Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆ.ಪಿ. ನಡ್ಡಾ ಸಮ್ಮುಖದಲ್ಲಿ ವಿಜಯಶಾಂತಿ ಇಂದು ಬಿಜೆಪಿಗೆ ಸೇರ್ಪಡೆ..

ಖ್ಯಾತ ನಟಿ, ರಾಜಕಾರಣಿ ವಿಜಯಶಾಂತಿ ಮರಳಿ ಗೂಡಿಗೆ ಬರಲು ಸಿದ್ಧರಾಗಿದ್ದಾರೆ. ಅಂದ್ರೆ, ಮತ್ತೆ ಸಿನಿಮಾ ಮಾಡ್ತಾರೆ ಅಂತಲ್ಲ ಬದಲಿಗೆ ಬಿಜೆಪಿಗೆ ಮರು ಸೇರ್ಪಡೆಯಾಗಲು ವಿಜಯಶಾಂತಿ ಸಿದ್ಧರಾಗಿದ್ದಾರೆ. ಇದೇ ಕಾರಣಕ್ಕೆ ನಿನ್ನೆ ವಿಜಯಶಾಂತಿ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನ ಭೇಟಿಯಾಗಿದ್ದು, ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

ಜೆ.ಪಿ. ನಡ್ಡಾ ಸಮ್ಮುಖದಲ್ಲಿ ವಿಜಯಶಾಂತಿ ಇಂದು ಬಿಜೆಪಿಗೆ ಸೇರ್ಪಡೆ..
Follow us
ಆಯೇಷಾ ಬಾನು
|

Updated on:Dec 07, 2020 | 10:27 AM

ವಿಜಯಶಾಂತಿ.. ಪ್ರಮುಖವಾಗಿ ತೆಲುಗು ಚಿತ್ರಗಳಲ್ಲಿ ನಟಿಸಿದ್ರೂ.. ನಂತರ ಪಂಚಭಾಷಾ ನಟಿಯಾಗಿ ಗುರುತಿಸಿಕೊಂಡ್ರು. ಅಲ್ದೆ, ಭಾರತೀಯ ಚಿತ್ರರಂಗದ ಲೇಡಿ ಸೂಪರ್​ಸ್ಟಾರ್ ಆಗಿ ಮಿಂಚಿದ್ರು. ಇಂತಾ ವಿಜಯಶಾಂತಿ ಸಿನಿಮಾ ರಂಗದ ಜೊತೆಗೆ ರಾಜಕಾರಣದಲ್ಲೂ ಒಂದು ಕೈ ನೋಡಿದ್ದಾರೆ.

ಬಿಜೆಪಿ ಮೂಲಕ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದ ವಿಜಯಶಾಂತಿ ಕೊನೆಗೆ ತಮ್ಮದೇ ತಲ್ಲಿ ತೆಲಂಗಾಣ ಪಕ್ಷ ಸ್ಥಾಪಿಸಿದ್ರು. ತೆಲಂಗಾಣ ಹೋರಾಟದ ಕಾವು ಹೆಚ್ಚಾದ ಬಳಿಕ ತಮ್ಮ ಪಕ್ಷವನ್ನ ಟಿಆರ್​ಎಸ್​ ಜೊತೆ ವಿಲೀನಗೊಳಿಸಿದ್ರು. ಟಿಆರ್​ಎಸ್​ನಲ್ಲಿ ಹೆಚ್ಚು ದಿನ ಉಳಿಯದ ವಿಜಯಶಾಂತಿ ಬಳಿಕ ಕಾಂಗ್ರೆಸ್ ಸೇರಿದ್ರು. ಯಾವಾಗ ಹೈದರಾಬಾದ್ ಕಾರ್ಪೊರೇಷನ್ ಫಲಿತಾಂಶ ಹೊರಬಿತ್ತೋ ಆಗ ಮತ್ತೆ ಮಾತೃಪಕ್ಷಕ್ಕೆ ಮರಳಲು ಡಿಸೈಡ್ ಆಗಿದ್ದಾರೆ.

ತವರಿಗೆ ಮರಳಲು ಸಿದ್ಧರಾಗಿದ್ದಾರೆ ಲೇಡಿ ಸೂಪರ್​ಸ್ಟಾರ್! ತೆಲಂಗಾಣದಲ್ಲಿ ತನಗೆ ಎದುರಾಳಿಯೇ ಇಲ್ಲ ಅನ್ನೋ ರೀತಿ ಕೆಸಿಆರ್ ಅವರ ಅಶ್ವಮೇಧ ಕುದುರೆ ಓಡುತ್ತಿತ್ತು. ಈ ಅಶ್ವಮೇಧ ಕುದುರೆಯನ್ನ ಕಟ್ಟಿಹಾಕಲು ಸಾಧ್ಯವಿಲ್ಲ ಅಂತಲೇ ಎಲ್ಲರೂ ಭಾವಿಸಿದ್ರು. ಆದ್ರೆ, ಕಳೆದ ತಿಂಗಳು ನಡೆದ ದುಬ್ಬಾಕ ಉಪಚುನಾವಣೆ, ನಂತರ ನಡೆದ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕೆಸಿಆರ್​ರ ವಿಜಯದ ಓಟಕ್ಕೆ ಬಿಜೆಪಿ ತಡೆಯೊಡ್ಡಿತ್ತು.

ಈ ಮೂಲಕ ತೆಲಂಗಾಣದಲ್ಲಿ ಟಿಆರ್​ಎಸ್​ಗೆ ಪರ್ಯಾಯ ಅನ್ನೋದಿದ್ರೆ ಅದು ಬಿಜೆಪಿ ಮಾತ್ರ ಅನ್ನೋ ಸಂದೇಶ ರವಾನಿಸಿತ್ತು. ಇದ್ರಿಂದಾಗಿ ತೆಲಂಗಾಣದ ಹಲವು ಪ್ರಮುಖ ರಾಜಕೀಯ ನಾಯಕರು ಬಿಜೆಪಿಯತ್ತ ಮುಖ ಮಾಡಿದ್ದಾರೆ. ಇವರಲ್ಲಿ ಪ್ರಮುಖರು ಅಂದ್ರೆ ಲೇಡಿ ಸೂಪರ್​ಸ್ಟಾರ್ ವಿಜಯಶಾಂತಿ. ಇವರು ಸಿನಿಮಾದಿಂದ ದೂರವಾಗಿ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದೇ ಬಿಜೆಪಿ ಮೂಲಕ, ಹೀಗಾಗಿ ತವರು ಪಕ್ಷಕ್ಕೆ ಮರಳಲು ಅವರು ಉತ್ಸುಕರಾಗಿದ್ದಾರೆ.

ಬಿಜೆಪಿ ಸೇರುವ ಉದ್ದೇಶದಿಂದ ನಿನ್ನೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿಷನ್ ರೆಡ್ಡಿ ನೇತೃತ್ವದಲ್ಲಿ ವಿಜಯಶಾಂತಿ, ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನ ಭೇಟಿಯಾಗಿದ್ರು. ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಇದು ತೆಲಂಗಾಣದಲ್ಲಿ ಬಿಜೆಪಿ ಬಲವರ್ಧನೆಗೆ ಕಾರಣವಾಗುತ್ತೆ ಅಂತಾ ವಿಶ್ಲೇಷಕರು ಹೇಳ್ತಿದ್ದಾರೆ. ಈ ಮಾತು ನಿಜವಾಗುತ್ತಾ ಅನ್ನೋದಕ್ಕೆ ಕಾಲವೇ ಉತ್ತರ ನೀಡಲಿದೆ.

ಖುಷ್ಬೂ ಬಳಿಕ.. ಖ್ಯಾತ ನಟಿ ವಿಜಯಶಾಂತಿ ನಾಳೆ BJPಗೆ ಸೇರ್ಪಡೆ

Published On - 7:21 am, Mon, 7 December 20

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ