AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಲು ರೈತನ ಹರಸಾಹಸ.. ವಿಡಿಯೋ ಆಯ್ತು ಫುಲ್​ ವೈರಲ್​!

ಗದಗ: ಪ್ರಾಣಿಗಳಂದ್ರೆ ಮನುಷ್ಯನಿಗೆ ಅದೇನೋ ಒಂದು ರೀತಿಯ ಪ್ರೀತಿ. ಹೀಗಾಗಿ, ಪ್ರಾಣಿಗಳಿಗೋಸ್ಕರ ಏನು ಮಾಡೋಕೂ ಸಿದ್ಧನಾಗಿಬಿಡುತ್ತಾನೆ. ಅದೇ ರೀತಿ, ಇಲ್ಲೊಬ್ಬ ರೈತ ಜೀವದ ಹಂಗು ತೊರೆದು ಬಾವಿಯಲ್ಲಿ ಸಿಲುಕಿದ್ದ ಬೆಕ್ಕೊಂದನ್ನು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ. ರೈತ ಮಹಾಂತೇಶ ಬಾವಿಯ ಪೊದೆಯಲ್ಲಿ ಸಿಲುಕಿಕೊಂಡಿದ್ದ ಬೆಕ್ಕನ್ನು ರಕ್ಷಿಸಿರುವ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಬನ್ನಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಬೆಕ್ಕೊಂದು ಬಾವಿಯ ನೀರಿಗೆ ಬಿದ್ದು‌ ಮೇಲಿನ ಪೊದೆಗೆ ಬಂದು ತನ್ನ ಪ್ರಾಣ ಉಳಿಸಿಕೊಂಡಿತ್ತು. ಕಳೆದ ಮೂರು‌ ದಿನಗಳಿಂದ ಬಾವಿಯಲ್ಲೇ ಸಿಲುಕಿಕೊಂಡಿತ್ತು. […]

ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಲು ರೈತನ ಹರಸಾಹಸ.. ವಿಡಿಯೋ ಆಯ್ತು ಫುಲ್​ ವೈರಲ್​!
ಆಯೇಷಾ ಬಾನು
|

Updated on: Nov 22, 2020 | 1:10 PM

Share

ಗದಗ: ಪ್ರಾಣಿಗಳಂದ್ರೆ ಮನುಷ್ಯನಿಗೆ ಅದೇನೋ ಒಂದು ರೀತಿಯ ಪ್ರೀತಿ. ಹೀಗಾಗಿ, ಪ್ರಾಣಿಗಳಿಗೋಸ್ಕರ ಏನು ಮಾಡೋಕೂ ಸಿದ್ಧನಾಗಿಬಿಡುತ್ತಾನೆ. ಅದೇ ರೀತಿ, ಇಲ್ಲೊಬ್ಬ ರೈತ ಜೀವದ ಹಂಗು ತೊರೆದು ಬಾವಿಯಲ್ಲಿ ಸಿಲುಕಿದ್ದ ಬೆಕ್ಕೊಂದನ್ನು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.

ರೈತ ಮಹಾಂತೇಶ ಬಾವಿಯ ಪೊದೆಯಲ್ಲಿ ಸಿಲುಕಿಕೊಂಡಿದ್ದ ಬೆಕ್ಕನ್ನು ರಕ್ಷಿಸಿರುವ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಬನ್ನಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಬೆಕ್ಕೊಂದು ಬಾವಿಯ ನೀರಿಗೆ ಬಿದ್ದು‌ ಮೇಲಿನ ಪೊದೆಗೆ ಬಂದು ತನ್ನ ಪ್ರಾಣ ಉಳಿಸಿಕೊಂಡಿತ್ತು. ಕಳೆದ ಮೂರು‌ ದಿನಗಳಿಂದ ಬಾವಿಯಲ್ಲೇ ಸಿಲುಕಿಕೊಂಡಿತ್ತು. ಮೇಲೆ ಬರಲಾರದೇ ಬಾವಿಯ ಪೊದೆಯಲ್ಲಿ ನರಳಾಡುತ್ತಿತ್ತು.

ಬೆಕ್ಕಿನ ಸಂಕಟದ ಆರ್ತನಾದ‌ ಕೇಳಿ ಮಹಾಂತೇಶ ಮಾನವೀಯತೆ ಮೆರೆದಿದ್ದಾರೆ. ಹಗ್ಗದ ಸಹಾಯದಿಂದ ಬಾವಿಗೆ ಇಳಿದು ಬುಟ್ಟಿಯಲ್ಲಿ ಬೆಕ್ಕನ್ನು ಮೇಲಕ್ಕೆ ತಂದಿದ್ದಾರೆ. ಭಯ ತೊರೆದು ಬೆಕ್ಕಿನ ಜೀವ ಉಳಿಸಿದ ರೈತನಿಗೆ ಸಾರ್ವಜನಿಕರಿಂದ ಮೆಚ್ಚುಗೆಯ ಮಹಾಪುರವೇ ಹರಿದು ಬರುತ್ತಿದೆ. ಬೆಕ್ಕಿನ ರಕ್ಷಣಾ ಕಾರ್ಯದ ದೃಶ್ಯವನ್ನು ಸ್ಥಳೀಯ ಯುವಕರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದೆ.

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'