AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಅಮಲಿನಲ್ಲಿ ವಿಮಾನ ಸಿಬ್ಬಂದಿಯ ಬೆರಳು ಕಚ್ಚಿದ ಪ್ರಯಾಣಿಕನ ವಿಡಿಯೋ ವೈರಲ್

Turkish Airlines : ಈತ ಕೇವಲ ಪ್ರಯಾಣಿಕನಷ್ಟೇ ಅಲ್ಲ, ವೃತ್ತಿಯಲ್ಲಿ ಇನ್ನೊಂದು ವಿಮಾನ ಸಂಸ್ಥೆಯ ಪೈಲಟ್​. ಆದರೆ ಕುಡಿದ ಮತ್ತಿನಲ್ಲಿ ನಿಯಂತ್ರಣ ಕಳೆದುಕೊಂಡು ಜಗಳಕ್ಕೆ ಬಿದ್ದಿದ್ದಾನೆ. ಸಿಬ್ಬಂದಿಯೂ ಇವನ ಮೇಲೆ ಪ್ರತಿದಾಳಿ ಮಾಡಿದೆ.

ಕುಡಿದ ಅಮಲಿನಲ್ಲಿ ವಿಮಾನ ಸಿಬ್ಬಂದಿಯ ಬೆರಳು ಕಚ್ಚಿದ ಪ್ರಯಾಣಿಕನ ವಿಡಿಯೋ ವೈರಲ್
Drunk Passenger Bites Flight Attendant‘s Finger
TV9 Web
| Updated By: ಶ್ರೀದೇವಿ ಕಳಸದ|

Updated on:Oct 18, 2022 | 1:50 PM

Share

Viral Video : ಯಾವ ಕಾರಣಕ್ಕೆ ಯಾರು ಹೇಗೆ ಎಲ್ಲಿ ಯಾವಾಗ ಆಕ್ರೋಶಕ್ಕೆ ಒಳಗಾಗುತ್ತಾರೆ ಎನ್ನುವುದನ್ನು ಊಹಿಸುವುದು ಅಸಾಧ್ಯ. ಕುಡಿದ ಮತ್ತಿನಲ್ಲಿ ವಿಮಾನವೇರಿದ ಪ್ರಯಾಣಿಕನೊಬ್ಬ ವಿಮಾನ ಸಿಬ್ಬಂದಿಯ ಬೆರಳನ್ನು ಕಚ್ಚಿದ ಘಟನೆ ಬುಧವಾರ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಪ್ರಯಾಣಿಕನನ್ನು ಇನ್ನೊಂದು ವಿಮಾನ ಸಂಸ್ಥೆಯಲ್ಲಿ ಪೈಲಟ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಇಂಡೋನೇಷಿಯಾ ಮೂಲದ ಪ್ರಜೆ ಎಂದು ಗುರುತಿಸಲಾಗಿದೆ.

ಟರ್ಕಿಶ್​ ಏರ್​ಲೈನ್ಸ್​ ವಿಮಾನವು ಜಕಾರ್ತಾಗೆ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಸದರಿ ಪ್ರಯಾಣಿಕ ಕುಡಿದ ಮತ್ತಿನಲ್ಲಿದ್ದುದನ್ನು ಗಮನಿಸಿದ ಸಿಬ್ಬಂದಿ ಅವನನ್ನು ಶಾಂತಗೊಳಿಸಲು ಪ್ರಯತ್ನ ನಡೆಸಿದೆ. ಆದರೆ ಆತ ನಿಯಂತ್ರಣವನ್ನು ಕಳೆದುಕೊಂಡು ಸಿಬ್ಬಂದಿಯ ಮೇಲೆ ದಾಳಿ ಮಾಡಲು ಶುರುಮಾಡಿದ್ದಾನೆ. ಆಗ ಸಿಬ್ಬಂದಿಯೂ ಅವನ ಮೇಲೆ ಪ್ರತಿದಾಳಿ ಮಾಡಿದೆ. ಈ ಸಂದರ್ಭದಲ್ಲಿಯೇ ಈತ ಸಿಬ್ಬಂದಿಯೊಬ್ಬರ ಬೆರಳನ್ನು ಕಚ್ಚಿರುವುದು.

ಪರಿಸ್ಥಿತಿಯು ವಿಕೋಪಕ್ಕೆ ತಲುಪಿದಾಗ ವಿಮಾನವನ್ನು ತುರ್ತಾಗಿ ಭೂಸ್ಪರ್ಶ ಮಾಡಬೇಕೆಂಬ ಒತ್ತಾಯವೂ ಪ್ರಯಾಣಿಕರಿಂದ ಕೇಳಿಬಂದಿದೆ. ಜಕಾರ್ತಾ ಬದಲಾಗಿ ಮಲೇಷಿಯಾದ ಕೌಲಾಲಂಪುರಗೆ ವಿಮಾನವನ್ನು ತಿರುಗಿಸಬೇಕೆಂಬ ಒತ್ತಡವನ್ನೂ ಪೈಲಟ್​ ಮೇಲೆ ಹೇರಲಾಗಿದೆ. ಈ ಹೊಡೆದಾಟವು ನಿಯಂತ್ರಣಕ್ಕೆ ಬರದೇ ಇದ್ದಾಗ ಅನಿವಾರ್ಯವಾಗಿ ಮೇಡನ್​ನ ಕ್ವಾಲಾನಾಮು ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿದಿದೆ.

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ 

Published On - 1:43 pm, Tue, 18 October 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?