AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಶ್ಯೂ ಪೇಪರ್ ಮೇಲೆ ಕೃಷ್ಣನ ಫೋಟೋ ಪ್ರಿಂಟ್ ಮಾಡುತ್ತಿದ್ದ ಟ್ರೇಡರ್ಸ್ ಮೇಲೆ ವಿಎಚ್.ಪಿ ದಾಳಿ

ಟಿಶ್ಯೂ ಪೇಪರ್ ಮೇಲೆ ಕೃಷ್ಣನ ಫೋಟೋ ಪ್ರಿಂಟ್ ಮಾಡುತ್ತಿದ್ದ ರಾಜ್ ಟ್ರೇಡರ್ಸ್ ಮೇಲೆ ಇಂದು (ಅ.19) ವಿಎಚ್.ಪಿ ಹಾಗೂ ಭಜರಂಗದಳ ಕಾರ್ಯಕರ್ತರು ದಾಳಿ ಮಾಡಿದ್ದಾರೆ.

ಟಿಶ್ಯೂ ಪೇಪರ್ ಮೇಲೆ ಕೃಷ್ಣನ ಫೋಟೋ ಪ್ರಿಂಟ್ ಮಾಡುತ್ತಿದ್ದ ಟ್ರೇಡರ್ಸ್ ಮೇಲೆ ವಿಎಚ್.ಪಿ ದಾಳಿ
ರಾಜ್ ಟ್ರೇಡರ್ಸ್ ಮೇಲೆ ವಿಎಚ್.ಪಿ ಹಾಗೂ ಭಜರಂಗದಳ ಕಾರ್ಯಕರ್ತರ ದಾಳಿ
TV9 Web
| Edited By: |

Updated on: Oct 19, 2022 | 10:22 PM

Share

ಗದಗ: ಟಿಶ್ಯೂ ಪೇಪರ್ ಮೇಲೆ ಕೃಷ್ಣನ ಫೋಟೋ ಪ್ರಿಂಟ್ ಮಾಡುತ್ತಿದ್ದ ರಾಜ್ ಟ್ರೇಡರ್ಸ್ ಮೇಲೆ ಇಂದು (ಅ.19) ವಿಎಚ್.ಪಿ ಹಾಗೂ ಭಜರಂಗದಳ ಕಾರ್ಯಕರ್ತರು ದಾಳಿ ಮಾಡಿದ್ದಾರೆ. ಗದಗ-ಬೆಟಗೇರಿ ಅವಳಿ ನಗರದಲ್ಲಿ ಹಲವು ಹೋಟೆಲ್​ಗಳಲ್ಲಿ ಕೃಷ್ಣನ ಪೋಟೋ ಇರುವ ಟಿಶ್ಯೂ ಪೇಪರ್​ಗಳು ಗ್ರಾಹಕರಿಗೆ ನೀಡಲಾಗುತ್ತಿದೆ. ಇದನ್ನು ಗಮನಿಸಿದ ವಿಎಚ್.ಪಿ ಹಾಗೂ ಭಜರಂಗದಳ ಕಾರ್ಯಕರ್ತರು ಟಿಶ್ಯೂ ಪೇಪರ್ ಎಲ್ಲಿಂದ ಸರಬರಾಜು ಆಗುತ್ತಿದೆ ಎಂದು ಪತ್ತೆ ಹಚ್ಚಿದ್ದಾರೆ. ಬಳಿಕ ಬಸವೇಶ್ವರ ಸರ್ಕಲ್ ಬಳಿಯ ಹೋಲಸೆಲ್ ಮಾರಾಟಗಾರ ರಾಜ್ ಟ್ರೇಡರ್ಸ್ ಮೇಲೆ ದಾಳಿ ಮಾಡಿದ್ದಾರೆ.

ರಾಜ್ ಟ್ರೇಡರ್ಸ್ ಮೇಲೆ ದಾಳಿ ಮಾಡಿದಾಗ ಅಪಾರ ಪ್ರಮಾಣದ ಕೃಷ್ಣನ ಫೋಟೋ ಇರುವ ಟಿಶ್ಯೂ ಪೇಪರ್ ಪತ್ತೆಯಾಗಿದೆ. ಇದನ್ನು ಕಂಡ ವಿಎಚ್.ಪಿ ಹಾಗೂ ಭಜರಂಗದಳ ಕಾರ್ಯಕರ್ತರು ಮಾಲೀಕ ಇಂದ್ರಮಲ್ಲ ಜೈನ್​ಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಹಿಂದೂಗಳ ಭಾವನೆಗೆ ಧಕ್ಕೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾರ್ಯಕರ್ತರು ಒತ್ತಾಯಿಸಿದ್ದು, ಹಿಂದೂ ದೇವತೆಗಳಿಗೆ ಅವಮಾನ ಮಾಡಲಾಗಿದೆ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ರಾಜ್ ಟ್ರೇಡರ್ಸ್ ಮಾಲೀಕ ಇಂದ್ರಮಲ್ಲ ಮಾತನಾಡಿ ಲಾಟ್​​ನಲ್ಲಿ ತರಿಸಿದ್ದೇವೆ ನಾನು ಕೃಷ್ಣನ ಫೋಟೋ ಇದ್ದಿದ್ದು ನೋಡಿಲ್ಲ. ಈಗ ಇವರು ಬಂದ ಮೇಲೆ ಗೋತ್ತಾಗಿದೆ. ಬೆಂಗಳೂರಿನಿಂದ ತರಿಸಲಾಗಿದೆ. ನಮ್ಮದೇನು ತಪ್ಪಿಲ್ಲ ಅಂತ ಕ್ಷಮೆ ಕೇಳಿದ್ದಾನೆ. ಸ್ಥಳಕ್ಕೆ ಶಹರ ಪೊಲೀಸರು ಭೇಟಿ ನೀಡಿ ಅಂಗಡಿ ಬೀಗ ಹಾಕಿಸಿ‌ ಮಾಲೀಕ್ ಇಂದ್ರಮಲ್ಲನ್ನು ಠಾಣೆಗೆ ಕರೆದ್ಯೊಯ್ದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!