AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖುಷ್ಬೂ ಬಳಿಕ.. ಖ್ಯಾತ ನಟಿ ವಿಜಯಶಾಂತಿ ನಾಳೆ BJPಗೆ ಸೇರ್ಪಡೆ

ವಿಜಯಶಾಂತಿ ಅವರ ಪಕ್ಷ ಬದಲಾವಣೆ ಬಗ್ಗೆ ಇದ್ದ ಎಲ್ಲ ಸಸ್ಪೆನ್ಸ್​ಗೆ ತೆರೆಬಿದ್ದಿದೆ. ನಟಿ ಖುಷ್ಬು ಇತ್ತೀಚೆಗಷ್ಟೇ ಬಿಜೆಪಿ ಸೇರಿದ ಬಳಿಕ, ಇದೀಗ ತೆಲಂಗಾಣದಲ್ಲಿ ನಟಿ ವಿಜಯಶಾಂತಿ ಕಾಂಗ್ರೆಸ್​ಗೆ ಗುಡ್ ಬೈ ಹೇಳಿದ್ದು, ನಾಳೆಯೇ ಬಿಜೆಪಿ ಸೇರಲಿದ್ದಾರೆ. ಕೆಲವು ಸಮಯದಿಂದ ಪಕ್ಷದ ಚಟುವಟಿಕೆಗಳಿಂದ ದೂರವಿದ್ದ ಹಿರಿಯ ನಾಯಕಿ ವಿಜಯಶಾಂತಿ ಅವರು ಕಾಂಗ್ರೆಸ್​ಗೆ ವಿದಾಯ ಹೇಳಿದ್ದಾರೆ. ಅವರು ಮಂಗಳವಾರ ದೆಹಲಿಗೆ ತೆರಳಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಲಿದ್ದಾರೆ. ತದನಂತರ ಹಲವಾರು ಹಿರಿಯ ನಾಯಕರೊಂದಿಗೆ ಪ್ರಮುಖ […]

ಖುಷ್ಬೂ ಬಳಿಕ.. ಖ್ಯಾತ ನಟಿ ವಿಜಯಶಾಂತಿ ನಾಳೆ BJPಗೆ ಸೇರ್ಪಡೆ
ಆಯೇಷಾ ಬಾನು
| Updated By: ರಾಜೇಶ್ ದುಗ್ಗುಮನೆ|

Updated on:Oct 14, 2021 | 4:31 PM

Share

ವಿಜಯಶಾಂತಿ ಅವರ ಪಕ್ಷ ಬದಲಾವಣೆ ಬಗ್ಗೆ ಇದ್ದ ಎಲ್ಲ ಸಸ್ಪೆನ್ಸ್​ಗೆ ತೆರೆಬಿದ್ದಿದೆ. ನಟಿ ಖುಷ್ಬು ಇತ್ತೀಚೆಗಷ್ಟೇ ಬಿಜೆಪಿ ಸೇರಿದ ಬಳಿಕ, ಇದೀಗ ತೆಲಂಗಾಣದಲ್ಲಿ ನಟಿ ವಿಜಯಶಾಂತಿ ಕಾಂಗ್ರೆಸ್​ಗೆ ಗುಡ್ ಬೈ ಹೇಳಿದ್ದು, ನಾಳೆಯೇ ಬಿಜೆಪಿ ಸೇರಲಿದ್ದಾರೆ.

ಕೆಲವು ಸಮಯದಿಂದ ಪಕ್ಷದ ಚಟುವಟಿಕೆಗಳಿಂದ ದೂರವಿದ್ದ ಹಿರಿಯ ನಾಯಕಿ ವಿಜಯಶಾಂತಿ ಅವರು ಕಾಂಗ್ರೆಸ್​ಗೆ ವಿದಾಯ ಹೇಳಿದ್ದಾರೆ. ಅವರು ಮಂಗಳವಾರ ದೆಹಲಿಗೆ ತೆರಳಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಲಿದ್ದಾರೆ. ತದನಂತರ ಹಲವಾರು ಹಿರಿಯ ನಾಯಕರೊಂದಿಗೆ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ. ವಿಜಯಶಾಂತಿ ಈಗಾಗಲೇ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ದುಬಕಾ ಚುನಾವಣೆಯ ಗೆಲುವಿನೊಂದಿಗೆ ಉತ್ತಮ ಮನಸ್ಥಿತಿಯಲ್ಲಿರುವ ಬಿಜೆಪಿ ವಿಜಯಶಾಂತಿಯ ಸೇವೆಗಳನ್ನು ಜಿಎಚ್‌ಎಂಸಿ ಚುನಾವಣೆಯಲ್ಲಿ ಬಳಸಿಕೊಳ್ಳಲಿದೆ. ಹಾಗೂ ಪಕ್ಷದ ಅಭ್ಯರ್ಥಿಗಳ ಪರವಾಗಿ ಅವರು ಪ್ರಚಾರ ನಡೆಸಲಿದ್ದಾರೆ.

ವಿಜಯಶಾಂತಿ ಸಿನಿಮಾ ಜೀವನ: 54ರ ಹರೆಯದ ಪಂಚಭಾಷಾ ನಟಿ ವಿಜಯಶಾಂತಿ ಕನ್ನಡ, ತೆಲುಗು, ತಮಿಳು, ಮಳಯಾಳಂ ಮತ್ತು ಹಿಂದಿಯಲ್ಲಿ ನಟಿಸಿದ್ದಾರೆ. ಸುಮಾರು 40 ವರ್ಷಗಳ ಕಾಲ ಅನೇಕ ಪಾತ್ರಗಳಲ್ಲಿ 180ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ಸಿನಿ ಪ್ರಿಯರನ್ನ ರಂಜಿಸಿದ್ದಾರೆ. ದಕ್ಷಿಣ ಭಾರತ ಚಿತ್ರರಂಗದ ದಿ ಲೇಡಿ ಸೂಪರ್ ಸ್ಟಾರ್, ಮತ್ತು ಲೇಡಿ ಅಮಿತಾಬ್ ಎಂದು ಅಭಿಮಾನಿಗಳು ಇವರನ್ನ ಕರೆಯುತ್ತಾರೆ. ಇವರಿಗೆ ಅನೇಕ ಪ್ರಶಸ್ತಿಗಳು ಲಭಿಸಿವೆ.

Published On - 1:55 pm, Mon, 23 November 20

ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ