AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯಮಿ ರತನ್ ಟಾಟಾಗೆ ಭಾರತ-ಇಸ್ರೇಲ್ ವಾಣಿಜ್ಯ ಮಂಡಳಿಯಿಂದ ಗೌರವ

ಭಾರತ, ಇಸ್ರೇಲ್​ ಮತ್ತು ಪ್ಯಾಲೆಸ್ತನ್ ನಡುವೆ ಉತ್ತಮ ಸಂಬಂಧಕ್ಕೆ ಅವರು ಕಾರಣರಾಗಿದ್ದಾರೆ. ಈ ಗೌರವಕ್ಕೆ ಅವರು ಅರ್ಹರಾಗಿದ್ದಾರೆ ಎಂದು ಇಸ್ರೇಲ್-ಭಾರತದ ವಾಣಿಜ್ಯ ಮಂಡಳಿಯ ಅಧ್ಯಕ್ಷ ರವಿವ್ ಬೈರೊನ್ ತಿಳಿಸಿದ್ದಾರೆ.

ಉದ್ಯಮಿ ರತನ್ ಟಾಟಾಗೆ ಭಾರತ-ಇಸ್ರೇಲ್ ವಾಣಿಜ್ಯ ಮಂಡಳಿಯಿಂದ ಗೌರವ
ರತನ್ ಟಾಟಾ (ಸಂಗ್ರಹ ಚಿತ್ರ)
TV9 Web
| Edited By: |

Updated on:Apr 06, 2022 | 11:33 PM

Share

ದೆಹಲಿ: ಸುಸ್ಥಿರ ಅಭಿವೃದ್ಧಿ ಮತ್ತು ಶಾಂತಿ ಸಾಧಿಸುವ ನೆಲೆಯಲ್ಲಿ ಹೊಸ ಆವಿಷ್ಕಾರಗಳನ್ನು ಬೆಂಬಲಿಸಿದೆ ಭಾರತದ ಜನಪ್ರಿಯ ಉದ್ಯಮಿ ರತನ್ ಟಾಟಾಗೆ ಇಂಡೋ-ಇಸ್ರೇಲ್ ವಾಣಿಜ್ಯ ಮಂಡಳಿ ‘ಗ್ಲೋಬಲ್ ವಿಷನರಿ ಆಫ್ ಸಸ್ಟೈನೆಬಲ್ ಬ್ಯುಸಿನೆಸ್ ಅಂಡ್ ಪೀಸ್’ ಪ್ರಶಸ್ತಿ ನೀಡಿ ಗೌರವಿಸಲಿದೆ. ರತನ್ ಟಾಟಾ ಒಡೆತನದ ಟಾಟಾ ಗ್ರೂಪ್​ಗೆ ಡಿ.21ರಂದು ದುಬೈನಲ್ಲಿ ನಡೆಯುವ ವರ್ಚುಯಲ್ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಲಭಿಸಲಿದೆ.

ಕಾರ್ಯಕ್ರಮದಲ್ಲಿ ಭಾರತ, ಇಸ್ರೇಲ್ ಮತ್ತು ಯುಎಇನ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ರತನ್ ಟಾಟಾ ಕೆಲವಾರು ಬಾರಿ ಇಸ್ರೇಲ್​ಗೆ ಭೇಟಿ ನೀಡಿದ್ದಾರೆ. ಭಾರತ, ಇಸ್ರೇಲ್​ ಮತ್ತು ಪ್ಯಾಲೆಸ್ತೇನಿನ ಉತ್ತಮ ಸಂಬಂಧಕ್ಕೆ ಅವರು ಕಾರಣರಾಗಿದ್ದಾರೆ. ಈ ಗೌರವಕ್ಕೆ ಅವರು ಅರ್ಹರಾಗಿದ್ದಾರೆ ಎಂದು ಇಸ್ರೇಲ್-ಭಾರತದ ವಾಣಿಜ್ಯ ಮಂಡಳಿಯ ಅಧ್ಯಕ್ಷ ರವಿವ್ ಬೈರೊನ್ ತಿಳಿಸಿದ್ದಾರೆ.

ಭಾರತ ಮತ್ತು ಇಸ್ರೇಲ್ ನಡುವಿನ ವ್ಯಾವಹಾರಿಕ ಸಂಬಂಧವನ್ನು ಬಲಗೊಳಿಸುವಲ್ಲಿ ಈ ಸಮಾರಂಭವು ಪ್ರಮುಖ ಪಾತ್ರ ವಹಿಸಲಿದೆ. ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ಭೂಷಣ ಹಾಗೂ ಪದ್ಮ ವಿಭೂಷಣ ಪಡೆದಿರುವ 82ರ ಹರೆಯದ ರತನ್ ಟಾಟಾ ಈ ಕಾರ್ಯಕ್ರಮದಲ್ಲಿ ಗೌರವ ಪಡೆಯಲಿದ್ದಾರೆ.

ಯುಎಇ ಮತ್ತು ಬಹ್ರೇನ್ ದೇಶಗಳಲ್ಲಿ ಹಲವಾರು ಭಾರತೀಯರಿದ್ದಾರೆ. ಉನ್ನತ ಹುದ್ದೆ ಮತ್ತು ಉತ್ತಮ ಗೌರವವನ್ನೂ ಅವರು ಸಂಪಾದಿಸಿದ್ದಾರೆ. ಆದ್ದರಿಂದ, ಗಲ್ಫ್, ಭಾರತ ಮತ್ತು ಇಸ್ರೇಲ್​ನ ಸಂಬಂಧ ಬಲಪಡಿಸುವ ನಿಟ್ಟಿನಲ್ಲೂ ನಾವು ಶ್ರಮಿಸಬಹುದು ಎಂದು ರವಿವ್ ಬೈರೊನ್ ಹೇಳಿದ್ದಾರೆ.

Published On - 7:49 pm, Fri, 18 December 20

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ