯಾದ ಬೆನ್ನಲ್ಲೇ, ಅಲ್ಲಿನ ನಿವಾಸಿಗಳನ್ನು ಕ್ವಾರಂಟೈನ್ ಮಾಡಲು ಹೋದ ಬಿಬಿಎಂಪಿ ಅಧಿಕಾರಿಗಳಿಗೆ ನಿವಾಸಿಗಳು ಶಾಕ್​ ನೀಡಿದ್ದಾರೆ. ನಾವು ಯಾವ ಕಾರಣಕ್ಕೂ ಕ್ವಾರಂಟೈನ್​ ಕೇಂದ್ರಕ್ಕೆ ಬರೋದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಇದು 25 ಫ್ಲಾಟ್​ಗಳಿರುವ ಅಪಾರ್ಟ್​ಮೆಂಟ್ ಆಗಿದ್ದು, ಇಲ್ಲಿನ ನಿವಾಸಿಗಳಲ್ಲಿ ಬಹುತೇಕರು ಐಟಿ-ಬಿಟಿ ಉದ್ಯೋಗಿಗಳು. ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ ಇಬ್ಬರು, ದ್ವಿತೀಯ ಸಂಪರ್ಕದಲ್ಲಿ 35 ಮಂದಿ ಇರುವುದು ಗೊತ್ತಾಗಿದೆ. ಸುಮಾರು 40 ಮಂದಿಯನ್ನು ಅಪಾರ್ಟ್​ಮೆಂಟ್​ನಿಂದ ಶಿಫ್ಟ್​ ಮಾಡಿ, ಸಾಂಸ್ಥಿಕ ಕ್ವಾರಂಟೈನ್ ಮಾಡುವ ಉದ್ದೇಶದಿಂದ ಇಲ್ಲಿಗೆ ಬಿಬಿಎಂಪಿ ಅಧಿಕಾರಿಗಳು ಆಗಮಿಸಿದ್ದರು. ಆದರೆ ನಿವಾಸಿಗಳು ಮಾತ್ರ ಯಾವುದೇ ಒತ್ತಾಯಕ್ಕೂ ಜಗ್ಗಲಿಲ್ಲ.

ನೀವು ಬೇಕಿದ್ದರೆ ಅಪಾರ್ಟ್​ಮೆಂಟ್​ನ್ನು ಸೀಲ್​ಡೌನ್ ಮಾಡಿ.. ನಾವು ಇಲ್ಲೇ ಇರುತ್ತೇವೆ. ನೀವು ಹೋಟೆಲ್​ಗಳಿಗೆ ಕರೆದುಕೊಂಡು ಹೋಗುತ್ತೀರಿ.. ಆದರೆ ಅಲ್ಲಿನ ಪರಿಸ್ಥಿತಿ ಏನು ಎಂಬುದು ನಮಗೆ ಗೊತ್ತು. ಹಿಂದೆಲ್ಲ ಕ್ವಾರಂಟೈನ್​ ಆಗಿದ್ದವರ ಪರಿಸ್ಥಿತಿ ಹೇಗಿತ್ತು ಎಂಬುದೂ ನಮಗೆ ಗೊತ್ತು. ನೀವು ಕನಿಷ್ಠ ಸೌಲಭ್ಯವನ್ನೂ ನಮಗೆ ಕೊಡೋದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರಂತೂ ನಮಗೆ ಚಿಕ್ಕಮಕ್ಕಳಿದ್ದಾರೆ. ಅವರನ್ನೆಲ್ಲ ಕರೆದುಕೊಂಡು ಬರಲು ಸಾಧ್ಯವಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಸರ್ಕಾರದ ಹೊಸ ನಿಯಮದಂತೆ ಕ್ವಾರಂಟೈನ್​ ಮಾಡಬೇಕು ಎಂದು ಆರೋಗ್ಯ ಸಿಬ್ಬಂದಿ ಎಷ್ಟೇ  ಹೇಳಿದರೂ ಅಪಾರ್ಟ್​ಮೆಂಟ್ ನಿವಾಸಿಗಳು ಮಾತ್ರ ಅಪಾರ್ಟ್​ಮೆಂಟ್​ ಬಿಟ್ಟು ಕದಲುತ್ತಿಲ್ಲ.

ಸೀಲ್​ಡೌನ್​ಗೆ ನಿರ್ಧಾರ ಕೊನೆಗೂ ಆರೋಗ್ಯ ಸಿಬ್ಬಂದಿಯೇ ಸೋಲಬೇಕಾಯಿತು. ಇಡೀ ಅಪಾರ್ಟ್​ಮೆಂಟ್​ನ್ನು ಸೀಲ್​ಡೌನ್​ ಮಾಡಿ, ನಿವಾಸಿಗಳು ಅಲ್ಲಿಯೇ ಉಳಿಯುವಂತೆ ಮಾಡಿದ್ದಾರೆ. 14 ದಿನಗಳವರೆಗೆ ವಸಂತನಗರದ ಅಪಾರ್ಟ್​ಮೆಂಟ್​ ಸೀಲ್​​ಡೌನ್​ ಆಗಲಿದ್ದು, ಅದನ್ನು ಮತ್ತೂ 14 ದಿನಗಳ ಕಾಲ ವಿಸ್ತರಿಸುವ ಬಗ್ಗೆ ನಂತರ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ. ಅಪಾರ್ಟ್​ಮೆಂಟ್​ ಗೇಟ್​ಗೆ ಬೀಗ ಹಾಕಲಾಗಿದ್ದು, ‘ನಾವೀಗ ಗೃಹ ಬಂಧನದಲ್ಲಿ ಇದ್ದೇವೆ..’ ಎಂದು ಭಿತ್ತಿಪತ್ರ ಅಂಟಿಸಿದ್ದಾರೆ. ಅಪಾರ್ಟ್​​ಮೆಂಟ್​ ಸಂಪರ್ಕಿಸುವ ರಸ್ತೆಯನ್ನೂ ಸಹ ಕ್ಲೋಸ್ ಮಾಡಲಾಗಿದೆ.

ಅಪಾರ್ಟ್​ಮೆಂಟ್ ಬಳಿ ಕಂಡುಬಂದ ದೃಶ್ಯಗಳು

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್