AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಮೈಸೂರು ದಸರಾ ಅಲ್ಲ, ಯಡಿಯೂರಪ್ಪ ದಸರಾ -BSY ವಿರುದ್ಧ ವಾಟಾಳ್ ಕಿಡಿ

ಮೈಸೂರು: ಇದು ಮೈಸೂರು ದಸರಾ ಅಲ್ಲ, ಯಡಿಯೂರಪ್ಪ ದಸರಾ. ಅರಮನೆಯಲ್ಲಿ ಮಾತ್ರ ಮೆರವಣಿಗೆ ಮಾಡ್ತಿದ್ದಾರೆ. ಜಂಬೂ ಸವಾರಿ, ಚಾಮುಂಡೇಶ್ವರಿ ದೇವಿಯನ್ನು ಅರಮನೆಯೊಳಗೆ ಬಂಧಿಸಿದ್ದಾರೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಅರಮನೆ ಪ್ರವೇಶಕ್ಕೂ ಮುಂದಾಗಿದ್ದರು. ಸದ್ಯ ಪೊಲೀಸರು ವಾಟಾಳ್ ನಾಗರಾಜ್​ನನ್ನು ಬಂಧಿಸಿದ್ದಾರೆ. ಮೈಸೂರಿನ ದೊಡ್ಡ ಗಡಿಯಾರ ರಸ್ತೆಯಲ್ಲಿ ಇಂದು ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ಅದ್ದೂರಿ ದಸರಾ ಆಚರಣೆಯಾಗಬೇಕೆಂದು ಆಗ್ರಹಿಸಿದರು. ತಮ್ಮ ಆಗ್ರಹಕ್ಕೆ ಮಣಿಯದಿದ್ದರೆ ತಾವೇ ಸಾರೋಟಿನಲ್ಲಿ ಚಾಮುಂಡಿ […]

ಇದು ಮೈಸೂರು ದಸರಾ ಅಲ್ಲ, ಯಡಿಯೂರಪ್ಪ ದಸರಾ -BSY ವಿರುದ್ಧ ವಾಟಾಳ್ ಕಿಡಿ
ಆಯೇಷಾ ಬಾನು
|

Updated on:Oct 26, 2020 | 1:11 PM

Share

ಮೈಸೂರು: ಇದು ಮೈಸೂರು ದಸರಾ ಅಲ್ಲ, ಯಡಿಯೂರಪ್ಪ ದಸರಾ. ಅರಮನೆಯಲ್ಲಿ ಮಾತ್ರ ಮೆರವಣಿಗೆ ಮಾಡ್ತಿದ್ದಾರೆ. ಜಂಬೂ ಸವಾರಿ, ಚಾಮುಂಡೇಶ್ವರಿ ದೇವಿಯನ್ನು ಅರಮನೆಯೊಳಗೆ ಬಂಧಿಸಿದ್ದಾರೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಅರಮನೆ ಪ್ರವೇಶಕ್ಕೂ ಮುಂದಾಗಿದ್ದರು. ಸದ್ಯ ಪೊಲೀಸರು ವಾಟಾಳ್ ನಾಗರಾಜ್​ನನ್ನು ಬಂಧಿಸಿದ್ದಾರೆ.

ಮೈಸೂರಿನ ದೊಡ್ಡ ಗಡಿಯಾರ ರಸ್ತೆಯಲ್ಲಿ ಇಂದು ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ಅದ್ದೂರಿ ದಸರಾ ಆಚರಣೆಯಾಗಬೇಕೆಂದು ಆಗ್ರಹಿಸಿದರು. ತಮ್ಮ ಆಗ್ರಹಕ್ಕೆ ಮಣಿಯದಿದ್ದರೆ ತಾವೇ ಸಾರೋಟಿನಲ್ಲಿ ಚಾಮುಂಡಿ ಮೆರವಣಿಗೆ ಮಾಡೋದಾಗಿ ಎಚ್ಚರಿಕೆ ನೀಡಿದ್ರು. ಇದು ಯಡಿಯೂರಪ್ಪ ದಸರಾ. ಅರಮನೆಯಲ್ಲಿ ಮಾತ್ರ ಮೆರವಣಿಗೆ ಮಾಡ್ತಿದ್ದಾರೆ. ಜಂಬೂ ಸವಾರಿ, ಚಾಮುಂಡೇಶ್ವರಿ ದೇವಿಯನ್ನು ಅರಮನೆಯೊಳಗೆ ಬಂಧಿಸಿದ್ದಾರೆ. ಮೈಸೂರಿನ ಪರಂಪರೆ ಗೌರವ ಉಳಿಸಬೇಕು.

ಯಡಿಯೂರಪ್ಪ ಜೈಲಿಗೆ ಹೋಗಿ ಬಂದ್ರು ಬುದ್ದಿ ಬಂದಿಲ್ಲ. ದರ್ಪ, ದುರಾಹಂಕಾರ, ದ್ವೇಷ ಬಿಡಿ, ಚಾಡಿ ಮಾತು ಕೇಳಬೇಡಿ. ನೀವು ಹಿಟ್ಲರ್ ಅಲ್ಲ, ಹಿಟ್ಲರ್ ಬಗ್ಗೆ ಇತ್ತೀಚೆಗೆ ಒಳ್ಳೆಯ ಮಾತು ಕೇಳಿ ಬಂದಿದೆ. ನಾನು ಪೊಲೀಸ್ ಪರ, ನಿಮ್ಮ ತರಹ ಅಲ್ಲ. ಪೊಲೀಸ್ ಬಗ್ಗೆ ಗೌರವ, ಪ್ರೀತಿ ಇದ್ರೆ ಔರದ್ಕರ್ ವರದಿ ಜಾರಿ ಮಾಡಿ. ನೀವು ಅಧಿಕಾರದಿಂದ ಕೇಳಗಿಳಿದ್ರೆ ಬೀದಿ ನಾಯಿ ಕೂಡ ನಿಮ್ಮನ್ನು ಕೇಳಲ್ಲ ಎಂದು ಸಿಎಂ ಯಡಿಯೂರಪ್ಪ ವಿರುದ್ಧ ವಾಟಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 12:49 pm, Mon, 26 October 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ