AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಅಮಲಿನಲ್ಲಿ ವಿಮಾನ ಸಿಬ್ಬಂದಿಯ ಬೆರಳು ಕಚ್ಚಿದ ಪ್ರಯಾಣಿಕನ ವಿಡಿಯೋ ವೈರಲ್

Turkish Airlines : ಈತ ಕೇವಲ ಪ್ರಯಾಣಿಕನಷ್ಟೇ ಅಲ್ಲ, ವೃತ್ತಿಯಲ್ಲಿ ಇನ್ನೊಂದು ವಿಮಾನ ಸಂಸ್ಥೆಯ ಪೈಲಟ್​. ಆದರೆ ಕುಡಿದ ಮತ್ತಿನಲ್ಲಿ ನಿಯಂತ್ರಣ ಕಳೆದುಕೊಂಡು ಜಗಳಕ್ಕೆ ಬಿದ್ದಿದ್ದಾನೆ. ಸಿಬ್ಬಂದಿಯೂ ಇವನ ಮೇಲೆ ಪ್ರತಿದಾಳಿ ಮಾಡಿದೆ.

ಕುಡಿದ ಅಮಲಿನಲ್ಲಿ ವಿಮಾನ ಸಿಬ್ಬಂದಿಯ ಬೆರಳು ಕಚ್ಚಿದ ಪ್ರಯಾಣಿಕನ ವಿಡಿಯೋ ವೈರಲ್
Drunk Passenger Bites Flight Attendant‘s Finger
TV9 Web
| Edited By: ಶ್ರೀದೇವಿ ಕಳಸದ|

Updated on:Oct 18, 2022 | 1:50 PM

Share

Viral Video : ಯಾವ ಕಾರಣಕ್ಕೆ ಯಾರು ಹೇಗೆ ಎಲ್ಲಿ ಯಾವಾಗ ಆಕ್ರೋಶಕ್ಕೆ ಒಳಗಾಗುತ್ತಾರೆ ಎನ್ನುವುದನ್ನು ಊಹಿಸುವುದು ಅಸಾಧ್ಯ. ಕುಡಿದ ಮತ್ತಿನಲ್ಲಿ ವಿಮಾನವೇರಿದ ಪ್ರಯಾಣಿಕನೊಬ್ಬ ವಿಮಾನ ಸಿಬ್ಬಂದಿಯ ಬೆರಳನ್ನು ಕಚ್ಚಿದ ಘಟನೆ ಬುಧವಾರ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಪ್ರಯಾಣಿಕನನ್ನು ಇನ್ನೊಂದು ವಿಮಾನ ಸಂಸ್ಥೆಯಲ್ಲಿ ಪೈಲಟ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಇಂಡೋನೇಷಿಯಾ ಮೂಲದ ಪ್ರಜೆ ಎಂದು ಗುರುತಿಸಲಾಗಿದೆ.

ಟರ್ಕಿಶ್​ ಏರ್​ಲೈನ್ಸ್​ ವಿಮಾನವು ಜಕಾರ್ತಾಗೆ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಸದರಿ ಪ್ರಯಾಣಿಕ ಕುಡಿದ ಮತ್ತಿನಲ್ಲಿದ್ದುದನ್ನು ಗಮನಿಸಿದ ಸಿಬ್ಬಂದಿ ಅವನನ್ನು ಶಾಂತಗೊಳಿಸಲು ಪ್ರಯತ್ನ ನಡೆಸಿದೆ. ಆದರೆ ಆತ ನಿಯಂತ್ರಣವನ್ನು ಕಳೆದುಕೊಂಡು ಸಿಬ್ಬಂದಿಯ ಮೇಲೆ ದಾಳಿ ಮಾಡಲು ಶುರುಮಾಡಿದ್ದಾನೆ. ಆಗ ಸಿಬ್ಬಂದಿಯೂ ಅವನ ಮೇಲೆ ಪ್ರತಿದಾಳಿ ಮಾಡಿದೆ. ಈ ಸಂದರ್ಭದಲ್ಲಿಯೇ ಈತ ಸಿಬ್ಬಂದಿಯೊಬ್ಬರ ಬೆರಳನ್ನು ಕಚ್ಚಿರುವುದು.

ಪರಿಸ್ಥಿತಿಯು ವಿಕೋಪಕ್ಕೆ ತಲುಪಿದಾಗ ವಿಮಾನವನ್ನು ತುರ್ತಾಗಿ ಭೂಸ್ಪರ್ಶ ಮಾಡಬೇಕೆಂಬ ಒತ್ತಾಯವೂ ಪ್ರಯಾಣಿಕರಿಂದ ಕೇಳಿಬಂದಿದೆ. ಜಕಾರ್ತಾ ಬದಲಾಗಿ ಮಲೇಷಿಯಾದ ಕೌಲಾಲಂಪುರಗೆ ವಿಮಾನವನ್ನು ತಿರುಗಿಸಬೇಕೆಂಬ ಒತ್ತಡವನ್ನೂ ಪೈಲಟ್​ ಮೇಲೆ ಹೇರಲಾಗಿದೆ. ಈ ಹೊಡೆದಾಟವು ನಿಯಂತ್ರಣಕ್ಕೆ ಬರದೇ ಇದ್ದಾಗ ಅನಿವಾರ್ಯವಾಗಿ ಮೇಡನ್​ನ ಕ್ವಾಲಾನಾಮು ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿದಿದೆ.

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ 

Published On - 1:43 pm, Tue, 18 October 22

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!