AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೂಪಾಂತರಿ ಕೊರೊನಾ: ಕ್ವಾರಂಟೈನ್​ ಕೇಂದ್ರಕ್ಕೆ ಹೋಗಲು ಒಪ್ಪದ ಸಂಪರ್ಕಿತರು.. ಅಪಾರ್ಟ್​ಮೆಂಟ್​ ಸೀಲ್​ಡೌನ್​!

ಅಪಾರ್ಟ್​ಮೆಂಟ್​ ಗೇಟ್​ಗೆ ಬೀಗ ಹಾಕಲಾಗಿದ್ದು, ‘ನಾವೀಗ ಗೃಹ ಬಂಧನದಲ್ಲಿ ಇದ್ದೇವೆ..’ ಎಂದು ಭಿತ್ತಿಪತ್ರ ಅಂಟಿಸಿದ್ದಾರೆ. ಅಪಾರ್ಟ್​​ಮೆಂಟ್​ ಸಂಪರ್ಕಿಸುವ ರಸ್ತೆಯನ್ನೂ ಸಹ ಕ್ಲೋಸ್ ಮಾಡಲಾಗಿದೆ.

ರೂಪಾಂತರಿ ಕೊರೊನಾ: ಕ್ವಾರಂಟೈನ್​ ಕೇಂದ್ರಕ್ಕೆ ಹೋಗಲು ಒಪ್ಪದ ಸಂಪರ್ಕಿತರು.. ಅಪಾರ್ಟ್​ಮೆಂಟ್​ ಸೀಲ್​ಡೌನ್​!
ಅಪಾರ್ಟ್​ಮೆಂಟ್​ ನಿವಾಸಿಗಳ ಮನವೊಲಿಸುವ ಪ್ರಯತ್ನ
Lakshmi Hegde
| Edited By: ಸಾಧು ಶ್ರೀನಾಥ್​|

Updated on: Dec 29, 2020 | 2:55 PM

Share

ಬೆಂಗಳೂರು: ಬೆಂಗಳೂರು ದಕ್ಷಿಣ ಭಾಗದ  ವಸಂತಪುರದಲ್ಲಿ ಖಾಸಗಿ ಅಪಾರ್ಟ್​ಮೆಂಟ್​ನಲ್ಲಿ ವಾಸವಾಗಿದ್ದ ಮೂವರಲ್ಲಿ ರೂಪಾಂತರಿ ಕೊರೊನಾ ಸೋಂಕು ಪತ್ತೆಯಾದ ಬೆನ್ನಲ್ಲೇ, ಅಲ್ಲಿನ ನಿವಾಸಿಗಳನ್ನು ಕ್ವಾರಂಟೈನ್ ಮಾಡಲು ಹೋದ ಬಿಬಿಎಂಪಿ ಅಧಿಕಾರಿಗಳಿಗೆ ನಿವಾಸಿಗಳು ಶಾಕ್​ ನೀಡಿದ್ದಾರೆ. ನಾವು ಯಾವ ಕಾರಣಕ್ಕೂ ಕ್ವಾರಂಟೈನ್​ ಕೇಂದ್ರಕ್ಕೆ ಬರೋದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಇದು 25 ಫ್ಲಾಟ್​ಗಳಿರುವ ಅಪಾರ್ಟ್​ಮೆಂಟ್ ಆಗಿದ್ದು, ಇಲ್ಲಿನ ನಿವಾಸಿಗಳಲ್ಲಿ ಬಹುತೇಕರು ಐಟಿ-ಬಿಟಿ ಉದ್ಯೋಗಿಗಳು. ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ ಇಬ್ಬರು, ದ್ವಿತೀಯ ಸಂಪರ್ಕದಲ್ಲಿ 35 ಮಂದಿ ಇರುವುದು ಗೊತ್ತಾಗಿದೆ. ಸುಮಾರು 40 ಮಂದಿಯನ್ನು ಅಪಾರ್ಟ್​ಮೆಂಟ್​ನಿಂದ ಶಿಫ್ಟ್​ ಮಾಡಿ, ಸಾಂಸ್ಥಿಕ ಕ್ವಾರಂಟೈನ್ ಮಾಡುವ ಉದ್ದೇಶದಿಂದ ಇಲ್ಲಿಗೆ ಬಿಬಿಎಂಪಿ ಅಧಿಕಾರಿಗಳು ಆಗಮಿಸಿದ್ದರು. ಆದರೆ ನಿವಾಸಿಗಳು ಮಾತ್ರ ಯಾವುದೇ ಒತ್ತಾಯಕ್ಕೂ ಜಗ್ಗಲಿಲ್ಲ.

ನೀವು ಬೇಕಿದ್ದರೆ ಅಪಾರ್ಟ್​ಮೆಂಟ್​ನ್ನು ಸೀಲ್​ಡೌನ್ ಮಾಡಿ.. ನಾವು ಇಲ್ಲೇ ಇರುತ್ತೇವೆ. ನೀವು ಹೋಟೆಲ್​ಗಳಿಗೆ ಕರೆದುಕೊಂಡು ಹೋಗುತ್ತೀರಿ.. ಆದರೆ ಅಲ್ಲಿನ ಪರಿಸ್ಥಿತಿ ಏನು ಎಂಬುದು ನಮಗೆ ಗೊತ್ತು. ಹಿಂದೆಲ್ಲ ಕ್ವಾರಂಟೈನ್​ ಆಗಿದ್ದವರ ಪರಿಸ್ಥಿತಿ ಹೇಗಿತ್ತು ಎಂಬುದೂ ನಮಗೆ ಗೊತ್ತು. ನೀವು ಕನಿಷ್ಠ ಸೌಲಭ್ಯವನ್ನೂ ನಮಗೆ ಕೊಡೋದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರಂತೂ ನಮಗೆ ಚಿಕ್ಕಮಕ್ಕಳಿದ್ದಾರೆ. ಅವರನ್ನೆಲ್ಲ ಕರೆದುಕೊಂಡು ಬರಲು ಸಾಧ್ಯವಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಸರ್ಕಾರದ ಹೊಸ ನಿಯಮದಂತೆ ಕ್ವಾರಂಟೈನ್​ ಮಾಡಬೇಕು ಎಂದು ಆರೋಗ್ಯ ಸಿಬ್ಬಂದಿ ಎಷ್ಟೇ  ಹೇಳಿದರೂ ಅಪಾರ್ಟ್​ಮೆಂಟ್ ನಿವಾಸಿಗಳು ಮಾತ್ರ ಅಪಾರ್ಟ್​ಮೆಂಟ್​ ಬಿಟ್ಟು ಕದಲುತ್ತಿಲ್ಲ.

ಸೀಲ್​ಡೌನ್​ಗೆ ನಿರ್ಧಾರ ಕೊನೆಗೂ ಆರೋಗ್ಯ ಸಿಬ್ಬಂದಿಯೇ ಸೋಲಬೇಕಾಯಿತು. ಇಡೀ ಅಪಾರ್ಟ್​ಮೆಂಟ್​ನ್ನು ಸೀಲ್​ಡೌನ್​ ಮಾಡಿ, ನಿವಾಸಿಗಳು ಅಲ್ಲಿಯೇ ಉಳಿಯುವಂತೆ ಮಾಡಿದ್ದಾರೆ. 14 ದಿನಗಳವರೆಗೆ ವಸಂತನಗರದ ಅಪಾರ್ಟ್​ಮೆಂಟ್​ ಸೀಲ್​​ಡೌನ್​ ಆಗಲಿದ್ದು, ಅದನ್ನು ಮತ್ತೂ 14 ದಿನಗಳ ಕಾಲ ವಿಸ್ತರಿಸುವ ಬಗ್ಗೆ ನಂತರ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ. ಅಪಾರ್ಟ್​ಮೆಂಟ್​ ಗೇಟ್​ಗೆ ಬೀಗ ಹಾಕಲಾಗಿದ್ದು, ‘ನಾವೀಗ ಗೃಹ ಬಂಧನದಲ್ಲಿ ಇದ್ದೇವೆ..’ ಎಂದು ಭಿತ್ತಿಪತ್ರ ಅಂಟಿಸಿದ್ದಾರೆ. ಅಪಾರ್ಟ್​​ಮೆಂಟ್​ ಸಂಪರ್ಕಿಸುವ ರಸ್ತೆಯನ್ನೂ ಸಹ ಕ್ಲೋಸ್ ಮಾಡಲಾಗಿದೆ.

ಅಪಾರ್ಟ್​ಮೆಂಟ್ ಬಳಿ ಕಂಡುಬಂದ ದೃಶ್ಯಗಳು

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ