ವೀರ್ ಸಾವರ್ಕರ್ ಧಾರ್ಮಿಕ ಮೂಲಭೂತವಾದಿಯಾಗಿದ್ದರೇ ಹೊರತು ಸ್ವಾತಂತ್ರ್ಯ ಹೋರಾಟಗಾರರಲ್ಲ: ಡಾ ಯತೀಂದ್ರ ಸಿದ್ದರಾಮಯ್ಯ

Edited By: ಅರುಣ್​ ಕುಮಾರ್​ ಬೆಳ್ಳಿ

Updated on: Aug 18, 2022 | 4:47 PM

ಮೈಸೂರಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಸಾವರ್ಕರ್ ಮುಸಲ್ಮಾನ ಮತ್ತು ಕ್ರಿಶ್ಚಿಯನ್ನರನ್ನು ದ್ವೇಷಿಸುತ್ತಿದ್ದ ಒಬ್ಬ ಧಾರ್ಮಿಕ ಮೂಲಭೂತವಾದಿ ಆಗಿದ್ದರೇ ಹೊರತು ಸ್ವಾತಂತ್ರ್ಯ ಹೋರಾಟಗಾರರಾಗಿರಲಿಲ್ಲ ಎಂದು ಅವರು ಹೇಳಿದರು

ಮೈಸೂರು:  ಮುಸಲ್ಮಾನರ ಸಂಖ್ಯೆ ಹೆಚ್ಚಿರುವ ಸ್ಥಳದಲ್ಲಿ ವೀರ್ ಸಾವರ್ಕರ್ (Veer Savarkar) ಅವರ ಭಾವಚಿತ್ರ ಯಾಕೆ ಹಾಕಬೇಕು ಅಂತ ಸಿದ್ದರಾಮಯ್ಯ (Siddaramaiah) ಹೇಳಿರುವುದನ್ನು ಅವರ ಮಗ ಮತ್ತು ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯ (Dr Yathindra Siddaramaiah,) ಸಮರ್ಥಿಸಿಕೊಂಡಿದ್ದಾರೆ. ಮೈಸೂರಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಸಾವರ್ಕರ್ ಮುಸಲ್ಮಾನ ಮತ್ತು ಕ್ರಿಶ್ಚಿಯನ್ನರನ್ನು ದ್ವೇಷಿಸುತ್ತಿದ್ದ ಒಬ್ಬ ಧಾರ್ಮಿಕ ಮೂಲಭೂತವಾದಿ ಆಗಿದ್ದರೇ ಹೊರತು ಸ್ವಾತಂತ್ರ್ಯ ಹೋರಾಟಗಾರರಾಗಿರಲಿಲ್ಲ ಎಂದು ಅವರು ಹೇಳಿದರು.

Follow Us
Web contact

TV9 Kannada

Read More