AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೂಪಾಂತರಿ ಕೊರೊನಾ: ಕ್ವಾರಂಟೈನ್​ ಕೇಂದ್ರಕ್ಕೆ ಹೋಗಲು ಒಪ್ಪದ ಸಂಪರ್ಕಿತರು.. ಅಪಾರ್ಟ್​ಮೆಂಟ್​ ಸೀಲ್​ಡೌನ್​!

ಅಪಾರ್ಟ್​ಮೆಂಟ್​ ಗೇಟ್​ಗೆ ಬೀಗ ಹಾಕಲಾಗಿದ್ದು, ‘ನಾವೀಗ ಗೃಹ ಬಂಧನದಲ್ಲಿ ಇದ್ದೇವೆ..’ ಎಂದು ಭಿತ್ತಿಪತ್ರ ಅಂಟಿಸಿದ್ದಾರೆ. ಅಪಾರ್ಟ್​​ಮೆಂಟ್​ ಸಂಪರ್ಕಿಸುವ ರಸ್ತೆಯನ್ನೂ ಸಹ ಕ್ಲೋಸ್ ಮಾಡಲಾಗಿದೆ.

ರೂಪಾಂತರಿ ಕೊರೊನಾ: ಕ್ವಾರಂಟೈನ್​ ಕೇಂದ್ರಕ್ಕೆ ಹೋಗಲು ಒಪ್ಪದ ಸಂಪರ್ಕಿತರು.. ಅಪಾರ್ಟ್​ಮೆಂಟ್​ ಸೀಲ್​ಡೌನ್​!
ಅಪಾರ್ಟ್​ಮೆಂಟ್​ ನಿವಾಸಿಗಳ ಮನವೊಲಿಸುವ ಪ್ರಯತ್ನ
Lakshmi Hegde
| Edited By: ಸಾಧು ಶ್ರೀನಾಥ್​|

Updated on: Dec 29, 2020 | 2:55 PM

Share

ಬೆಂಗಳೂರು: ಬೆಂಗಳೂರು ದಕ್ಷಿಣ ಭಾಗದ  ವಸಂತಪುರದಲ್ಲಿ ಖಾಸಗಿ ಅಪಾರ್ಟ್​ಮೆಂಟ್​ನಲ್ಲಿ ವಾಸವಾಗಿದ್ದ ಮೂವರಲ್ಲಿ ರೂಪಾಂತರಿ ಕೊರೊನಾ ಸೋಂಕು ಪತ್ತೆಯಾದ ಬೆನ್ನಲ್ಲೇ, ಅಲ್ಲಿನ ನಿವಾಸಿಗಳನ್ನು ಕ್ವಾರಂಟೈನ್ ಮಾಡಲು ಹೋದ ಬಿಬಿಎಂಪಿ ಅಧಿಕಾರಿಗಳಿಗೆ ನಿವಾಸಿಗಳು ಶಾಕ್​ ನೀಡಿದ್ದಾರೆ. ನಾವು ಯಾವ ಕಾರಣಕ್ಕೂ ಕ್ವಾರಂಟೈನ್​ ಕೇಂದ್ರಕ್ಕೆ ಬರೋದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಇದು 25 ಫ್ಲಾಟ್​ಗಳಿರುವ ಅಪಾರ್ಟ್​ಮೆಂಟ್ ಆಗಿದ್ದು, ಇಲ್ಲಿನ ನಿವಾಸಿಗಳಲ್ಲಿ ಬಹುತೇಕರು ಐಟಿ-ಬಿಟಿ ಉದ್ಯೋಗಿಗಳು. ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ ಇಬ್ಬರು, ದ್ವಿತೀಯ ಸಂಪರ್ಕದಲ್ಲಿ 35 ಮಂದಿ ಇರುವುದು ಗೊತ್ತಾಗಿದೆ. ಸುಮಾರು 40 ಮಂದಿಯನ್ನು ಅಪಾರ್ಟ್​ಮೆಂಟ್​ನಿಂದ ಶಿಫ್ಟ್​ ಮಾಡಿ, ಸಾಂಸ್ಥಿಕ ಕ್ವಾರಂಟೈನ್ ಮಾಡುವ ಉದ್ದೇಶದಿಂದ ಇಲ್ಲಿಗೆ ಬಿಬಿಎಂಪಿ ಅಧಿಕಾರಿಗಳು ಆಗಮಿಸಿದ್ದರು. ಆದರೆ ನಿವಾಸಿಗಳು ಮಾತ್ರ ಯಾವುದೇ ಒತ್ತಾಯಕ್ಕೂ ಜಗ್ಗಲಿಲ್ಲ.

ನೀವು ಬೇಕಿದ್ದರೆ ಅಪಾರ್ಟ್​ಮೆಂಟ್​ನ್ನು ಸೀಲ್​ಡೌನ್ ಮಾಡಿ.. ನಾವು ಇಲ್ಲೇ ಇರುತ್ತೇವೆ. ನೀವು ಹೋಟೆಲ್​ಗಳಿಗೆ ಕರೆದುಕೊಂಡು ಹೋಗುತ್ತೀರಿ.. ಆದರೆ ಅಲ್ಲಿನ ಪರಿಸ್ಥಿತಿ ಏನು ಎಂಬುದು ನಮಗೆ ಗೊತ್ತು. ಹಿಂದೆಲ್ಲ ಕ್ವಾರಂಟೈನ್​ ಆಗಿದ್ದವರ ಪರಿಸ್ಥಿತಿ ಹೇಗಿತ್ತು ಎಂಬುದೂ ನಮಗೆ ಗೊತ್ತು. ನೀವು ಕನಿಷ್ಠ ಸೌಲಭ್ಯವನ್ನೂ ನಮಗೆ ಕೊಡೋದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರಂತೂ ನಮಗೆ ಚಿಕ್ಕಮಕ್ಕಳಿದ್ದಾರೆ. ಅವರನ್ನೆಲ್ಲ ಕರೆದುಕೊಂಡು ಬರಲು ಸಾಧ್ಯವಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಸರ್ಕಾರದ ಹೊಸ ನಿಯಮದಂತೆ ಕ್ವಾರಂಟೈನ್​ ಮಾಡಬೇಕು ಎಂದು ಆರೋಗ್ಯ ಸಿಬ್ಬಂದಿ ಎಷ್ಟೇ  ಹೇಳಿದರೂ ಅಪಾರ್ಟ್​ಮೆಂಟ್ ನಿವಾಸಿಗಳು ಮಾತ್ರ ಅಪಾರ್ಟ್​ಮೆಂಟ್​ ಬಿಟ್ಟು ಕದಲುತ್ತಿಲ್ಲ.

ಸೀಲ್​ಡೌನ್​ಗೆ ನಿರ್ಧಾರ ಕೊನೆಗೂ ಆರೋಗ್ಯ ಸಿಬ್ಬಂದಿಯೇ ಸೋಲಬೇಕಾಯಿತು. ಇಡೀ ಅಪಾರ್ಟ್​ಮೆಂಟ್​ನ್ನು ಸೀಲ್​ಡೌನ್​ ಮಾಡಿ, ನಿವಾಸಿಗಳು ಅಲ್ಲಿಯೇ ಉಳಿಯುವಂತೆ ಮಾಡಿದ್ದಾರೆ. 14 ದಿನಗಳವರೆಗೆ ವಸಂತನಗರದ ಅಪಾರ್ಟ್​ಮೆಂಟ್​ ಸೀಲ್​​ಡೌನ್​ ಆಗಲಿದ್ದು, ಅದನ್ನು ಮತ್ತೂ 14 ದಿನಗಳ ಕಾಲ ವಿಸ್ತರಿಸುವ ಬಗ್ಗೆ ನಂತರ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ. ಅಪಾರ್ಟ್​ಮೆಂಟ್​ ಗೇಟ್​ಗೆ ಬೀಗ ಹಾಕಲಾಗಿದ್ದು, ‘ನಾವೀಗ ಗೃಹ ಬಂಧನದಲ್ಲಿ ಇದ್ದೇವೆ..’ ಎಂದು ಭಿತ್ತಿಪತ್ರ ಅಂಟಿಸಿದ್ದಾರೆ. ಅಪಾರ್ಟ್​​ಮೆಂಟ್​ ಸಂಪರ್ಕಿಸುವ ರಸ್ತೆಯನ್ನೂ ಸಹ ಕ್ಲೋಸ್ ಮಾಡಲಾಗಿದೆ.

ಅಪಾರ್ಟ್​ಮೆಂಟ್ ಬಳಿ ಕಂಡುಬಂದ ದೃಶ್ಯಗಳು

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು