AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧ ಸಿಬ್ಬಂದಿಗೂ ವಕ್ಕರಿಸಿದ ಕೊರೊನಾ

ಬೆಂಗಳೂರು: ವಿಧಾನಸೌಧ ಮತ್ತು ವಿಕಾಸಸೌಧದ ಕೆಲ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗಾಗಿ ವಿಧಾನಸೌಧ ಮತ್ತು ವಿಕಾಸಸೌಧಗಳನ್ನ ಸಂಪೂರ್ಣವಾಗಿ ಸ್ಯಾನಿಟೈಸ್‌ ಮಾಡಲಾಗ್ತಿದೆ. ಈ ಸಂಬಂಧ ರಾಜ್ಯ ಸರ್ಕಾರ ಹಿಂದಿನ ದಿನವೇ ವಿಕಾಸಸೌಧ ಸಿಬ್ಬಂದಿಗೆ ರಜೆ ಘೋಷಿಸಿದೆ. ನಂತರ ವಿಕಾಸಸೌಧಕ್ಕೆ ಶುಕ್ರವಾರ ಇಡೀ ದಿನ ಸ್ಯಾನಿಟೈಸ್‌ ಮಾಡಲಾಗಿದೆ. ಇನ್ನೇನು ಎಲ್ಲ ಸರಿಹೋಯಿತು ಎನ್ನುವಷ್ಟರಲ್ಲಿ ಮತ್ತೊಂದು ಆಘಾತ ಬಂದೊದಗಿದೆ. ವಿಧಾನಸೌಧದ ಸಿಬ್ಬಂದಿಯೊಬ್ಬರಿಗೂ ಕೊರೊನಾ ಸೋಂಕು ಇರುವುದು ಕನ್ಫರ್ಮ್​‌ ಆಗಿದೆ. ರಜೆ ಮೇಲಿದ್ದ ವಿಧಾನಸೌಧ ಸಿಬ್ಬಂದಿಗೆ ಕೊರೊನಾ: ಕಳೆದ ಆರು […]

ವಿಧಾನಸೌಧ ಸಿಬ್ಬಂದಿಗೂ ವಕ್ಕರಿಸಿದ ಕೊರೊನಾ
Guru
| Edited By: |

Updated on:Jun 20, 2020 | 5:22 PM

Share

ಬೆಂಗಳೂರು: ವಿಧಾನಸೌಧ ಮತ್ತು ವಿಕಾಸಸೌಧದ ಕೆಲ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗಾಗಿ ವಿಧಾನಸೌಧ ಮತ್ತು ವಿಕಾಸಸೌಧಗಳನ್ನ ಸಂಪೂರ್ಣವಾಗಿ ಸ್ಯಾನಿಟೈಸ್‌ ಮಾಡಲಾಗ್ತಿದೆ.

ಈ ಸಂಬಂಧ ರಾಜ್ಯ ಸರ್ಕಾರ ಹಿಂದಿನ ದಿನವೇ ವಿಕಾಸಸೌಧ ಸಿಬ್ಬಂದಿಗೆ ರಜೆ ಘೋಷಿಸಿದೆ. ನಂತರ ವಿಕಾಸಸೌಧಕ್ಕೆ ಶುಕ್ರವಾರ ಇಡೀ ದಿನ ಸ್ಯಾನಿಟೈಸ್‌ ಮಾಡಲಾಗಿದೆ. ಇನ್ನೇನು ಎಲ್ಲ ಸರಿಹೋಯಿತು ಎನ್ನುವಷ್ಟರಲ್ಲಿ ಮತ್ತೊಂದು ಆಘಾತ ಬಂದೊದಗಿದೆ. ವಿಧಾನಸೌಧದ ಸಿಬ್ಬಂದಿಯೊಬ್ಬರಿಗೂ ಕೊರೊನಾ ಸೋಂಕು ಇರುವುದು ಕನ್ಫರ್ಮ್​‌ ಆಗಿದೆ.

ರಜೆ ಮೇಲಿದ್ದ ವಿಧಾನಸೌಧ ಸಿಬ್ಬಂದಿಗೆ ಕೊರೊನಾ: ಕಳೆದ ಆರು ದಿನಗಳಿಂದ ರಜೆಯ ಮೇಲಿದ್ದ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಜತೆಗೆ ಅವರ ಪತ್ನಿಗೂ ಕೊರೊನಾ ಸೋಂಕಿರೋದು ಪತ್ತೆಯಾಗಿದೆ. ಆಘಾತಕಾರಿಯಂದ್ರೆ ಈ ಸಿಬ್ಬಂದಿ ಗುರುವಾರ ನಡೆದ ಸಚಿವ ಸಂಪುಟ ಸಭೆಯ ನಂತರದ ಸುದ್ದಿಗೋಷ್ಠಿಯಲ್ಲೂ ಭಾಗಿಯಾಗಿದ್ರು. ಸಂಬಂಧಿಕರ ಮದುವೆ ನೆಪದಲ್ಲಿ ಕಳೆದ ಒಂದು ವಾರದಿಂದ ಸಿಬ್ಬಂದಿ ರಜೆ ಮೇಲಿದ್ದರು.

ನಾಲ್ಕು ದಿನಗಳ ಹಿಂದೆ ವಿಕಾಸಸೌಧದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಕೊರೊನಾ ದೃಢಪಟ್ಟಿತ್ತು. ಇದೀಗ ವಿಧಾನಸೌಧವನ್ನೂ ಕೂಡಾ ಈಗ ಸಂಪೂರ್ಣವಾಗಿ ಸ್ಯಾನಿಟೈಸ್‌ ಮಾಡಲಾಗ್ತಿದೆ. ಈ ನಡುವೆ ಆರೋಗ್ಯಾಧಿಕಾರಿಗಳು ಸೋಂಕಿತ ಸಿಬ್ಬಂದಿಯ ಪ್ರಾಥಮಿಕ ಸಂಪರ್ಕಿತರ ಶೋಧಕ್ಕಾಗಿ ಹರಸಾಹಸಪಡುತ್ತಿದ್ದಾರೆ.

Published On - 5:21 pm, Sat, 20 June 20

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ