AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀಜ್ ವಾಹನ ಪಡೆಯಲು ಕೋರ್ಟ್​ಗೆ ಹೋಗಬೇಕಿಲ್ಲ! ಮತ್ತೆಲ್ಲಿ, ಯಾವಾಗ ಪಡೆಯಬೇಕು?

ಬೆಂಗಳೂರು: ಕೊರೊನಾ ಸೋಂಕು ವಿರುದ್ಧದ ಸಮರದಲ್ಲಿ ಲಾಕ್​ ಡೌನ್​ ಜಾರಿಯಲ್ಲಿದ್ದಾಗ ಜಾಲಿ ರೈಡ್​ ಮಾಡುತ್ತಾ ಟ್ರಾಫಿಕ್ ಪೊಲೀಸರಿಗೆ ಸಿಕ್ಕಿಬಿದ್ದು, ವಾಹನ ಸೀಜ್​ ಮಾಡಿಸಿಕೊಂಡಿದ್ದ ವಾಹನ ಮಾಲೀಕರಿಗೆ ಹೈಕೋರ್ಟ್ ಸಮಾಧಾನಕರ ಆದೇಶ ನೀಡಿದೆ. ಲಾಕ್ ಡೌನ್ ಅವಧಿಯಲ್ಲಿ ಸೀಜ್ ಆದ ವಾಹನಗಳ ಬಿಡುಗಡೆಗೆ ಪೊಲೀಸರಿಗೆ ಅಧಿಕಾರ ನೀಡಿದ ಹೈಕೋರ್ಟ್ ದ್ವಿಚಕ್ರ, ತ್ರಿಚಕ್ರ ವಾಹನಗಳಿಗೆ ರೂ. 500 ದಂಡ, ನಾಲ್ಕು ಚಕ್ರ ವಾಹನಗಳಿಗೆ ರೂ. 1000 ದಂಡ ಕಟ್ಟಿಸಿಕೊಳ್ಳುವುದು ಜತೆಗೆ ಬಾಂಡ್ ಬರೆಸಿಕೊಂಡು ಬಿಡುಗಡೆ ಮಾಡಲು ಹೈಕೋರ್ಟ್ ಸೂಚನೆ ನೀಡಿದೆ. […]

ಸೀಜ್ ವಾಹನ ಪಡೆಯಲು ಕೋರ್ಟ್​ಗೆ ಹೋಗಬೇಕಿಲ್ಲ! ಮತ್ತೆಲ್ಲಿ, ಯಾವಾಗ ಪಡೆಯಬೇಕು?
ಅನಗತ್ಯವಾಗಿ ಹೊರಬಂದ್ರೆ ಸೀಜ್ ಆಗ್ತಾವೆ ವಾಹನಗಳು
ಸಾಧು ಶ್ರೀನಾಥ್​
|

Updated on:Apr 30, 2020 | 3:55 PM

Share

ಬೆಂಗಳೂರು: ಕೊರೊನಾ ಸೋಂಕು ವಿರುದ್ಧದ ಸಮರದಲ್ಲಿ ಲಾಕ್​ ಡೌನ್​ ಜಾರಿಯಲ್ಲಿದ್ದಾಗ ಜಾಲಿ ರೈಡ್​ ಮಾಡುತ್ತಾ ಟ್ರಾಫಿಕ್ ಪೊಲೀಸರಿಗೆ ಸಿಕ್ಕಿಬಿದ್ದು, ವಾಹನ ಸೀಜ್​ ಮಾಡಿಸಿಕೊಂಡಿದ್ದ ವಾಹನ ಮಾಲೀಕರಿಗೆ ಹೈಕೋರ್ಟ್ ಸಮಾಧಾನಕರ ಆದೇಶ ನೀಡಿದೆ.

ಲಾಕ್ ಡೌನ್ ಅವಧಿಯಲ್ಲಿ ಸೀಜ್ ಆದ ವಾಹನಗಳ ಬಿಡುಗಡೆಗೆ ಪೊಲೀಸರಿಗೆ ಅಧಿಕಾರ ನೀಡಿದ ಹೈಕೋರ್ಟ್ ದ್ವಿಚಕ್ರ, ತ್ರಿಚಕ್ರ ವಾಹನಗಳಿಗೆ ರೂ. 500 ದಂಡ, ನಾಲ್ಕು ಚಕ್ರ ವಾಹನಗಳಿಗೆ ರೂ. 1000 ದಂಡ ಕಟ್ಟಿಸಿಕೊಳ್ಳುವುದು ಜತೆಗೆ ಬಾಂಡ್ ಬರೆಸಿಕೊಂಡು ಬಿಡುಗಡೆ ಮಾಡಲು ಹೈಕೋರ್ಟ್ ಸೂಚನೆ ನೀಡಿದೆ.

ಆಯಾ ಪೊಲೀಸ್​ ಠಾಣಾ ವ್ಯಾಪ್ತಿಗಳಲ್ಲಿ ವಾಹನ ವಾಪಸ್​: ಲಾಕ್ ಡೌನ್ ಸಮಯದಲ್ಲಿ ಬೆಂಗಳೂರಿನಲ್ಲಿ 35 ಸಾವಿರ ವಾಹನಗಳು ಸೀಜ್ ಮಾಡಲಾಗಿತ್ತು. ಕೋರ್ಟ್ ಗೆ ಅರ್ಜಿ ಸಲ್ಲಿಸಿದರೆ ಜನದಟ್ಟಣೆ ಉಂಟಾಗುತ್ತದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವಾಗುವುದಿಲ್ಲ. ಹೀಗಾಗಿ ಸಿಆರ್ ಪಿಸಿ 102(3) ಅಡಿ ವಾಹನ ಬಿಡುಗಡೆಗೆ ತಮಗೇ ಅಧಿಕಾರ ನೀಡಬೇಕು ಎಂದು ಬೆಂಗಳೂರು ಪೊಲೀಸರು ಕೋರ್ಟ್​ಗೆ ಮನವಿ ಮಾಡಿಕೊಂಡಿದ್ದರು. ಆಯಾ ಪೊಲೀಸ್​ ಠಾಣಾ ವ್ಯಾಪ್ತಿಗಳಲ್ಲಿ ವಾಹನಗಳನ್ನು ವಾಪಸ್​ ನೀಡಬಹುದು. ಜೊತೆಗೆ, ಮತ್ತೆ ಲಾಕ್ ಡೌನ್ ಉಲ್ಲಂಘಿಸದಂತೆ ವಾಹನ ಸವಾರರಿಗೆ ಷರತ್ತು ವಿಧಿಸಲು ಸಹ ಹೈಕೋರ್ಟ್ ಸೂಚನೆ ನೀಡಿ, ಇಂದು ಮೇಲಿನ ಆದೇಶ ಹೊರಡಿಸಿದೆ.

ವಾಹನಗಳ ಹಸ್ತಾಂತರ ಪ್ರಕ್ರಿಯೆ ಮೇ 1ರ ನಂತರ ಪ್ರಾರಂಭ ಬೆಂಗಳೂರಿನಾದ್ಯಂತ ವಶಕ್ಕೆ ಪಡೆದಿದ್ದ ವಾಹನಗಳ ಹಸ್ತಾಂತರ ಪ್ರಕ್ರಿಯೆ ಮೇ 1ರ ನಂತರ ಪ್ರಾರಂಭವಾಗಲಿದೆ. ಈಗಾಗಲೇ ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ತಿರುವ ಪೊಲೀಸರು, ವಾಹನ ದಾಖಲೆ ತಂದು ಆಯಾ ಠಾಣೆಗಳಲ್ಲಿ ಪಡೆಯಬೇಕು. ಅಂತರ ಕಾಯ್ದುಕೊಂಡು ವಾಹಗಳನ್ನು ಪಡೆದುಕೊಳ್ಳಬೇಕು ಎಂದು ಪೊಲೀಸರು ತಿಳಿಸಿದ್ದಾರೆ.

Published On - 3:21 pm, Thu, 30 April 20

Follow Us
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಇರಾಕ್​​ನಲ್ಲಿ ಯುಎಸ್ ವಾಯುಪಡೆಯ ಇಂಧನ ತುಂಬುವ ವಿಮಾನ ಪತನ
ಇರಾಕ್​​ನಲ್ಲಿ ಯುಎಸ್ ವಾಯುಪಡೆಯ ಇಂಧನ ತುಂಬುವ ವಿಮಾನ ಪತನ