AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧ ಸಿಬ್ಬಂದಿಗೂ ವಕ್ಕರಿಸಿದ ಕೊರೊನಾ

ಬೆಂಗಳೂರು: ವಿಧಾನಸೌಧ ಮತ್ತು ವಿಕಾಸಸೌಧದ ಕೆಲ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗಾಗಿ ವಿಧಾನಸೌಧ ಮತ್ತು ವಿಕಾಸಸೌಧಗಳನ್ನ ಸಂಪೂರ್ಣವಾಗಿ ಸ್ಯಾನಿಟೈಸ್‌ ಮಾಡಲಾಗ್ತಿದೆ. ಈ ಸಂಬಂಧ ರಾಜ್ಯ ಸರ್ಕಾರ ಹಿಂದಿನ ದಿನವೇ ವಿಕಾಸಸೌಧ ಸಿಬ್ಬಂದಿಗೆ ರಜೆ ಘೋಷಿಸಿದೆ. ನಂತರ ವಿಕಾಸಸೌಧಕ್ಕೆ ಶುಕ್ರವಾರ ಇಡೀ ದಿನ ಸ್ಯಾನಿಟೈಸ್‌ ಮಾಡಲಾಗಿದೆ. ಇನ್ನೇನು ಎಲ್ಲ ಸರಿಹೋಯಿತು ಎನ್ನುವಷ್ಟರಲ್ಲಿ ಮತ್ತೊಂದು ಆಘಾತ ಬಂದೊದಗಿದೆ. ವಿಧಾನಸೌಧದ ಸಿಬ್ಬಂದಿಯೊಬ್ಬರಿಗೂ ಕೊರೊನಾ ಸೋಂಕು ಇರುವುದು ಕನ್ಫರ್ಮ್​‌ ಆಗಿದೆ. ರಜೆ ಮೇಲಿದ್ದ ವಿಧಾನಸೌಧ ಸಿಬ್ಬಂದಿಗೆ ಕೊರೊನಾ: ಕಳೆದ ಆರು […]

ವಿಧಾನಸೌಧ ಸಿಬ್ಬಂದಿಗೂ ವಕ್ಕರಿಸಿದ ಕೊರೊನಾ
Guru
| Edited By: |

Updated on:Jun 20, 2020 | 5:22 PM

Share

ಬೆಂಗಳೂರು: ವಿಧಾನಸೌಧ ಮತ್ತು ವಿಕಾಸಸೌಧದ ಕೆಲ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗಾಗಿ ವಿಧಾನಸೌಧ ಮತ್ತು ವಿಕಾಸಸೌಧಗಳನ್ನ ಸಂಪೂರ್ಣವಾಗಿ ಸ್ಯಾನಿಟೈಸ್‌ ಮಾಡಲಾಗ್ತಿದೆ.

ಈ ಸಂಬಂಧ ರಾಜ್ಯ ಸರ್ಕಾರ ಹಿಂದಿನ ದಿನವೇ ವಿಕಾಸಸೌಧ ಸಿಬ್ಬಂದಿಗೆ ರಜೆ ಘೋಷಿಸಿದೆ. ನಂತರ ವಿಕಾಸಸೌಧಕ್ಕೆ ಶುಕ್ರವಾರ ಇಡೀ ದಿನ ಸ್ಯಾನಿಟೈಸ್‌ ಮಾಡಲಾಗಿದೆ. ಇನ್ನೇನು ಎಲ್ಲ ಸರಿಹೋಯಿತು ಎನ್ನುವಷ್ಟರಲ್ಲಿ ಮತ್ತೊಂದು ಆಘಾತ ಬಂದೊದಗಿದೆ. ವಿಧಾನಸೌಧದ ಸಿಬ್ಬಂದಿಯೊಬ್ಬರಿಗೂ ಕೊರೊನಾ ಸೋಂಕು ಇರುವುದು ಕನ್ಫರ್ಮ್​‌ ಆಗಿದೆ.

ರಜೆ ಮೇಲಿದ್ದ ವಿಧಾನಸೌಧ ಸಿಬ್ಬಂದಿಗೆ ಕೊರೊನಾ: ಕಳೆದ ಆರು ದಿನಗಳಿಂದ ರಜೆಯ ಮೇಲಿದ್ದ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಜತೆಗೆ ಅವರ ಪತ್ನಿಗೂ ಕೊರೊನಾ ಸೋಂಕಿರೋದು ಪತ್ತೆಯಾಗಿದೆ. ಆಘಾತಕಾರಿಯಂದ್ರೆ ಈ ಸಿಬ್ಬಂದಿ ಗುರುವಾರ ನಡೆದ ಸಚಿವ ಸಂಪುಟ ಸಭೆಯ ನಂತರದ ಸುದ್ದಿಗೋಷ್ಠಿಯಲ್ಲೂ ಭಾಗಿಯಾಗಿದ್ರು. ಸಂಬಂಧಿಕರ ಮದುವೆ ನೆಪದಲ್ಲಿ ಕಳೆದ ಒಂದು ವಾರದಿಂದ ಸಿಬ್ಬಂದಿ ರಜೆ ಮೇಲಿದ್ದರು.

ನಾಲ್ಕು ದಿನಗಳ ಹಿಂದೆ ವಿಕಾಸಸೌಧದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಕೊರೊನಾ ದೃಢಪಟ್ಟಿತ್ತು. ಇದೀಗ ವಿಧಾನಸೌಧವನ್ನೂ ಕೂಡಾ ಈಗ ಸಂಪೂರ್ಣವಾಗಿ ಸ್ಯಾನಿಟೈಸ್‌ ಮಾಡಲಾಗ್ತಿದೆ. ಈ ನಡುವೆ ಆರೋಗ್ಯಾಧಿಕಾರಿಗಳು ಸೋಂಕಿತ ಸಿಬ್ಬಂದಿಯ ಪ್ರಾಥಮಿಕ ಸಂಪರ್ಕಿತರ ಶೋಧಕ್ಕಾಗಿ ಹರಸಾಹಸಪಡುತ್ತಿದ್ದಾರೆ.

Published On - 5:21 pm, Sat, 20 June 20

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?