AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖುಷ್ಬೂ ಬಳಿಕ.. ಖ್ಯಾತ ನಟಿ ವಿಜಯಶಾಂತಿ ನಾಳೆ BJPಗೆ ಸೇರ್ಪಡೆ

ವಿಜಯಶಾಂತಿ ಅವರ ಪಕ್ಷ ಬದಲಾವಣೆ ಬಗ್ಗೆ ಇದ್ದ ಎಲ್ಲ ಸಸ್ಪೆನ್ಸ್​ಗೆ ತೆರೆಬಿದ್ದಿದೆ. ನಟಿ ಖುಷ್ಬು ಇತ್ತೀಚೆಗಷ್ಟೇ ಬಿಜೆಪಿ ಸೇರಿದ ಬಳಿಕ, ಇದೀಗ ತೆಲಂಗಾಣದಲ್ಲಿ ನಟಿ ವಿಜಯಶಾಂತಿ ಕಾಂಗ್ರೆಸ್​ಗೆ ಗುಡ್ ಬೈ ಹೇಳಿದ್ದು, ನಾಳೆಯೇ ಬಿಜೆಪಿ ಸೇರಲಿದ್ದಾರೆ. ಕೆಲವು ಸಮಯದಿಂದ ಪಕ್ಷದ ಚಟುವಟಿಕೆಗಳಿಂದ ದೂರವಿದ್ದ ಹಿರಿಯ ನಾಯಕಿ ವಿಜಯಶಾಂತಿ ಅವರು ಕಾಂಗ್ರೆಸ್​ಗೆ ವಿದಾಯ ಹೇಳಿದ್ದಾರೆ. ಅವರು ಮಂಗಳವಾರ ದೆಹಲಿಗೆ ತೆರಳಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಲಿದ್ದಾರೆ. ತದನಂತರ ಹಲವಾರು ಹಿರಿಯ ನಾಯಕರೊಂದಿಗೆ ಪ್ರಮುಖ […]

ಖುಷ್ಬೂ ಬಳಿಕ.. ಖ್ಯಾತ ನಟಿ ವಿಜಯಶಾಂತಿ ನಾಳೆ BJPಗೆ ಸೇರ್ಪಡೆ
ಆಯೇಷಾ ಬಾನು
| Edited By: |

Updated on:Oct 14, 2021 | 4:31 PM

Share

ವಿಜಯಶಾಂತಿ ಅವರ ಪಕ್ಷ ಬದಲಾವಣೆ ಬಗ್ಗೆ ಇದ್ದ ಎಲ್ಲ ಸಸ್ಪೆನ್ಸ್​ಗೆ ತೆರೆಬಿದ್ದಿದೆ. ನಟಿ ಖುಷ್ಬು ಇತ್ತೀಚೆಗಷ್ಟೇ ಬಿಜೆಪಿ ಸೇರಿದ ಬಳಿಕ, ಇದೀಗ ತೆಲಂಗಾಣದಲ್ಲಿ ನಟಿ ವಿಜಯಶಾಂತಿ ಕಾಂಗ್ರೆಸ್​ಗೆ ಗುಡ್ ಬೈ ಹೇಳಿದ್ದು, ನಾಳೆಯೇ ಬಿಜೆಪಿ ಸೇರಲಿದ್ದಾರೆ.

ಕೆಲವು ಸಮಯದಿಂದ ಪಕ್ಷದ ಚಟುವಟಿಕೆಗಳಿಂದ ದೂರವಿದ್ದ ಹಿರಿಯ ನಾಯಕಿ ವಿಜಯಶಾಂತಿ ಅವರು ಕಾಂಗ್ರೆಸ್​ಗೆ ವಿದಾಯ ಹೇಳಿದ್ದಾರೆ. ಅವರು ಮಂಗಳವಾರ ದೆಹಲಿಗೆ ತೆರಳಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಲಿದ್ದಾರೆ. ತದನಂತರ ಹಲವಾರು ಹಿರಿಯ ನಾಯಕರೊಂದಿಗೆ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ. ವಿಜಯಶಾಂತಿ ಈಗಾಗಲೇ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ದುಬಕಾ ಚುನಾವಣೆಯ ಗೆಲುವಿನೊಂದಿಗೆ ಉತ್ತಮ ಮನಸ್ಥಿತಿಯಲ್ಲಿರುವ ಬಿಜೆಪಿ ವಿಜಯಶಾಂತಿಯ ಸೇವೆಗಳನ್ನು ಜಿಎಚ್‌ಎಂಸಿ ಚುನಾವಣೆಯಲ್ಲಿ ಬಳಸಿಕೊಳ್ಳಲಿದೆ. ಹಾಗೂ ಪಕ್ಷದ ಅಭ್ಯರ್ಥಿಗಳ ಪರವಾಗಿ ಅವರು ಪ್ರಚಾರ ನಡೆಸಲಿದ್ದಾರೆ.

ವಿಜಯಶಾಂತಿ ಸಿನಿಮಾ ಜೀವನ: 54ರ ಹರೆಯದ ಪಂಚಭಾಷಾ ನಟಿ ವಿಜಯಶಾಂತಿ ಕನ್ನಡ, ತೆಲುಗು, ತಮಿಳು, ಮಳಯಾಳಂ ಮತ್ತು ಹಿಂದಿಯಲ್ಲಿ ನಟಿಸಿದ್ದಾರೆ. ಸುಮಾರು 40 ವರ್ಷಗಳ ಕಾಲ ಅನೇಕ ಪಾತ್ರಗಳಲ್ಲಿ 180ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ಸಿನಿ ಪ್ರಿಯರನ್ನ ರಂಜಿಸಿದ್ದಾರೆ. ದಕ್ಷಿಣ ಭಾರತ ಚಿತ್ರರಂಗದ ದಿ ಲೇಡಿ ಸೂಪರ್ ಸ್ಟಾರ್, ಮತ್ತು ಲೇಡಿ ಅಮಿತಾಬ್ ಎಂದು ಅಭಿಮಾನಿಗಳು ಇವರನ್ನ ಕರೆಯುತ್ತಾರೆ. ಇವರಿಗೆ ಅನೇಕ ಪ್ರಶಸ್ತಿಗಳು ಲಭಿಸಿವೆ.

Published On - 1:55 pm, Mon, 23 November 20

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು