AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾಳೆ ಹೋಟೆಲ್ ಬಂದ್ ಮಾಡದಿದ್ರೆ.. ಹೋಟೆಲ್​ಗೆ ಹೋಗಿ ಹೊಟ್ಟೆ ತುಂಬ ತಿನ್ನಿ, ಆದರೇ..’

ಹಾಸನ: APMC ಮತ್ತು ಭೂಸುಧಾರಣಾ ತಿದ್ದುಪಡಿ ಕಾಯ್ದೆ ಖಂಡಿಸಿ ನಾಳೆ ಕರೆಯಲಾಗಿರುವ ಕರ್ನಾಟಕ ಬಂದ್​ ಕುರಿತು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಕ್ರಿಯಿಸಿದ್ದಾರೆ. ನಾಳಿನ‌‌‌ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಹಾಸನದಲ್ಲಿ‌ ಇಂದೇ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಕಿಡಿಕಾರಿದರು. ನಾಳೆ ಬಂದ್​ಗೆ ಬೆಂಬಲವಾಗಿ ಹೋಟೆಲ್​ಗಳನ್ನ ಮುಚ್ಚದಿದ್ದರೆ ವಾಟಾಳ್​ ನಾಗರಾಜ್​ ವಿನೂತನ ಹೋರಾಟ ನಡೆಸಲು ಮುಂದಾಗಿದ್ದಾರೆ. ನಾಳೆ ಒಂದು ವೇಳೆ ಹೋಟೆಲ್ ಬಂದ್ ಮಾಡದಿದ್ದರೆ ಹೋಟೆಲ್​ಗೆ ಹೋಗಿ, ಹೊಟ್ಟೆ ತುಂಬ ತಿನ್ನಿ. ಆದರೆ, ಬಿಲ್ ಮಾತ್ರ ಕೊಡಬೇಡಿ […]

‘ನಾಳೆ ಹೋಟೆಲ್ ಬಂದ್ ಮಾಡದಿದ್ರೆ.. ಹೋಟೆಲ್​ಗೆ ಹೋಗಿ ಹೊಟ್ಟೆ ತುಂಬ ತಿನ್ನಿ, ಆದರೇ..’
KUSHAL V
|

Updated on: Sep 27, 2020 | 5:40 PM

Share

ಹಾಸನ: APMC ಮತ್ತು ಭೂಸುಧಾರಣಾ ತಿದ್ದುಪಡಿ ಕಾಯ್ದೆ ಖಂಡಿಸಿ ನಾಳೆ ಕರೆಯಲಾಗಿರುವ ಕರ್ನಾಟಕ ಬಂದ್​ ಕುರಿತು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಕ್ರಿಯಿಸಿದ್ದಾರೆ. ನಾಳಿನ‌‌‌ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಹಾಸನದಲ್ಲಿ‌ ಇಂದೇ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಕಿಡಿಕಾರಿದರು. ನಾಳೆ ಬಂದ್​ಗೆ ಬೆಂಬಲವಾಗಿ ಹೋಟೆಲ್​ಗಳನ್ನ ಮುಚ್ಚದಿದ್ದರೆ ವಾಟಾಳ್​ ನಾಗರಾಜ್​ ವಿನೂತನ ಹೋರಾಟ ನಡೆಸಲು ಮುಂದಾಗಿದ್ದಾರೆ. ನಾಳೆ ಒಂದು ವೇಳೆ ಹೋಟೆಲ್ ಬಂದ್ ಮಾಡದಿದ್ದರೆ ಹೋಟೆಲ್​ಗೆ ಹೋಗಿ, ಹೊಟ್ಟೆ ತುಂಬ ತಿನ್ನಿ. ಆದರೆ, ಬಿಲ್ ಮಾತ್ರ ಕೊಡಬೇಡಿ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ. ಹೋರಾಟಗಾರರು ಹೊಟ್ಟೆ ತುಂಬ ಊಟ, ಉಪಾಹಾರ ಸೇವಿಸಿ. ಆದರೆ, ಬಿಲ್‌ ಕೊಡದೆ ಪ್ರತಿಭಟಿಸಿ ಅಂತಾ ವಾಟಾಳ್ ನಾಗರಾಜ್ ಕರೆಕೊಟ್ಟಿದ್ದಾರೆ.

‘ಯಡಿಯೂರಪ್ಪ ಅಧಿಕಾರಕ್ಕೆ ಬಂದಿದ್ದು ರೈತರ ಹೆಸರಲ್ಲಿ’ ಯಡಿಯೂರಪ್ಪ ಅಧಿಕಾರಕ್ಕೆ ಬಂದಿದ್ದು ರೈತರ ಹೆಸರಿನಲ್ಲಿ. ಈಗ ರೈತರನ್ನೇ ತುಳಿಯಲು ಹೊರಟಿದ್ದಾರೆ. ರೈತರು ನಿಮ್ಮ ಗುಲಾಮರಲ್ಲ. ಅವರಿಗೆ ಅವರದ್ದೇ ಆದ ಶಕ್ತಿಯಿದೆ ಎಂದು ವಾಟಾಳ್​ ತಮ್ಮ ಆಕ್ರೋಶ್​ ಹೊರಹಾಕಿದ್ದಾರೆ. ಸರ್ಕಾರ ರೈತ ವಿರೋಧಿಯಾದ ಎರಡೂ ಕಾಯ್ದೆಯನ್ನು ತಕ್ಷಣವೇ ವಾಪಸ್ ಪಡೆಯಬೇಕು ಎಂದು ಹೇಳಿದ್ದಾರೆ. ರೈತರ ಜಮೀನನ್ನ ಯಾರು ಬೇಕಾದ್ರೂ ಖರೀದಿಸಬಹುದು ಎಂದು ಕಾನೂನಾಗಿದೆ. ಇದು ರೈತರ ಪಾಲಿಗೆ ಮರಣ ಶಾಸನವಾಗಲಿದೆ. ದೇವರಾಜ್ ಅರಸ್​ ಹಾಗೂ ಶಾಂತವೇರಿ ಗೋಪಾಲಗೌಡರ ಹೋರಾಟದ ಫಲ ಭೂಸುಧಾರಣೆ ಕಾಯ್ದೆ. ಈಗ ಆ ಕಾಯ್ದೆಯನ್ನೇ ತೆಗೆಯಲು ಹೊರಟಿದ್ದಾರೆ. ಈ ಕಾಯ್ದೆ ವಾಪಸ್ ಪಡೆಯದಿದ್ದರೆ ನೀವು ನಿಮ್ಮ ಮಂತ್ರಿಮಂಡಲ ರಾಜೀನಾಮೆ ಕೊಡಬೇಕು. ಅಧಿಕಾರದಲ್ಲಿ ಇರಲು ನಿಮಗೆ ಯೋಗ್ಯತೆ ಇಲ್ಲ ಎಂದು ವಾಟಾಳ್​ ನಾಗರಾಜ್​ ಹೇಳಿದ್ದಾರೆ.

ರಾಜ್ಯದಲ್ಲಿ ಕನ್ನಡ ಪರ ಸಂಘಟನೆ ಮತ್ತು ರೈತರು ಒಂದಾಗಿ ಬಂದ್ ಮಾಡುತ್ತಿದ್ದೇವೆ. ನಾಳಿನ ಬಂದ್ ಐತಿಹಾಸಿಕ, ವಿನೂತನ ಹೋರಾಟ ಆಗಲಿದೆ. ಪೊಲೀಸರು ಹೋರಾಟ ಹತ್ತಿಕ್ಕಲು ಯತ್ನ ಮಾಡುತ್ತಿದ್ದಾರೆ. ನಾಳೆ‌ ಬಂದ್​ಗೆ ಸರ್ಕಾರ ತನ್ನ ನಿಲುವು ಬದಲಿಸದಿದ್ದರೆ ತೀವ್ರ ಹೋರಾಟ, ಅನಿರ್ದಿಷ್ಟಾವಧಿ ಬಂದ್ ಮಾಡೋ ಬಗ್ಗೆಯೂ ಚಿಂತನೆ ನಡೆಸುತ್ತೇವೆ ಎಂದು ವಾಟಾಳ್​ ನಾಗರಾಜ್​ ಹೇಳಿದ್ದಾರೆ.

Follow Us
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದರು: ವಿದ್ಯಾರ್ಥಿ ಗಂಭೀರ ಆರೋಪ
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದರು: ವಿದ್ಯಾರ್ಥಿ ಗಂಭೀರ ಆರೋಪ
ತೆಲಂಗಾಣದಲ್ಲಿ ತಂದೆ ಮಗಳ ರಾಜಕೀಯ ಜಿದ್ದು: ಹೊಸ ಪಕ್ಷ ಘೋಷಿಸಿದ ಕವಿತಾ!
ತೆಲಂಗಾಣದಲ್ಲಿ ತಂದೆ ಮಗಳ ರಾಜಕೀಯ ಜಿದ್ದು: ಹೊಸ ಪಕ್ಷ ಘೋಷಿಸಿದ ಕವಿತಾ!
ಕಲಬುರಗಿ ಜಿಲ್ಲೆ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು
ಕಲಬುರಗಿ ಜಿಲ್ಲೆ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು
ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಂತ ಅಭಿಮಾನಿಗಳು!
ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಂತ ಅಭಿಮಾನಿಗಳು!
ರಣವೀರ್ ಸಿಂಗ್ ದೈವಕ್ಕೆ ಅವಮಾನ ಮಾಡಿದ ಪ್ರಕರಣ ಇತ್ಯರ್ಥ; ಷರತ್ತುಗಳೇನು?
ರಣವೀರ್ ಸಿಂಗ್ ದೈವಕ್ಕೆ ಅವಮಾನ ಮಾಡಿದ ಪ್ರಕರಣ ಇತ್ಯರ್ಥ; ಷರತ್ತುಗಳೇನು?
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ
ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!
ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!
ದೆಹಲಿಯಲ್ಲಿ ಡಿಕೆಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ?
ದೆಹಲಿಯಲ್ಲಿ ಡಿಕೆಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ?
ಮಣಿಪಾಲ: ಪಬ್ಲಿಕ್​ನಲ್ಲೇ ಯುವಜೋಡಿಯ ಸರಸ ಸಲ್ಲಾಪ! ವಿಡಿಯೋ ವೈರಲ್
ಮಣಿಪಾಲ: ಪಬ್ಲಿಕ್​ನಲ್ಲೇ ಯುವಜೋಡಿಯ ಸರಸ ಸಲ್ಲಾಪ! ವಿಡಿಯೋ ವೈರಲ್
ಶರಬತ್​ನಂತೆಯೇ ಕಾಣ್ಸುತ್ತೆ, ಕುಡಿದ್ರೆ ಇಡೀ ದಿನ ನಶೆಯಲ್ಲಿ ತೇಲಾಡೋದು ಪಕ್ಕಾ
ಶರಬತ್​ನಂತೆಯೇ ಕಾಣ್ಸುತ್ತೆ, ಕುಡಿದ್ರೆ ಇಡೀ ದಿನ ನಶೆಯಲ್ಲಿ ತೇಲಾಡೋದು ಪಕ್ಕಾ