AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ದಿನಕ್ಕೆ 51 ಕೋಟಿ ಗಳಿಸಿದ ‘ಖುಷಿ’: ಸಿನಿಮಾದ ಬಜೆಟ್ ಎಷ್ಟು?

ಸಾಕಷ್ಟು ಕುತೂಹಲ ಹುಟ್ಟು ಹಾಕಿದ್ದ 'ಖುಷಿ' ಸಿನಿಮಾ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಬಿಡುಗಡೆಯಾದ ಎರಡು ದಿನದಲ್ಲಿದ್ದೇ 51 ಕೋಟಿ ಗಳಿಸಿಕೊಂಡಿದೆ. ಆದರೆ ಸಿನಿಮಾದ ಬಜೆಟ್ ಬಗ್ಗೆ ಯಾವುದೇ ಮಾಹಿತಿಯನ್ನು ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ಆದರೆ ಈ ಸಿನಿಮಾದ ಬಜೆಟ್ ಬಗ್ಗೆ ಕೆಲ ಮಾಹಿತಿಗಳು ಹೊರಬಿದ್ದಿದೆ.

ಎರಡು ದಿನಕ್ಕೆ 51 ಕೋಟಿ ಗಳಿಸಿದ 'ಖುಷಿ': ಸಿನಿಮಾದ ಬಜೆಟ್ ಎಷ್ಟು?
ವಿಜಯ್-ಸಮಂತಾ
Follow us
TV9 Web
| Updated By: ಮಂಜುನಾಥ ಸಿ.

Updated on:Sep 03, 2023 | 5:06 PM

ತೆಲುಗಿನ ಬಹುನೀರಿಕ್ಷಿತ ಸಿನಿಮಾ ‘ಖುಷಿ’ (Kushi) ಸೆಪ್ಟೆಂಬರ್ 1 ರಂದು ತೆರೆಕಂಡಿದೆ. ಸಮಂತಾ ರುತ್ ಪ್ರಭು (Samantha), ವಿಜಯ್ ದೇವರಕೊಂಡ (Vijay Deverakonda) ಅಭಿನಯದ ಈ ಸಿನಿಮಾ ಪ್ರೇಕ್ಷಕರಿಂದ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಂಡಿದೆ. ಕನ್ನಡ ಸೇರಿದಂತೆ 4 ಭಾಷೆಗಳಲ್ಲಿ ಸಿನಿಮಾ ಬಿಡುಗಡೆಗೊಂಡಿದೆ. ಶಿವ ನಿರ್ವಾಣ ನಿರ್ದೇಶನದಲ್ಲಿ ಮೂಡಿಬಂದ ಈ ಸಿನಿಮಾ ಫ್ಯಾಮಿಲಿ ಆಡಿಯನ್ಸ್ ಅನ್ನು ತಲುಪುವಲ್ಲಿ ಯಶಸ್ವಿಯಾಗಿದೆ. ಉತ್ತಮ ಪ್ರದರ್ಶನ ಕಾಣುತ್ತಿರುವ ‘ಖುಷಿ’ ಸಿನಿಮಾ ಎರಡು ದಿನದಲ್ಲಿ 51 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಭರ್ಜರಿ ಗಳಿಕೆ ಮಾಡಿರುವ ಈ ಸಿನಿಮಾದ ಬಜೆಟ್ ಬಗ್ಗೆ ಇದ್ದ ಗೊಂದಲ ಈಗ ತಕ್ಕ ಮಟ್ಟಿಗೆ ಬಗೆಹರಿದಿದೆ.

‘ಖುಷಿ’ ಸಿನಿಮಾವನ್ನು ‘ಮೈತ್ರಿ ಮೂವಿ ಮೇಕರ್ಸ್’ನಿರ್ಮಾಣ ಮಾಡಿದೆ. ಆದರೆ ಇದವರೆಗೂ ಸಿನಿಮಾದ ಬಜೆಟ್ ಬಗ್ಗೆ ಯಾವುದೇ ಮಾಹಿತಿಯನ್ನು ನಿರ್ಮಾಣ ಸಂಸ್ಥೆ ಬಿಟ್ಟುಕೊಟ್ಟಿಲ್ಲ. ಆದರೆ ಕೆಲ ಮೂಲಗಳ ಪ್ರಕಾರ ಈ ಸಿನಿಮಾ 40 ರಿಂದ 50 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡಿದೆ ಎನ್ನಲಾಗಿದೆ. ಸಿನಿಮಾದ ಬಜೆಟ್​ನ ದೊಡ್ಡ ಪಾಲು ನಟರ ಸಂಭಾವನೆ ಎನ್ನಲಾಗಿದೆ. ನಟ ವಿಜಯ್ ದೇವರಕೊಂಡ ‘ಖುಷಿ’ ಸಿನಿಮಾಕ್ಕಾಗಿ 21 ಕೋಟಿ ರೂಪಾಯಿ ಪಡೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಇನ್ನು ಸಿನಿಮಾದ ನಟಿ ಸಮಂತಾ 4.5 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ. ಸಿನಿಮಾದಲ್ಲಿ ಅನುಭವಿ ಕಲಾವಿದರಾದ ಸಚಿನ್ ಖೇಡೆಕರ್, ಮುರಳಿ ಶರ್ಮಾ, ಲಕ್ಷ್ಮೀ, ಶರನ್ಯ ಪೊನ್ವನ್ನನ್ ಇನ್ನಿತರರು ಭಾಗಿಯಾಗಿರುವುದರಿಂದ ಸಿನಿಮಾದ ಬಜೆಟ್ ನಲ್ಲಿ ನಟರ ಸಂಭಾವನೆಯೇ ಹೆಚ್ಚಿದೆ ಎನ್ನಲಾಗಿದೆ. ಟರ್ಕಿ, ಕಾಶ್ಮೀರ, ಹಾಗೂ ಅಲಪ್ಪಿಗಳಲ್ಲಿ ಸಿನಿಮಾದ ಕೆಲ ದೃಶ್ಯಗಳನ್ನು ಶೂಟ್ ಮಾಡಲಾಗಿದೆ.

ಇದನ್ನೂ ಓದಿ:‘ಖುಷಿ’ ಚಿತ್ರದ ಬೆಡ್​ ರೂಮ್​ ದೃಶ್ಯ ವೈರಲ್: ಸಮಂತಾ, ವಿಜಯ್ ದೇವರಕೊಂಡ ಬಗ್ಗೆ ಜನರ ಕಮೆಂಟ್​ ಏನು?

ಸಿನಿಮಾ ಉತ್ತಮ ಕಲೆಕ್ಷನ್ ಮಾಡುತ್ತಿರುವುದರಿಂದ ವಿಜಯ್ ದೇವರುಕೊಂಡ ಮತ್ತೆ ಗೆಲುವಿನ ನಗೆ ಬೀರಿದ್ದಾರೆ. ಈ ಹಿಂದಿನ ಸಿನಿಮಾಗಳು ಬಾಕ್ಸ್ ಆಫೀಸ್ ನಲ್ಲಿ ಸದ್ದು ಮಾಡಲು ವಿಫಲವಾದ್ದರಿಂದ ‘ಖುಷಿ’ ಸಿನಿಮಾದ ಯಶಸ್ಸು ಅಗತ್ಯವಾಗಿತ್ತು. ಈ ಸಿನಿಮಾ ನಿರೀಕ್ಷೆಯನ್ನು ಸುಳ್ಳಾಗಿಸದೆ ಉತ್ತಮ ಪ್ರಕ್ರಿಯೆ ಪಡೆದುಕೊಳ್ಳುತ್ತಿದ್ದೆ. ಎರಡು ವಿಭಿನ್ನ ಆದರ್ಶಗಳನ್ನು ಪಾಲಿಸುವ ಭಿನ್ನ ಸಂಪ್ರದಾಯಗಳ ಮನೆತನದ ಯುವಕ ಯುವತಿ ಪ್ರೀತಿಸಿ ಮದುವೆಯಾದಾಗ ಎದುರಿಸುವ ಸಮಸ್ಯೆಗಳನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ. ರೋಮ್ಯಾಂಟಿಕ್ ಕಾಮಿಡಿ ಸಿನಿಮಾ ಇದಾಗಿದ್ದು, ಪ್ರೇಕ್ಷಕರನ್ನು ನಗಿಸುವಲ್ಲಿ ಯಶಸ್ವಿಯಾಗಿದೆ. ಸಂಗೀತ ನಿರ್ದೇಶಕ ಹೇಶಾಮ್ ಅಬ್ದುಲ್ ವಾಹಾಬ್ ಹಾಡುಗಳು ಪದೇ ಪದೇ ಗುನುಗುವಂತಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:11 pm, Sun, 3 September 23

ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ