ಹುಳಿಮಾವು ಬಳಿ ನೈಸ್ ರಸ್ತೆಯಲ್ಲಿ ಮಳೆಗೆ ಜಾರಿ.. ತರಕಾರಿ ಸಾಗಿಸ್ತಿದ್ದ ಲಾರಿ ಪಲ್ಟಿ

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ತರಕಾರಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಬಳಿಯ ನೈಸ್ ರಸ್ತೆಯಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ನಗರದ ಹಲವು ಕಡೆ ಭಾರಿ ಮಳೆಯಾಗಿದೆ. ಈ ಪರಿಣಾಮ ಅನಾಹುತಗಳು ಸಹ ಸಂಭವಿಸುತ್ತಿವೆ. ನೈಸ್ ರಸ್ತೆಯಲ್ಲಿ ಅಪಘಾತ ನಡೆದ ಸಮಯದಲ್ಲಿ ಜೋರಾಗಿ ಮಳೆಯಾಗಿತ್ತು. ರಸ್ತೆ ಪೂರ್ತಿ ನೀರಿನಿಂದ ತೊಯ್ದಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ನೆಲಕ್ಕೆ ಉರುಳಿದೆ. ಸದ್ಯ ಅಪಘಾತವಾದರೂ ಯಾವುದೇ ಸಮಸ್ಯೆಯಾಗಿಲ್ಲ. ಸ್ಥಳಕ್ಕೆ ಹುಳಿಮಾವು ಸಂಚಾರಿ […]

ಹುಳಿಮಾವು ಬಳಿ ನೈಸ್ ರಸ್ತೆಯಲ್ಲಿ ಮಳೆಗೆ ಜಾರಿ.. ತರಕಾರಿ ಸಾಗಿಸ್ತಿದ್ದ ಲಾರಿ ಪಲ್ಟಿ
ಸಾಧು ಶ್ರೀನಾಥ್​ Edited By: ಆಯೇಷಾ ಬಾನು

Updated on: Oct 19, 2020 | 12:34 PM

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ತರಕಾರಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಬಳಿಯ ನೈಸ್ ರಸ್ತೆಯಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ನಗರದ ಹಲವು ಕಡೆ ಭಾರಿ ಮಳೆಯಾಗಿದೆ. ಈ ಪರಿಣಾಮ ಅನಾಹುತಗಳು ಸಹ ಸಂಭವಿಸುತ್ತಿವೆ. ನೈಸ್ ರಸ್ತೆಯಲ್ಲಿ ಅಪಘಾತ ನಡೆದ ಸಮಯದಲ್ಲಿ ಜೋರಾಗಿ ಮಳೆಯಾಗಿತ್ತು. ರಸ್ತೆ ಪೂರ್ತಿ ನೀರಿನಿಂದ ತೊಯ್ದಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ನೆಲಕ್ಕೆ ಉರುಳಿದೆ. ಸದ್ಯ ಅಪಘಾತವಾದರೂ ಯಾವುದೇ ಸಮಸ್ಯೆಯಾಗಿಲ್ಲ. ಸ್ಥಳಕ್ಕೆ ಹುಳಿಮಾವು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 12:34 pm, Mon, 19 October 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us