Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವವಿಖ್ಯಾತ ಮೈಸೂರು ದಸರಾ ಆರಂಭವಾಗಿದ್ದು ಹಂಪಿ ವಿಜಯನಗರದ ಅರಸರಿಂದ..

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದರದೇ ಆದ ವೈಶಿಷ್ಟ್ಯ, ಇತಿಹಾಸ, ವೈಭವವಿದೆ. ಇಡೀ ವಿಶ್ವದಲ್ಲೇ ಹೆಸರು ಮಾಡಿರೋ ಕರ್ನಾಟಕದ ಹಿರಿಮೆಯನ್ನು ಹೆಚ್ಚಿಸಿರೋ ದಸರಾ ಶುರುವಾಗಿದ್ದು ಹೇಗೆ ಗೊತ್ತಾ? ಇದರ ಹಿಂದಿರುವ ಇತಿಹಾಸ ಗೊತ್ತಾ.. ಇಲ್ಲಿದೆ ಅದರ ತುಣುಕು. ನವರಾತ್ರಿಯನ್ನ ಧಾರ್ಮಿಕ ಹಾಗು ಸಾಂಸ್ಕೃತಿಕವಾಗಿ ಆಚರಿಸಿದ್ದು ಮತ್ತು ಧಾರ್ಮಿಕ ಆಚರಣೆಯ ನವರಾತ್ರಿಗೆ ಹೊಸ ಆಯಾಮ ನೀಡಿದವರು ವಿಜಯನಗರದ ಅರಸರು. ಈ ಸಾಮ್ರಾಜ್ಯದ ಕೃಷ್ಣ ದೇವರಾಯನ ಕಾಲದಲ್ಲಿ ದಸರಾ ಆಚರಣೆ ಉತ್ತುಂಗದಲ್ಲಿತ್ತು. ವಿಜಯನಗರ ದಸರಾ ನೋಡಲು ವಿದೇಶಿ ಪ್ರವಾಸಿಗರು […]

ವಿಶ್ವವಿಖ್ಯಾತ ಮೈಸೂರು ದಸರಾ ಆರಂಭವಾಗಿದ್ದು ಹಂಪಿ ವಿಜಯನಗರದ ಅರಸರಿಂದ..
Follow us
ಆಯೇಷಾ ಬಾನು
|

Updated on:Oct 17, 2020 | 9:24 AM

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದರದೇ ಆದ ವೈಶಿಷ್ಟ್ಯ, ಇತಿಹಾಸ, ವೈಭವವಿದೆ. ಇಡೀ ವಿಶ್ವದಲ್ಲೇ ಹೆಸರು ಮಾಡಿರೋ ಕರ್ನಾಟಕದ ಹಿರಿಮೆಯನ್ನು ಹೆಚ್ಚಿಸಿರೋ ದಸರಾ ಶುರುವಾಗಿದ್ದು ಹೇಗೆ ಗೊತ್ತಾ? ಇದರ ಹಿಂದಿರುವ ಇತಿಹಾಸ ಗೊತ್ತಾ.. ಇಲ್ಲಿದೆ ಅದರ ತುಣುಕು.

ನವರಾತ್ರಿಯನ್ನ ಧಾರ್ಮಿಕ ಹಾಗು ಸಾಂಸ್ಕೃತಿಕವಾಗಿ ಆಚರಿಸಿದ್ದು ಮತ್ತು ಧಾರ್ಮಿಕ ಆಚರಣೆಯ ನವರಾತ್ರಿಗೆ ಹೊಸ ಆಯಾಮ ನೀಡಿದವರು ವಿಜಯನಗರದ ಅರಸರು. ಈ ಸಾಮ್ರಾಜ್ಯದ ಕೃಷ್ಣ ದೇವರಾಯನ ಕಾಲದಲ್ಲಿ ದಸರಾ ಆಚರಣೆ ಉತ್ತುಂಗದಲ್ಲಿತ್ತು. ವಿಜಯನಗರ ದಸರಾ ನೋಡಲು ವಿದೇಶಿ ಪ್ರವಾಸಿಗರು ಕೂಡ ಆಗಮಿಸುತ್ತಿದ್ರು. ವಿಜಯನಗರ ಸಾಮ್ರಾಜ್ಯ ಪಥನದ ಬಳಿಕ ಶ್ರೀರಂಗಪಟ್ಟಣದಲ್ಲಿ ದಸರಾ ಆಚರಣೆ ಶುರುವಾಯ್ತು. ಮೈಸೂರು ಒಡೆಯ ರಾಜಾ ಒಡೆಯರ್ ಶ್ರೀರಂಗಪಟ್ಟಣದಲ್ಲಿ ಮೊದಲ ಬಾರಿಗೆ ದಸರಾ ಆಚರಿಸಿದವರು.

ಮಹಿಷಾಸುರನನ್ನು ಮರ್ದಿಸಿದ ನೆನಪಿಗಾಗಿ ಆಚರಿಸಲ್ಪಡುವುದೇ ದಸರಾ ಹಬ್ಬ: ಮೈಸೂರು ದಸರಕ್ಕೆ 450 ವರ್ಷದ ಭವ್ಯ ಇತಿಹಾಸವಿದೆ. 15ನೇ ಶತಮಾನದಲ್ಲಿ ವಿಜಯನಗರದ ಅರಸರು ಮೊಟ್ಟ ಮೊದಲ ಬಾರಿಗೆ ದಸರೆಯನ್ನು ಆಚರಿಸಿದ್ದರು. ಇವರ ನಂತರ ದಸರಾ ಆಚರಣೆಯ ಪರಂಪರೆಯನ್ನ ಮೈಸೂರ ಅರಸರು ಮುಂದುವರೆಸಿದ್ರು. 1610 ರಲ್ಲಿ ಮೊದಲ ಬಾರಿಗೆ ಮೈಸೂರು ದಸರೆಯನ್ನ ಅಂದಿನ ರಾಜಧಾನಿಯಾಗಿದ್ದ ಶ್ರೀರಂಗಪಟ್ಟಣದಲ್ಲಿ ಗೌರಿ ಕಡುವೆ ಎಂಬ ಸ್ಥಳದಲ್ಲಿ ಆಚರಿಸಲಾಗಿತ್ತು. ಬಳಿಕ 1972 ರಲ್ಲಿ ದಸರಾ ಹಬ್ಬವನ್ನ ನಾಡಹಬ್ಬವನ್ನಾಗಿ ಘೋಷಿಸಲಾಯಿತು.

ಮೊಟ್ಟ ಮೊದಲ ಬಾರಿಗೆ ದಸರಾ ಆಚರಿಸಿದ ಮೈಸೂರು ಅರಸ ರಾಜ ಒಡೆಯರ್ 1578 ರಿಂದ 1617 ರವರೆಗೆ ಮೈಸೂರ ಅರಸರಾಗಿದ್ದರು. 1805 ರಲ್ಲಿ ಮೂರನೇ ಕೃಷ್ಣ ರಾಜ ಒಡೆಯರ್ ವಿಶೇಷ ದರ್ಬಾರಿಗೆ ಚಾಲನೆ ನೀಡಿದ್ರು. 1880ರಲ್ಲಿ ಮೊದಲ ದಸರಾ ವಸ್ತು ಪ್ರದರ್ಶನ ನಡೆಸಲಾಯಿತು. ಹತ್ತನೇ ಚಾಮರಾಜ ಒಡೆಯರ್ ಮೊದಲ ದಸರಾ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿದ್ರು.

Published On - 8:45 am, Sat, 17 October 20

Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ