ಕುಡಿದ ಅಮಲಿನಲ್ಲಿ ವಿಮಾನ ಸಿಬ್ಬಂದಿಯ ಬೆರಳು ಕಚ್ಚಿದ ಪ್ರಯಾಣಿಕನ ವಿಡಿಯೋ ವೈರಲ್

Turkish Airlines : ಈತ ಕೇವಲ ಪ್ರಯಾಣಿಕನಷ್ಟೇ ಅಲ್ಲ, ವೃತ್ತಿಯಲ್ಲಿ ಇನ್ನೊಂದು ವಿಮಾನ ಸಂಸ್ಥೆಯ ಪೈಲಟ್​. ಆದರೆ ಕುಡಿದ ಮತ್ತಿನಲ್ಲಿ ನಿಯಂತ್ರಣ ಕಳೆದುಕೊಂಡು ಜಗಳಕ್ಕೆ ಬಿದ್ದಿದ್ದಾನೆ. ಸಿಬ್ಬಂದಿಯೂ ಇವನ ಮೇಲೆ ಪ್ರತಿದಾಳಿ ಮಾಡಿದೆ.

ಕುಡಿದ ಅಮಲಿನಲ್ಲಿ ವಿಮಾನ ಸಿಬ್ಬಂದಿಯ ಬೆರಳು ಕಚ್ಚಿದ ಪ್ರಯಾಣಿಕನ ವಿಡಿಯೋ ವೈರಲ್
Drunk Passenger Bites Flight Attendant‘s Finger
Follow us
| Updated By: ಶ್ರೀದೇವಿ ಕಳಸದ

Updated on:Oct 18, 2022 | 1:50 PM

Viral Video : ಯಾವ ಕಾರಣಕ್ಕೆ ಯಾರು ಹೇಗೆ ಎಲ್ಲಿ ಯಾವಾಗ ಆಕ್ರೋಶಕ್ಕೆ ಒಳಗಾಗುತ್ತಾರೆ ಎನ್ನುವುದನ್ನು ಊಹಿಸುವುದು ಅಸಾಧ್ಯ. ಕುಡಿದ ಮತ್ತಿನಲ್ಲಿ ವಿಮಾನವೇರಿದ ಪ್ರಯಾಣಿಕನೊಬ್ಬ ವಿಮಾನ ಸಿಬ್ಬಂದಿಯ ಬೆರಳನ್ನು ಕಚ್ಚಿದ ಘಟನೆ ಬುಧವಾರ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಪ್ರಯಾಣಿಕನನ್ನು ಇನ್ನೊಂದು ವಿಮಾನ ಸಂಸ್ಥೆಯಲ್ಲಿ ಪೈಲಟ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಇಂಡೋನೇಷಿಯಾ ಮೂಲದ ಪ್ರಜೆ ಎಂದು ಗುರುತಿಸಲಾಗಿದೆ.

ಟರ್ಕಿಶ್​ ಏರ್​ಲೈನ್ಸ್​ ವಿಮಾನವು ಜಕಾರ್ತಾಗೆ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಸದರಿ ಪ್ರಯಾಣಿಕ ಕುಡಿದ ಮತ್ತಿನಲ್ಲಿದ್ದುದನ್ನು ಗಮನಿಸಿದ ಸಿಬ್ಬಂದಿ ಅವನನ್ನು ಶಾಂತಗೊಳಿಸಲು ಪ್ರಯತ್ನ ನಡೆಸಿದೆ. ಆದರೆ ಆತ ನಿಯಂತ್ರಣವನ್ನು ಕಳೆದುಕೊಂಡು ಸಿಬ್ಬಂದಿಯ ಮೇಲೆ ದಾಳಿ ಮಾಡಲು ಶುರುಮಾಡಿದ್ದಾನೆ. ಆಗ ಸಿಬ್ಬಂದಿಯೂ ಅವನ ಮೇಲೆ ಪ್ರತಿದಾಳಿ ಮಾಡಿದೆ. ಈ ಸಂದರ್ಭದಲ್ಲಿಯೇ ಈತ ಸಿಬ್ಬಂದಿಯೊಬ್ಬರ ಬೆರಳನ್ನು ಕಚ್ಚಿರುವುದು.

ಪರಿಸ್ಥಿತಿಯು ವಿಕೋಪಕ್ಕೆ ತಲುಪಿದಾಗ ವಿಮಾನವನ್ನು ತುರ್ತಾಗಿ ಭೂಸ್ಪರ್ಶ ಮಾಡಬೇಕೆಂಬ ಒತ್ತಾಯವೂ ಪ್ರಯಾಣಿಕರಿಂದ ಕೇಳಿಬಂದಿದೆ. ಜಕಾರ್ತಾ ಬದಲಾಗಿ ಮಲೇಷಿಯಾದ ಕೌಲಾಲಂಪುರಗೆ ವಿಮಾನವನ್ನು ತಿರುಗಿಸಬೇಕೆಂಬ ಒತ್ತಡವನ್ನೂ ಪೈಲಟ್​ ಮೇಲೆ ಹೇರಲಾಗಿದೆ. ಈ ಹೊಡೆದಾಟವು ನಿಯಂತ್ರಣಕ್ಕೆ ಬರದೇ ಇದ್ದಾಗ ಅನಿವಾರ್ಯವಾಗಿ ಮೇಡನ್​ನ ಕ್ವಾಲಾನಾಮು ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿದಿದೆ.

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ 

Published On - 1:43 pm, Tue, 18 October 22

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ