YN ಹೊಸಕೋಟೆ: ಮದ್ಯ ಮಾರಾಟ ಪ್ರಶ್ನಿಸಿದ್ದಕ್ಕೆ ಆಂಧ್ರ PSI ಮೇಲೆ ಹಲ್ಲೆ

ತುಮಕೂರು: ಆಂಧ್ರದ ಕಂಬದೂರು ಪಿಎಸ್‌ಐ ಹಾಗೂ ಸಿಬ್ಬಂದಿ ಮೇಲೆ ಜಾಲೋಡು ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಆಂಧ್ರದ ಕಂಬದೂರು ಪಿಎಸ್​ಐ ಗೌಸ್ಪೀರ್ ಹಾಗೂ ಸಿಬ್ಬಂದಿ ಮೇಲೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಜಾಲೋಡು ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಆಂಧ್ರಪ್ರದೇಶದ ಗ್ರಾಮಗಳಾದ ಓಬ್ಬಗಾನಪಲ್ಲಿ, ಮೂರಾಯನಪಲ್ಲಿ ಗ್ರಾಮಗಳಿಗೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಕೇಳಲು ಬಂದಿದ್ದಾಗ ನಾವು ಕರ್ನಾಟಕದಿಂದ ಮದ್ಯ ತಂದಿದ್ದೇವೆ ಎಂದು ಪಿಎಸ್‌ಐ ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ […]

YN ಹೊಸಕೋಟೆ: ಮದ್ಯ ಮಾರಾಟ ಪ್ರಶ್ನಿಸಿದ್ದಕ್ಕೆ ಆಂಧ್ರ PSI ಮೇಲೆ ಹಲ್ಲೆ
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Aug 31, 2020 | 10:45 AM

ತುಮಕೂರು: ಆಂಧ್ರದ ಕಂಬದೂರು ಪಿಎಸ್‌ಐ ಹಾಗೂ ಸಿಬ್ಬಂದಿ ಮೇಲೆ ಜಾಲೋಡು ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಆಂಧ್ರದ ಕಂಬದೂರು ಪಿಎಸ್​ಐ ಗೌಸ್ಪೀರ್ ಹಾಗೂ ಸಿಬ್ಬಂದಿ ಮೇಲೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಜಾಲೋಡು ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಆಂಧ್ರಪ್ರದೇಶದ ಗ್ರಾಮಗಳಾದ ಓಬ್ಬಗಾನಪಲ್ಲಿ, ಮೂರಾಯನಪಲ್ಲಿ ಗ್ರಾಮಗಳಿಗೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದರು.

ಈ ಬಗ್ಗೆ ಕೇಳಲು ಬಂದಿದ್ದಾಗ ನಾವು ಕರ್ನಾಟಕದಿಂದ ಮದ್ಯ ತಂದಿದ್ದೇವೆ ಎಂದು ಪಿಎಸ್‌ಐ ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಪೊಲೀಸರ ವಾಹನ ಭಾಗಶಃ ಜಖಂಗೊಂಡಿದೆ. ವೈ.ಎನ್. ಹೊಸಕೋಟೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Published On - 10:44 am, Mon, 31 August 20

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us