AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹದ ಅಬ್ಬರದ ನಡುವೆ ಭರ್ಜರಿ ಖಾಕಿ ಲಂಚಾವತಾರ -ವಿಜಯಪುರ ಗ್ರಾಮಸ್ಥರ ಆರೋಪ

ವಿಜಯಪುರ: ಮಹಾರಾಷ್ಟ್ರದ ಉಜನಿ ಮತ್ತು ಮೀರ್ ಜಲಾಶಯದಿಂದ ಭೀಮಾನದಿಗೆ ಅಪಾರ ಪ್ರಮಾಣದಲ್ಲಿ ನೀರು ಬಿಡುಗಡೆಯಾಗುತ್ತಿದ್ದು, ನದಿ ವ್ಯಾಪ್ತಿಯಲ್ಲಿದ್ದ 8 ಬ್ಯಾರೇಜ್‌ಗಳು ಜಲಾವೃತವಾಗಿವೆ. ಅಂದಾಜು 25 ರಿಂದ 30 ಸಾವಿರ ಕ್ಯೂಸೆಕ್ ನೀರನ್ನು ಹರಿಬಿಡಲಾಗಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರದ ಸಮಾನಾಂತರ ಬ್ಯಾರೇಜ್​ಗಳಾದ ಭಂಡಾರ ಕವಟೆ, ದಸೂರ, ಉಮರಜ್, ಉಮರಾಣಿ, ಚಣೆಗಾಂವ್, ಹಿಂಗಣಿ, ಧೂಳಖೇಡ್, ಸೊನ್ನ ಬ್ಯಾರೇಜ್​ಗಳು ಜಲಾವೃತವಾಗಿವೆ. ಇದೀಗ, ಬ್ಯಾರೇಜ್ ಮೂಲಕ ಮಹಾರಾಷ್ಟ್ರ ಹಾಗೂ ಕರ್ನಾಟಕ ನಡುವೆ ಇದ್ದ ಸಂಪರ್ಕ ಕಟ್ ಆಗಿದೆ. ನೀರಿನ ರಭಸ ಹೆಚ್ಚಾಗಿರುವುದರಿಂದ ರೈತರ […]

ಪ್ರವಾಹದ ಅಬ್ಬರದ ನಡುವೆ ಭರ್ಜರಿ ಖಾಕಿ ಲಂಚಾವತಾರ -ವಿಜಯಪುರ ಗ್ರಾಮಸ್ಥರ ಆರೋಪ
ಸಾಧು ಶ್ರೀನಾಥ್​
| Edited By: |

Updated on: Sep 20, 2020 | 3:06 PM

Share

ವಿಜಯಪುರ: ಮಹಾರಾಷ್ಟ್ರದ ಉಜನಿ ಮತ್ತು ಮೀರ್ ಜಲಾಶಯದಿಂದ ಭೀಮಾನದಿಗೆ ಅಪಾರ ಪ್ರಮಾಣದಲ್ಲಿ ನೀರು ಬಿಡುಗಡೆಯಾಗುತ್ತಿದ್ದು, ನದಿ ವ್ಯಾಪ್ತಿಯಲ್ಲಿದ್ದ 8 ಬ್ಯಾರೇಜ್‌ಗಳು ಜಲಾವೃತವಾಗಿವೆ.

ಅಂದಾಜು 25 ರಿಂದ 30 ಸಾವಿರ ಕ್ಯೂಸೆಕ್ ನೀರನ್ನು ಹರಿಬಿಡಲಾಗಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರದ ಸಮಾನಾಂತರ ಬ್ಯಾರೇಜ್​ಗಳಾದ ಭಂಡಾರ ಕವಟೆ, ದಸೂರ, ಉಮರಜ್, ಉಮರಾಣಿ, ಚಣೆಗಾಂವ್, ಹಿಂಗಣಿ, ಧೂಳಖೇಡ್, ಸೊನ್ನ ಬ್ಯಾರೇಜ್​ಗಳು ಜಲಾವೃತವಾಗಿವೆ.

ಇದೀಗ, ಬ್ಯಾರೇಜ್ ಮೂಲಕ ಮಹಾರಾಷ್ಟ್ರ ಹಾಗೂ ಕರ್ನಾಟಕ ನಡುವೆ ಇದ್ದ ಸಂಪರ್ಕ ಕಟ್ ಆಗಿದೆ. ನೀರಿನ ರಭಸ ಹೆಚ್ಚಾಗಿರುವುದರಿಂದ ರೈತರ ಪಂಪ್​ಸೆಟ್​ಗಳು ಹಾಗೂ ಪೈಪ್​ಗಳು ನದಿಯಲ್ಲಿ ಕೊಚ್ಚಿ ಹೋಗಿವೆ. ಈಗಾಗಲೇ ಜಲಾವೃತವಾದ ಬ್ಯಾರೇಜ್ ಮೇಲೆ ವಾಹನ ಸಂಚಾರ ಸಹ ಸ್ಥಗಿತಗೊಳಿಸಲಾಗಿದೆ.

ಕಳೆದ ಒಂದು ವಾರದಲ್ಲಿ ಬ್ಯಾರೇಜ್​ಗಳ ಮೇಲೆ ವಾಹನ ಸಂಚರಿಸಲು ಹೋಗಿ ಈಗಾಗಲೇ ಇಬ್ಬರು ಕೊಚ್ಚಿ ಹೋಗಿದ್ದಾರೆ. ಹೀಗಾಗಿ, ಮಳೆಗಾಲದಲ್ಲಿ ಬ್ಯಾರೇಜ್ ಮೇಲಿನ ಸಂಚಾರ ನಿರ್ಬಂಧಿಸಲು ಸ್ಥಳೀಯರು ಒತ್ತಾಯ ಮಾಡುತ್ತಿದ್ದಾರೆ. ಜೊತೆಗೆ, ಜಲಾವೃತವಾದ ಬ್ಯಾರೇಜ್ ಮೇಲೆ ವಾಹನಗಳನ್ನ ಬಿಡಲು ಮಹಾರಾಷ್ಟ್ರ ಪೊಲೀಸರು ಲಂಚ ತೆಗೆದುಕೊಳ್ಳುತ್ತಾರೆ ಎಂದು ಸ್ಥಳಿಯರು ಆರೋಪ ಮಾಡಿದ್ದಾರೆ.

ಕಲಬುರಗಿಯಲ್ಲಿ ಸೇತುವೆ ಮುಳುಗಡೆ ಇತ್ತ, ಭೀಮಾ ನದಿಯ ಹರಿವು ಹೆಚ್ಚಾದಂತೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರ ಮತ್ತು ಘತ್ತರಗಿ ಗ್ರಾಮಗಳು ಮುಳುಗುವ ಹಂತಕ್ಕೆ ತಲುಪಿವೆ. ಅಲ್ಲದೆ, ಈಗಾಗಲೇ ಘತ್ತರಗಿ ಮತ್ತು ಗಾಣಗಾಪುರದ ಸೇತುವೆಗಳು ಸಹ ಮುಳುಗಡೆಯಾಗಿವೆ. ಭೀಮಾ ನದಿಗೆ ಸೊನ್ನ ಬ್ಯಾರೇಜ್​ನಿಂದ ಒಂದು ಲಕ್ಷ ಕ್ಯೂಸೆಕ್ ನೀರು ಹರಿಬಿಡಲಾಗಿದೆ.

ಸಂಗಮ ಕ್ಷೇತ್ರಕ್ಕೆ ಎದುರಾಯ್ತು ಮುಳುಗಡೆ ಭೀತಿ ಭಾರಿ ಮಳೆ ಹಿನ್ನೆಲೆಯಲ್ಲಿ ಸೊನ್ನ ಬ್ಯಾರೇಜ್​ನಿಂದ ಭೀಮಾ ನದಿಗೆ 1.20 ಲಕ್ಷ ಕ್ಯೂಸೆಕ್​​​ ನೀರು ಬಿಡುಗಡೆ ಮಾಡಲಾಗಿದೆ. ಹೀಗಾಗಿ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರದಲ್ಲಿರುವ ಸಂಗಮ ಕ್ಷೇತ್ರಕ್ಕೆ ಮುಳುಗಡೆ ಭೀತಿ ಎದುರಾಗಿದೆ.

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು