ಏರ್ಶೋನಲ್ಲಿ ಕಣ್ಮರೆಯಾದ ಕನ್ನಡ.. ನಿಮಗೆ ಮಾನ ಮರ್ಯಾದೆ ಯಾವುದೂ ಇಲ್ಲ ಎಂದು ಆಕ್ರೋಶ ಹೊರ ಹಾಕಿದ ವಾಟಾಳ್
Vatal Nagaraj on Aero India 2021.. ಏರೋ ಇಂಡಿಯಾ 2021 ಏರ್ಶೋನಲ್ಲಿ ಕನ್ನಡ ಕಣ್ಮರೆ ಹಿನ್ನೆಲೆಯಲ್ಲಿ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ವಿರುದ್ಧ ವಾಟಾಳ್ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ. ವೈಮಾನಿಕ ಪ್ರದರ್ಶನ ಬೇಡವೇ ಬೇಡ ಎಂದು ಸಿಡಿದೆದ್ದಿದ್ದಾರೆ.

ವಾಟಾಳ್ ನಾಗರಾಜ್
ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೋ ಇಂಡಿಯಾ 2021 ಏರ್ಶೋನಲ್ಲಿ ಕನ್ನಡ ಕಣ್ಮರೆ ಹಿನ್ನೆಲೆಯಲ್ಲಿ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ವಿರುದ್ಧ ವಾಟಾಳ್ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ. ವೈಮಾನಿಕ ಪ್ರದರ್ಶನ ಬೇಡವೇ ಬೇಡ ಎಂದು ಸಿಡಿದೆದ್ದಿದ್ದಾರೆ.
ಏರ್ ಶೋನಲ್ಲಿ ಒಂದು ಅಕ್ಷರ ಕನ್ನಡ ಕಾಣಿಸುತ್ತಿಲ್ಲ. ಕೇವಲ ಹಿಂದಿ, ಇಂಗ್ಲಿಷ್ ರಾರಾಜಿಸುತ್ತಿದೆ. ಇದು ಈ ನಾಡಿಗೆ ಮಾಡಿದ ದ್ರೋಹ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂಗ್ಲಿಷ್ನಲ್ಲಿ ಭಾಷಣ ಮಾಡಿದ್ದಾರೆ. ನಿಮಗೆ ಮಾನ ಮರ್ಯಾದೆ ಯಾವುದೂ ಇಲ್ಲ. ಇಂಗ್ಲಿಷ್ನಲ್ಲಿ ಭಾಷಣ ಮಾಡಿ ಕನ್ನಡಕ್ಕೆ ಅಗೌರವ ತೊರಿದ್ದೀರಿ. ಕನ್ನಡವೇ ಇಲ್ಲದ ವೈಮಾನಿಕ ಪ್ರದರ್ಶನ ಯಾರಿಗೆ ಬೇಕು ಎಂದು ಬೆಂಗಳೂರಿನಲ್ಲಿ ಸರ್ಕಾರದ ವಿರುದ್ಧ ವಾಟಾಳ್ ನಾಗರಾಜ್ ಆಕ್ರೋಶ ಹೊರ ಹಾಕಿದ್ದಾರೆ.
Follow Us
