AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ ಖ್ಯಾತ ನಟ ನಾಸಿರುದ್ದೀನ್ ಷಾ ಆಸ್ಪತ್ರೆಯಿಂದ ಬಿಡುಗಡೆ: ಅಭಿಮಾನಿಗಳಿಗೆ ಹರ್ಷ

Naseeruddin Shah: ಬಾಲಿವುಡ್​ನ ಜನಪ್ರಿಯ ನಟ ನಾಸಿರುದ್ದೀನ್ ಶಾ ಬುಧವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ನ್ಯುಮೋನಿಯಾದಿಂದ ಬಳಲುತ್ತಿದ್ದ ಅವರನ್ನು ಕಳೆದ ತಿಂಗಳು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬಾಲಿವುಡ್​ ಖ್ಯಾತ ನಟ ನಾಸಿರುದ್ದೀನ್ ಷಾ ಆಸ್ಪತ್ರೆಯಿಂದ ಬಿಡುಗಡೆ: ಅಭಿಮಾನಿಗಳಿಗೆ ಹರ್ಷ
ನಾಸಿರುದ್ದೀನ್ ಶಾ (ಫೈಲ್ ಚಿತ್ರ)
TV9 Web
| Edited By: |

Updated on:Jul 08, 2021 | 11:24 AM

Share

ಬಾಲಿವುಡ್​ನ ಖ್ಯಾತ ನಟ ನಾಸಿರುದ್ದೀನ್ ಶಾ ಅವರು ಪತ್ನಿ ರತ್ನ ಪಾಟಕ್ ಶಾ ಅವರೊಂದಿಗಿರುವ ಚಿತ್ರವನ್ನು ಪುತ್ರ ವಿವಾನ್ ಶಾ ಅವರು ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡು ನಾಸಿರುದ್ದೀನ್ ಶಾ ಗುಣಮುಖರಾಗಿ ಮನೆ ಸೇರಿರುವ ವಿಚಾರವನ್ನು ಅಭಿಮಾನಿಗಳಿಗೆ ಬಹಿರಂಗಪಡಿಸಿದ್ದಾರೆ. ‘ಅವರು ಈಗಷ್ಟೇ ಮನೆಗೆ ಬಂದರು’ ಎಂದು ವಿವಾನ್ ಶಾ ಬರೆದುಕೊಂಡಿದ್ದಾರೆ. ಜೊತೆಗೆ ‘ಮರಳಿ ಮನೆಗೆ’ ಎಂದು ಪ್ರೀತಿ ಪೂರ್ವಕ ಇಮೋಜಿಯೊಂದಿಗೆ ಚಿತ್ರವನ್ನು ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ರತ್ನ ಅವರು ರೂಮಿನಲ್ಲಿ ಕುಳಿತಿದ್ದು, ನಾಸಿರುದ್ದೀನ್ ಶಾ ಅವರು ತಮ್ಮ ಕೈಯನ್ನು ದಿಟ್ಟಿಸುತ್ತಿದ್ದಾರೆ.

ನಾಸಿರುದ್ದೀನ್ ಶಾ

ವಿವಾನ್ ಶಾ ಹಂಚಿಕೊಂಡಿರುವ ಚಿತ್ರ

ನಾಸಿರುದ್ದೀನ್ ಶಾಕಳೆದ ಮಂಗಳವಾರ 70 ವರ್ಷದ ನಾಸಿರುದ್ದೀನ್ ಶಾ ಅವರನ್ನು ಅನಾರೋಗ್ಯದ ನಿಮಿತ್ತ ಹಿಂದುಜಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ‘ಅವರಿಗೆ ಸಣ್ಣ ಮಟ್ಟದಲ್ಲಿ ಅನಾರೋಗ್ಯ ಕಾಣಿಸಿಕೊಂಡಿದೆ. ಚಿಕಿತ್ಸೆಗೆ ಸ್ಪಂದಿಸುತ್ತತಿದ್ದಾರೆ. ಸದ್ಯದಲ್ಲೇ ಗುಣಮುಖವಾಗಲಿದ್ದಾರೆ’ ಎಂದು ಅವರ ಪತ್ನಿ ರತ್ನಾ ಅವರು ಪಿಟಿಐಗೆ ತಿಳಿಸಿದ್ದರು. ಅದರಂತೆ ನಾಸಿರುದ್ದೀನ್ ಸಾ ಅವರು ಬಿಡುಗಡೆಯಾಗಿದ್ದು ಅವರ ಅಪಾರ ಅಭಿಮಾನ ಬಳಗ ಸಂತಸದ ನಿಟ್ಟುಸಿರು ಬಿಟ್ಟಿದೆ.

ನಾಸಿರುದ್ದೀನ್ ಶಾ ಅವರು ಪ್ರತಿಷ್ಠಿತ ರಾಷ್ಟ್ರೀಯ ನಾಟಕ ಶಾಲೆ (ಎನ್​ಎಸ್​ಡಿ) ಹಾಗೂ ಪುಣೆಯ ಭಾರತೀಯ ಚಲನಚಿತ್ರ ಹಾಗೂ ದೃಶ್ಯ ಮಾಧ್ಯಮ ಸಂಸ್ಥೆಯ ಹಳೆಯ ವಿದ್ಯಾರ್ಥಿಯಾಗಿದ್ದಾರೆ. ಕಮರ್ಷಿಯಲ್ ಸಿನಿಮಾಗಳ ಜೊತೆಜೊತೆಗೆ ಸಮಾಂತರ ಚಿತ್ರಗಳಲ್ಲೂ ಗುರುತಿಸಿಕೊಂಡಿರುವನಾಸಿರುದ್ದೀನ್ ಶಾ ಮೂರು ಬಾರಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಗಳಿಸಿದ್ದಾರೆ. ಇದರ ಜೊತೆಜೊತೆಗೆ ನಾಟಕಗಳಲ್ಲೂ ತಮ್ಮನ್ನು ಸತತವಾಗಿ ತೊಡಗಿಸಿಕೊಂಡಿದ್ದಾರೆ.

(Veteran Bollywood actor Naseeruddin Shah discharged from hospital son Vivaan shares his pic)

Published On - 11:20 am, Thu, 8 July 21

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು