AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಲು ರೈತನ ಹರಸಾಹಸ.. ವಿಡಿಯೋ ಆಯ್ತು ಫುಲ್​ ವೈರಲ್​!

ಗದಗ: ಪ್ರಾಣಿಗಳಂದ್ರೆ ಮನುಷ್ಯನಿಗೆ ಅದೇನೋ ಒಂದು ರೀತಿಯ ಪ್ರೀತಿ. ಹೀಗಾಗಿ, ಪ್ರಾಣಿಗಳಿಗೋಸ್ಕರ ಏನು ಮಾಡೋಕೂ ಸಿದ್ಧನಾಗಿಬಿಡುತ್ತಾನೆ. ಅದೇ ರೀತಿ, ಇಲ್ಲೊಬ್ಬ ರೈತ ಜೀವದ ಹಂಗು ತೊರೆದು ಬಾವಿಯಲ್ಲಿ ಸಿಲುಕಿದ್ದ ಬೆಕ್ಕೊಂದನ್ನು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ. ರೈತ ಮಹಾಂತೇಶ ಬಾವಿಯ ಪೊದೆಯಲ್ಲಿ ಸಿಲುಕಿಕೊಂಡಿದ್ದ ಬೆಕ್ಕನ್ನು ರಕ್ಷಿಸಿರುವ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಬನ್ನಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಬೆಕ್ಕೊಂದು ಬಾವಿಯ ನೀರಿಗೆ ಬಿದ್ದು‌ ಮೇಲಿನ ಪೊದೆಗೆ ಬಂದು ತನ್ನ ಪ್ರಾಣ ಉಳಿಸಿಕೊಂಡಿತ್ತು. ಕಳೆದ ಮೂರು‌ ದಿನಗಳಿಂದ ಬಾವಿಯಲ್ಲೇ ಸಿಲುಕಿಕೊಂಡಿತ್ತು. […]

ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಲು ರೈತನ ಹರಸಾಹಸ.. ವಿಡಿಯೋ ಆಯ್ತು ಫುಲ್​ ವೈರಲ್​!
ಆಯೇಷಾ ಬಾನು
|

Updated on: Nov 22, 2020 | 1:10 PM

Share

ಗದಗ: ಪ್ರಾಣಿಗಳಂದ್ರೆ ಮನುಷ್ಯನಿಗೆ ಅದೇನೋ ಒಂದು ರೀತಿಯ ಪ್ರೀತಿ. ಹೀಗಾಗಿ, ಪ್ರಾಣಿಗಳಿಗೋಸ್ಕರ ಏನು ಮಾಡೋಕೂ ಸಿದ್ಧನಾಗಿಬಿಡುತ್ತಾನೆ. ಅದೇ ರೀತಿ, ಇಲ್ಲೊಬ್ಬ ರೈತ ಜೀವದ ಹಂಗು ತೊರೆದು ಬಾವಿಯಲ್ಲಿ ಸಿಲುಕಿದ್ದ ಬೆಕ್ಕೊಂದನ್ನು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.

ರೈತ ಮಹಾಂತೇಶ ಬಾವಿಯ ಪೊದೆಯಲ್ಲಿ ಸಿಲುಕಿಕೊಂಡಿದ್ದ ಬೆಕ್ಕನ್ನು ರಕ್ಷಿಸಿರುವ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಬನ್ನಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಬೆಕ್ಕೊಂದು ಬಾವಿಯ ನೀರಿಗೆ ಬಿದ್ದು‌ ಮೇಲಿನ ಪೊದೆಗೆ ಬಂದು ತನ್ನ ಪ್ರಾಣ ಉಳಿಸಿಕೊಂಡಿತ್ತು. ಕಳೆದ ಮೂರು‌ ದಿನಗಳಿಂದ ಬಾವಿಯಲ್ಲೇ ಸಿಲುಕಿಕೊಂಡಿತ್ತು. ಮೇಲೆ ಬರಲಾರದೇ ಬಾವಿಯ ಪೊದೆಯಲ್ಲಿ ನರಳಾಡುತ್ತಿತ್ತು.

ಬೆಕ್ಕಿನ ಸಂಕಟದ ಆರ್ತನಾದ‌ ಕೇಳಿ ಮಹಾಂತೇಶ ಮಾನವೀಯತೆ ಮೆರೆದಿದ್ದಾರೆ. ಹಗ್ಗದ ಸಹಾಯದಿಂದ ಬಾವಿಗೆ ಇಳಿದು ಬುಟ್ಟಿಯಲ್ಲಿ ಬೆಕ್ಕನ್ನು ಮೇಲಕ್ಕೆ ತಂದಿದ್ದಾರೆ. ಭಯ ತೊರೆದು ಬೆಕ್ಕಿನ ಜೀವ ಉಳಿಸಿದ ರೈತನಿಗೆ ಸಾರ್ವಜನಿಕರಿಂದ ಮೆಚ್ಚುಗೆಯ ಮಹಾಪುರವೇ ಹರಿದು ಬರುತ್ತಿದೆ. ಬೆಕ್ಕಿನ ರಕ್ಷಣಾ ಕಾರ್ಯದ ದೃಶ್ಯವನ್ನು ಸ್ಥಳೀಯ ಯುವಕರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದೆ.

Follow Us
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು