AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಅಪರಿಚಿತರಿಂದ ರಾತ್ರೋರಾತ್ರಿ ಅಂತ್ಯಕ್ರಿಯೆಗೆ ಸಿದ್ಧತೆ: JCB ಜಖಂ, ಅರೆಸ್ಟ್

ಮೈಸೂರು: ಅಪರಿಚಿತರ ಗುಂಪೊಂದು ರಾತ್ರೋ ರಾತ್ರಿ ಶವಸಂಸ್ಕಾರಕ್ಕೆ ಮುಂದಾದಾಗ ಸ್ಥಳೀಯರಿಂದ ಭಾರಿ ವಿರೋಧ ವ್ಯಕ್ತವಾದ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಹಂಚಿಪುರ ಮತ್ತು ಹೊಸವೀಡು ಗ್ರಾಮದ ಮಧ್ಯಭಾಗದಲ್ಲಿ ಸಂಭವಿಸಿದೆ. ಮಾಜಿ ಗ್ಯಾಂಗ್​ಸ್ಟರ್​ ಮುತ್ತಪ್ಪ ರೈ ಸಂಬಂಧಿಗೆ ಸೇರಿದ ಜಮೀನಿನಲ್ಲಿ ಬೆಂಗಳೂರಿಗರಿನಿಂದ ಬಂದ ಕೆಲವರು ನಿನ್ನೆ ರಾತ್ರಿ ಶವಸಂಸ್ಕಾರಕ್ಕೆ ಮುಂದಾಗಿದ್ದರು ಎಂದು ತಿಳಿದುಬಂದಿದೆ. ಌಂಬುಲೆನ್ಸ್ ಮೂಲಕ ಗ್ರಾಮಕ್ಕೆ ತರಲಾದ ಶವವನ್ನು ನೋಡಿ ಬೆಚ್ಚಿಬಿದ್ದ ಗ್ರಾಮಸ್ಥರು ಇದು ಕೊರೊನಾದಿಂದ ಮೃತಪಟ್ಟಿರೋರ ಶವ ಎಂಬ ಶಂಕೆ ವ್ಯಕ್ತಪಡಿಸಿದರು. ‘ಪೊಲೀಸರು ಅಪರಿಚಿತರ ವಿರುದ್ಧ […]

ಬೆಂಗಳೂರು ಅಪರಿಚಿತರಿಂದ ರಾತ್ರೋರಾತ್ರಿ ಅಂತ್ಯಕ್ರಿಯೆಗೆ ಸಿದ್ಧತೆ: JCB ಜಖಂ, ಅರೆಸ್ಟ್
KUSHAL V
| Updated By: |

Updated on:Jul 25, 2020 | 12:18 PM

Share

ಮೈಸೂರು: ಅಪರಿಚಿತರ ಗುಂಪೊಂದು ರಾತ್ರೋ ರಾತ್ರಿ ಶವಸಂಸ್ಕಾರಕ್ಕೆ ಮುಂದಾದಾಗ ಸ್ಥಳೀಯರಿಂದ ಭಾರಿ ವಿರೋಧ ವ್ಯಕ್ತವಾದ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಹಂಚಿಪುರ ಮತ್ತು ಹೊಸವೀಡು ಗ್ರಾಮದ ಮಧ್ಯಭಾಗದಲ್ಲಿ ಸಂಭವಿಸಿದೆ.

ಮಾಜಿ ಗ್ಯಾಂಗ್​ಸ್ಟರ್​ ಮುತ್ತಪ್ಪ ರೈ ಸಂಬಂಧಿಗೆ ಸೇರಿದ ಜಮೀನಿನಲ್ಲಿ ಬೆಂಗಳೂರಿಗರಿನಿಂದ ಬಂದ ಕೆಲವರು ನಿನ್ನೆ ರಾತ್ರಿ ಶವಸಂಸ್ಕಾರಕ್ಕೆ ಮುಂದಾಗಿದ್ದರು ಎಂದು ತಿಳಿದುಬಂದಿದೆ. ಌಂಬುಲೆನ್ಸ್ ಮೂಲಕ ಗ್ರಾಮಕ್ಕೆ ತರಲಾದ ಶವವನ್ನು ನೋಡಿ ಬೆಚ್ಚಿಬಿದ್ದ ಗ್ರಾಮಸ್ಥರು ಇದು ಕೊರೊನಾದಿಂದ ಮೃತಪಟ್ಟಿರೋರ ಶವ ಎಂಬ ಶಂಕೆ ವ್ಯಕ್ತಪಡಿಸಿದರು. ‘ಪೊಲೀಸರು ಅಪರಿಚಿತರ ವಿರುದ್ಧ ಕ್ರಮ ಕೈಗೊಳ್ಳಲಿಲ್ಲ’ ಕೂಡಲೇ ರೊಚ್ಚಿಗೆದ್ದ ಗ್ರಾಮಸ್ಥರುಶವವನ್ನು ಮಣ್ಣು ಮಾಡಲು ಮುಂದಾಗಿದ್ದ ಅಪರಿಚಿತರನ್ನ ತಡೆದರು. ಗ್ರಾಮಸ್ಥರ ವಿರೋಧಕ್ಕೆ ಅಂಜಿ ಅಪರಿಚಿತರು ಮೃತ ದೇಹ ವಾಪಸ್​ ತೆಗೆದುಕೊಂಡು ಹೋದರು ಎಂದು ತಿಳಿದುಬಂದಿದೆ. ಈ ನಡುವೆ ಉದ್ವಿಗ್ನ ಪರಿಸ್ಥಿತಿ ಕಂಡು ಸ್ಥಳಕ್ಕೆ ಬಂದ ಪೊಲೀಸರು ಅಪರಿಚಿತರ ವಿರುದ್ಧ ಕ್ರಮ ಕೈಗೊಳ್ಳಲಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಪೊಲೀಸರು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ಉಂಟಾಗಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಶವಸಂಸ್ಕಾರಕ್ಕೆ ತಂದಿದ್ದ ಜೆಸಿಬಿ ಯಂತ್ರವನ್ನ ಗ್ರಾಮಸ್ಥರು ಜಖಂ ಮಾಡಿದ್ದಾರಂತೆ. ಹೀಗಾಗಿ, ಪ್ರಕರಣಕ್ಕೆ ಸಂಬಂಧಿಸಿ 15 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜೊತೆಗೆ, ಮುನ್ನೆಚ್ಚರಿಕಾ ಕ್ರಮವಾಗಿ ಹೊಸವೀಡು ಗ್ರಾಮದಲ್ಲಿ ಪೊಲೀಸರ ನಿಯೋಜನೆ ಆಗಿದೆ.

Published On - 3:02 pm, Thu, 23 July 20

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?