AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆ.ಪಿ. ನಡ್ಡಾ ಸಮ್ಮುಖದಲ್ಲಿ ವಿಜಯಶಾಂತಿ ಇಂದು ಬಿಜೆಪಿಗೆ ಸೇರ್ಪಡೆ..

ಖ್ಯಾತ ನಟಿ, ರಾಜಕಾರಣಿ ವಿಜಯಶಾಂತಿ ಮರಳಿ ಗೂಡಿಗೆ ಬರಲು ಸಿದ್ಧರಾಗಿದ್ದಾರೆ. ಅಂದ್ರೆ, ಮತ್ತೆ ಸಿನಿಮಾ ಮಾಡ್ತಾರೆ ಅಂತಲ್ಲ ಬದಲಿಗೆ ಬಿಜೆಪಿಗೆ ಮರು ಸೇರ್ಪಡೆಯಾಗಲು ವಿಜಯಶಾಂತಿ ಸಿದ್ಧರಾಗಿದ್ದಾರೆ. ಇದೇ ಕಾರಣಕ್ಕೆ ನಿನ್ನೆ ವಿಜಯಶಾಂತಿ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನ ಭೇಟಿಯಾಗಿದ್ದು, ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

ಜೆ.ಪಿ. ನಡ್ಡಾ ಸಮ್ಮುಖದಲ್ಲಿ ವಿಜಯಶಾಂತಿ ಇಂದು ಬಿಜೆಪಿಗೆ ಸೇರ್ಪಡೆ..
ಆಯೇಷಾ ಬಾನು
|

Updated on:Dec 07, 2020 | 10:27 AM

Share

ವಿಜಯಶಾಂತಿ.. ಪ್ರಮುಖವಾಗಿ ತೆಲುಗು ಚಿತ್ರಗಳಲ್ಲಿ ನಟಿಸಿದ್ರೂ.. ನಂತರ ಪಂಚಭಾಷಾ ನಟಿಯಾಗಿ ಗುರುತಿಸಿಕೊಂಡ್ರು. ಅಲ್ದೆ, ಭಾರತೀಯ ಚಿತ್ರರಂಗದ ಲೇಡಿ ಸೂಪರ್​ಸ್ಟಾರ್ ಆಗಿ ಮಿಂಚಿದ್ರು. ಇಂತಾ ವಿಜಯಶಾಂತಿ ಸಿನಿಮಾ ರಂಗದ ಜೊತೆಗೆ ರಾಜಕಾರಣದಲ್ಲೂ ಒಂದು ಕೈ ನೋಡಿದ್ದಾರೆ.

ಬಿಜೆಪಿ ಮೂಲಕ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದ ವಿಜಯಶಾಂತಿ ಕೊನೆಗೆ ತಮ್ಮದೇ ತಲ್ಲಿ ತೆಲಂಗಾಣ ಪಕ್ಷ ಸ್ಥಾಪಿಸಿದ್ರು. ತೆಲಂಗಾಣ ಹೋರಾಟದ ಕಾವು ಹೆಚ್ಚಾದ ಬಳಿಕ ತಮ್ಮ ಪಕ್ಷವನ್ನ ಟಿಆರ್​ಎಸ್​ ಜೊತೆ ವಿಲೀನಗೊಳಿಸಿದ್ರು. ಟಿಆರ್​ಎಸ್​ನಲ್ಲಿ ಹೆಚ್ಚು ದಿನ ಉಳಿಯದ ವಿಜಯಶಾಂತಿ ಬಳಿಕ ಕಾಂಗ್ರೆಸ್ ಸೇರಿದ್ರು. ಯಾವಾಗ ಹೈದರಾಬಾದ್ ಕಾರ್ಪೊರೇಷನ್ ಫಲಿತಾಂಶ ಹೊರಬಿತ್ತೋ ಆಗ ಮತ್ತೆ ಮಾತೃಪಕ್ಷಕ್ಕೆ ಮರಳಲು ಡಿಸೈಡ್ ಆಗಿದ್ದಾರೆ.

ತವರಿಗೆ ಮರಳಲು ಸಿದ್ಧರಾಗಿದ್ದಾರೆ ಲೇಡಿ ಸೂಪರ್​ಸ್ಟಾರ್! ತೆಲಂಗಾಣದಲ್ಲಿ ತನಗೆ ಎದುರಾಳಿಯೇ ಇಲ್ಲ ಅನ್ನೋ ರೀತಿ ಕೆಸಿಆರ್ ಅವರ ಅಶ್ವಮೇಧ ಕುದುರೆ ಓಡುತ್ತಿತ್ತು. ಈ ಅಶ್ವಮೇಧ ಕುದುರೆಯನ್ನ ಕಟ್ಟಿಹಾಕಲು ಸಾಧ್ಯವಿಲ್ಲ ಅಂತಲೇ ಎಲ್ಲರೂ ಭಾವಿಸಿದ್ರು. ಆದ್ರೆ, ಕಳೆದ ತಿಂಗಳು ನಡೆದ ದುಬ್ಬಾಕ ಉಪಚುನಾವಣೆ, ನಂತರ ನಡೆದ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕೆಸಿಆರ್​ರ ವಿಜಯದ ಓಟಕ್ಕೆ ಬಿಜೆಪಿ ತಡೆಯೊಡ್ಡಿತ್ತು.

ಈ ಮೂಲಕ ತೆಲಂಗಾಣದಲ್ಲಿ ಟಿಆರ್​ಎಸ್​ಗೆ ಪರ್ಯಾಯ ಅನ್ನೋದಿದ್ರೆ ಅದು ಬಿಜೆಪಿ ಮಾತ್ರ ಅನ್ನೋ ಸಂದೇಶ ರವಾನಿಸಿತ್ತು. ಇದ್ರಿಂದಾಗಿ ತೆಲಂಗಾಣದ ಹಲವು ಪ್ರಮುಖ ರಾಜಕೀಯ ನಾಯಕರು ಬಿಜೆಪಿಯತ್ತ ಮುಖ ಮಾಡಿದ್ದಾರೆ. ಇವರಲ್ಲಿ ಪ್ರಮುಖರು ಅಂದ್ರೆ ಲೇಡಿ ಸೂಪರ್​ಸ್ಟಾರ್ ವಿಜಯಶಾಂತಿ. ಇವರು ಸಿನಿಮಾದಿಂದ ದೂರವಾಗಿ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದೇ ಬಿಜೆಪಿ ಮೂಲಕ, ಹೀಗಾಗಿ ತವರು ಪಕ್ಷಕ್ಕೆ ಮರಳಲು ಅವರು ಉತ್ಸುಕರಾಗಿದ್ದಾರೆ.

ಬಿಜೆಪಿ ಸೇರುವ ಉದ್ದೇಶದಿಂದ ನಿನ್ನೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿಷನ್ ರೆಡ್ಡಿ ನೇತೃತ್ವದಲ್ಲಿ ವಿಜಯಶಾಂತಿ, ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನ ಭೇಟಿಯಾಗಿದ್ರು. ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಇದು ತೆಲಂಗಾಣದಲ್ಲಿ ಬಿಜೆಪಿ ಬಲವರ್ಧನೆಗೆ ಕಾರಣವಾಗುತ್ತೆ ಅಂತಾ ವಿಶ್ಲೇಷಕರು ಹೇಳ್ತಿದ್ದಾರೆ. ಈ ಮಾತು ನಿಜವಾಗುತ್ತಾ ಅನ್ನೋದಕ್ಕೆ ಕಾಲವೇ ಉತ್ತರ ನೀಡಲಿದೆ.

ಖುಷ್ಬೂ ಬಳಿಕ.. ಖ್ಯಾತ ನಟಿ ವಿಜಯಶಾಂತಿ ನಾಳೆ BJPಗೆ ಸೇರ್ಪಡೆ

Published On - 7:21 am, Mon, 7 December 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ