AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಮೈಸೂರು ದಸರಾ ಅಲ್ಲ, ಯಡಿಯೂರಪ್ಪ ದಸರಾ -BSY ವಿರುದ್ಧ ವಾಟಾಳ್ ಕಿಡಿ

ಮೈಸೂರು: ಇದು ಮೈಸೂರು ದಸರಾ ಅಲ್ಲ, ಯಡಿಯೂರಪ್ಪ ದಸರಾ. ಅರಮನೆಯಲ್ಲಿ ಮಾತ್ರ ಮೆರವಣಿಗೆ ಮಾಡ್ತಿದ್ದಾರೆ. ಜಂಬೂ ಸವಾರಿ, ಚಾಮುಂಡೇಶ್ವರಿ ದೇವಿಯನ್ನು ಅರಮನೆಯೊಳಗೆ ಬಂಧಿಸಿದ್ದಾರೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಅರಮನೆ ಪ್ರವೇಶಕ್ಕೂ ಮುಂದಾಗಿದ್ದರು. ಸದ್ಯ ಪೊಲೀಸರು ವಾಟಾಳ್ ನಾಗರಾಜ್​ನನ್ನು ಬಂಧಿಸಿದ್ದಾರೆ. ಮೈಸೂರಿನ ದೊಡ್ಡ ಗಡಿಯಾರ ರಸ್ತೆಯಲ್ಲಿ ಇಂದು ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ಅದ್ದೂರಿ ದಸರಾ ಆಚರಣೆಯಾಗಬೇಕೆಂದು ಆಗ್ರಹಿಸಿದರು. ತಮ್ಮ ಆಗ್ರಹಕ್ಕೆ ಮಣಿಯದಿದ್ದರೆ ತಾವೇ ಸಾರೋಟಿನಲ್ಲಿ ಚಾಮುಂಡಿ […]

ಇದು ಮೈಸೂರು ದಸರಾ ಅಲ್ಲ, ಯಡಿಯೂರಪ್ಪ ದಸರಾ -BSY ವಿರುದ್ಧ ವಾಟಾಳ್ ಕಿಡಿ
ಆಯೇಷಾ ಬಾನು
ಆಯೇಷಾ ಬಾನು|

Updated on:Oct 26, 2020 | 1:11 PM

Share

ಮೈಸೂರು: ಇದು ಮೈಸೂರು ದಸರಾ ಅಲ್ಲ, ಯಡಿಯೂರಪ್ಪ ದಸರಾ. ಅರಮನೆಯಲ್ಲಿ ಮಾತ್ರ ಮೆರವಣಿಗೆ ಮಾಡ್ತಿದ್ದಾರೆ. ಜಂಬೂ ಸವಾರಿ, ಚಾಮುಂಡೇಶ್ವರಿ ದೇವಿಯನ್ನು ಅರಮನೆಯೊಳಗೆ ಬಂಧಿಸಿದ್ದಾರೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಅರಮನೆ ಪ್ರವೇಶಕ್ಕೂ ಮುಂದಾಗಿದ್ದರು. ಸದ್ಯ ಪೊಲೀಸರು ವಾಟಾಳ್ ನಾಗರಾಜ್​ನನ್ನು ಬಂಧಿಸಿದ್ದಾರೆ.

ಮೈಸೂರಿನ ದೊಡ್ಡ ಗಡಿಯಾರ ರಸ್ತೆಯಲ್ಲಿ ಇಂದು ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ಅದ್ದೂರಿ ದಸರಾ ಆಚರಣೆಯಾಗಬೇಕೆಂದು ಆಗ್ರಹಿಸಿದರು. ತಮ್ಮ ಆಗ್ರಹಕ್ಕೆ ಮಣಿಯದಿದ್ದರೆ ತಾವೇ ಸಾರೋಟಿನಲ್ಲಿ ಚಾಮುಂಡಿ ಮೆರವಣಿಗೆ ಮಾಡೋದಾಗಿ ಎಚ್ಚರಿಕೆ ನೀಡಿದ್ರು. ಇದು ಯಡಿಯೂರಪ್ಪ ದಸರಾ. ಅರಮನೆಯಲ್ಲಿ ಮಾತ್ರ ಮೆರವಣಿಗೆ ಮಾಡ್ತಿದ್ದಾರೆ. ಜಂಬೂ ಸವಾರಿ, ಚಾಮುಂಡೇಶ್ವರಿ ದೇವಿಯನ್ನು ಅರಮನೆಯೊಳಗೆ ಬಂಧಿಸಿದ್ದಾರೆ. ಮೈಸೂರಿನ ಪರಂಪರೆ ಗೌರವ ಉಳಿಸಬೇಕು.

ಯಡಿಯೂರಪ್ಪ ಜೈಲಿಗೆ ಹೋಗಿ ಬಂದ್ರು ಬುದ್ದಿ ಬಂದಿಲ್ಲ. ದರ್ಪ, ದುರಾಹಂಕಾರ, ದ್ವೇಷ ಬಿಡಿ, ಚಾಡಿ ಮಾತು ಕೇಳಬೇಡಿ. ನೀವು ಹಿಟ್ಲರ್ ಅಲ್ಲ, ಹಿಟ್ಲರ್ ಬಗ್ಗೆ ಇತ್ತೀಚೆಗೆ ಒಳ್ಳೆಯ ಮಾತು ಕೇಳಿ ಬಂದಿದೆ. ನಾನು ಪೊಲೀಸ್ ಪರ, ನಿಮ್ಮ ತರಹ ಅಲ್ಲ. ಪೊಲೀಸ್ ಬಗ್ಗೆ ಗೌರವ, ಪ್ರೀತಿ ಇದ್ರೆ ಔರದ್ಕರ್ ವರದಿ ಜಾರಿ ಮಾಡಿ. ನೀವು ಅಧಿಕಾರದಿಂದ ಕೇಳಗಿಳಿದ್ರೆ ಬೀದಿ ನಾಯಿ ಕೂಡ ನಿಮ್ಮನ್ನು ಕೇಳಲ್ಲ ಎಂದು ಸಿಎಂ ಯಡಿಯೂರಪ್ಪ ವಿರುದ್ಧ ವಾಟಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 12:49 pm, Mon, 26 October 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ