AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಂಬೆಗೂ ಹುಳಿ ಹಿಂಡೈತಿ.. ಬದುಕು ಹಾಳ್ ಮಾಡೈತಿ ಈ ಕೊರೊನಾ’

ವಿಜಯಪುರ: ಜಿಲ್ಲೆ ನಿಂಬೆ ಮತ್ತು ದ್ರಾಕ್ಷಿಯ ತವರೂರು ಎಂದೇ ಪ್ರಸಿದ್ಧ. ಇದಲ್ಲದೆ ಒಳ್ಳೆಯ ಹವಾಮಾನ, ಅನುಕೂಲಕರ ತಾಪಮಾನ ಹಾಗೂ ಫಲವತ್ತಾದ ಭೂಮಿಯನ್ನು ಹೊಂದಿರುವ ಈ ಜಿಲ್ಲೆಯಲ್ಲಿ ದಾಳಿಂಬೆ ಹಾಗೂ ಸದ್ಯ ಡ್ರ್ಯಾಗನ್ ಫ್ರೂಟನ್ನು ಸಹ ಹೇರಳವಾಗಿ ಬೆಳೆಯುತ್ತಾರೆ. ಇಲ್ಲಿನ ಕೃಷಿ ಬೆಳೆಗಳು ವಿವಿಧ ರಾಷ್ಟ್ರಗಳಿಗೂ ರಫ್ತಾಗುತ್ತದೆ. ಅದರಲ್ಲಿ ನಿಂಬೆಹಣ್ಣು ಕೂಡ ಒಂದು. ಸದ್ಯ ಜಿಲ್ಲೆಯ 8,500 ಹೆಕ್ಟೇರ್ ಪ್ರದೇಶದಲ್ಲಿ ನಿಂಬೆಯನ್ನು ಬೆಳೆಯಲಾಗುತ್ತಿದೆ. ನಿಂಬೆ ಮಾರಾಟಕ್ಕೆ ಹುಳಿ ಹಿಂಡಿದ ಕೊರೊನಾ ಇಂಥ ಉತ್ತಮ ಗುಣಮಟ್ಟದ ನಿಂಬೆಯನ್ನು ಬೆಳೆಯುವ ರೈತರಿಗೆ […]

‘ನಿಂಬೆಗೂ ಹುಳಿ ಹಿಂಡೈತಿ.. ಬದುಕು ಹಾಳ್ ಮಾಡೈತಿ ಈ ಕೊರೊನಾ’
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on:Jun 17, 2020 | 1:32 PM

Share

ವಿಜಯಪುರ: ಜಿಲ್ಲೆ ನಿಂಬೆ ಮತ್ತು ದ್ರಾಕ್ಷಿಯ ತವರೂರು ಎಂದೇ ಪ್ರಸಿದ್ಧ. ಇದಲ್ಲದೆ ಒಳ್ಳೆಯ ಹವಾಮಾನ, ಅನುಕೂಲಕರ ತಾಪಮಾನ ಹಾಗೂ ಫಲವತ್ತಾದ ಭೂಮಿಯನ್ನು ಹೊಂದಿರುವ ಈ ಜಿಲ್ಲೆಯಲ್ಲಿ ದಾಳಿಂಬೆ ಹಾಗೂ ಸದ್ಯ ಡ್ರ್ಯಾಗನ್ ಫ್ರೂಟನ್ನು ಸಹ ಹೇರಳವಾಗಿ ಬೆಳೆಯುತ್ತಾರೆ. ಇಲ್ಲಿನ ಕೃಷಿ ಬೆಳೆಗಳು ವಿವಿಧ ರಾಷ್ಟ್ರಗಳಿಗೂ ರಫ್ತಾಗುತ್ತದೆ. ಅದರಲ್ಲಿ ನಿಂಬೆಹಣ್ಣು ಕೂಡ ಒಂದು. ಸದ್ಯ ಜಿಲ್ಲೆಯ 8,500 ಹೆಕ್ಟೇರ್ ಪ್ರದೇಶದಲ್ಲಿ ನಿಂಬೆಯನ್ನು ಬೆಳೆಯಲಾಗುತ್ತಿದೆ.

ನಿಂಬೆ ಮಾರಾಟಕ್ಕೆ ಹುಳಿ ಹಿಂಡಿದ ಕೊರೊನಾ ಇಂಥ ಉತ್ತಮ ಗುಣಮಟ್ಟದ ನಿಂಬೆಯನ್ನು ಬೆಳೆಯುವ ರೈತರಿಗೆ ಮಾತ್ರ ಇದೀಗ ಬೀದಿಗೆ ಬೀಳುವ ಸ್ಥಿತಿ ಎದುರಾಗಿದೆ. ಇದಕ್ಕೆ ಪ್ರಮುಖ ಕಾರಣ; ನಿಮ್ಮೆಲ್ಲರಿಗೂ ಗೊತ್ತಿರುವಂತೆ ಲಾಕ್​ಡೌನ್​.

ಸ್ವತಃ ರೈತರೇ ಹೇಳುವಂತೆ ಫೆಬ್ರುವರಿಯಿಂದ ಹಿಡಿದು ಜೂನ್​ವರೆಗೆ ನಿಂಬೆ ಬೆಳೆಗೆ ಉತ್ತಮ ದರ ಸಿಗುತ್ತಿತ್ತಂತೆ. ಆದರೆ ಕೇಂದ್ರ ಸರ್ಕಾರ ಘೋಷಿಸಿದ ದೇಶವ್ಯಾಪಿ ಲಾಕ್​ಡೌನ್ ಇಂದ ರೈತರಿಗೆ ಭಾರಿ ಹೊಡೆತ ಬಿತ್ತು. ಸೂಕ್ತ ಸಮಯದಲ್ಲಿ ನಿಂಬೆಯನ್ನು ಮಾರಾಟ ಮಾಡೋಕಾಗದೆ ಕೊನೆಗೆ ಬೆಳೆದ ಬೆಳೆಯನ್ನು ತಿಪ್ಪೆಗೆ ಸುರಿಯುವಂತಾಯ್ತು.

ದರ ಕುಸಿತದಿಂದ ಗಾಯದ ಮೇಲೆ ಬರೆ ಸದ್ಯ ಲಾಕ್​ಡೌನ್ ಸಡಿಲಿಕೆ ಆಗಿದೆ. ಮಾರಾಟ ಮಾಡಲು ಮಾರುಕಟ್ಟೆಗಳು ಸಹ ಓಪನ್ ಆಗಿವೆ. ಹೀಗೆಂದು ಭಾವಿಸಿ ತುಸು ಸಂತಸಗೊಂಡ ನಿಂಬೆ ಬೆಳೆಗಾರರಿಗೆ ಮತ್ತೊಂದು ಶಾಕ್ ಎದುರಾಗಿದೆ; ನಿಂಬೆ ದರದಲ್ಲಿ ಕುಸಿತ.

ವಿಜಯಪುರದ ನಿಂಬೆಕಾಯಿ ವಹಿವಾಟಿನ ಭಾಷೆಯಲ್ಲಿ ಒಂದು ಮೂಟೆಯನ್ನ ಡಾಗ್ ಎಂದು ಕರೆಯುತ್ತಾರೆ. ಇಂಥ ಒಂದು ಮೂಟೆಯಲ್ಲಿ 1 ಸಾವಿರ ನಿಂಬೆಕಾಯಿಗಳಿರುತ್ತವೆ. ಸದ್ಯಕ್ಕೆ ಒಂದು ಡಾಗ್​ ನಿಂಬೆ 300 ರಿಂದ 400 ರೂಪಾಯಿಗೆ ಮಾತ್ರ ಮಾರಾಟವಾಗ್ತಿದ್ಯಂತೆ. ಈ ದಿಢೀರ್​ ದರ ಕುಸಿತದಿಂದ ನಿಂಬೆ ಬೆಳೆಗಾರರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಸೂಕ್ತ ನೀರಿಲ್ಲದಿದ್ರೂ ಟ್ಯಾಂಕರ್ ಮೂಲಕ ನೀರು ತರಿಸಿ, ಗೊಬ್ಬರ ಹಾಕಿ ಬೆಳೆದ ನಿಂಬೆಗೆ ಒಳ್ಳೆಯ ಬೆಲೆಯೇ ಇಲ್ಲದಂತಾಗಿದೆ. ಇಲ್ಲಿನ ರೈತರು ಹೇಳುವ ಪ್ರಕಾರ ಒಂದು ಮೂಟೆ ನಿಂಬೆಯನ್ನ ಬೆಳೆದು ಮಾರುಕಟ್ಟೆಗೆ ತರಲು ತಗಲುವ ಖರ್ಚು ಸರಿಸುಮಾರು 300 ರೂಪಾಯಿ. ಜೊತೆಗೆ ಮಾರುಕಟ್ಟೆಯ ಮಧ್ಯವರ್ತಿಗಳಿಗೆ ಕಮೀಷನ್​ ಸಹ ನೀಡಬೇಕಂತೆ. ಹೀಗಾಗಿ ಬರುವ ಲಾಭ ಅಷ್ಟಕಷ್ಟೇ ಎಂದು ಬೆಳೆಗಾರರು ಕಂಗಾಲಾಗಿ ಹೋಗಿದ್ದಾರೆ.

ಇತ್ತ ಮಾರುಕಟ್ಟೆಯ ವರ್ತಕರು ನಿಂಬೆಯನ್ನು ನಾವು ಖರೀದಿ ಮಾಡಿ ದೂರದ ದೆಹಲಿ, ಪಂಜಾಬ್ ಮತ್ತು ಉತ್ತರ ಪ್ರದೇಶಕ್ಕೆ ಕಳುಹಿಸುತ್ತಿದ್ದೆವು. ಆದರೆ ಕೊರೊನಾದಿಂದ ಈಗ ಯಾರೊಬ್ಬರೂ ಖರೀದಿಗೆ ಬಂದಿಲ್ಲ ಎಂದು ಹೇಳಿದ್ದಾರೆ. ತಮ್ಮ ಅಸಹಾಯಕತೆಯನ್ನು ತೋಡಿಕೊಂಡ ವರ್ತಕರು ಲಾಕ್​ಡೌನ್​ ಸಡಿಲಿಕೆ ನಂತರ ನಾವೇ ಅಲ್ಲಿಗೆ ರಫ್ತು ಮಾಡಿದ್ವಿ. ಆದರೆ ಅದಕ್ಕೆ ತಗಲಿದ ಖರ್ಚಿಂದ ನಮಗೂ ಲಾಭ ಸಿಕ್ಕಿಲ್ಲ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಒಟ್ನಲ್ಲಿ, ಕೊರೊನಾ ವಿಜಯಪುರದ ನಿಂಬೆ ಬೆಳೆಗಾರರ ಮತ್ತು ವರ್ತಕರ ಬಾಳಿಗೆ ಹುಳಿ ಹಿಂಡುಬಿಟ್ಟಿದೆ. -ಅಶೋಕ ಯಡಳ್ಳಿ

Published On - 1:52 am, Tue, 16 June 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ