AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೋನ್​ ಇಟ್ಟರೂ ತಪ್ಪಿಸಿಕೊಳ್ಳುತ್ತಿದೆ ಚಾಲಾಕಿ ಚಿರತೆ; ಆತಂಕದಲ್ಲಿ ಸ್ಥಳೀಯರು

ಕೆಲವು ದಿನಗಳಿಂದ ಗ್ರಾಮದ ಬಳಿ ಚಿರತೆಯೊಂದು ಬಿಂದಾಸ್ ಆಗಿ ಓಡಾಡುತ್ತ ಗ್ರಾಮದ ಬಳಿ ಓಡಾಡುವ ನಾಯಿಗಳು, ಕುರಿ, ಮೇಕೆಗಳನ್ನು ತಿನ್ನುತ್ತಿದೆ. ರಾತ್ರಿ ಆಗುತ್ತಿದ್ದಂತೆ ದೊಡ್ಡಿಗಳಿಗೆ ಬರುವ ಚಿರತೆ ಕುರಿ, ಮೇಕೆಗಳನ್ನು ತಿಂದು ಯಾರ ಭಯ, ಅಂಜಿಕೆ ಇಲ್ಲದಂತೆ ಓಡಾಡಿಕೊಂಡಿದೆ.

ಬೋನ್​ ಇಟ್ಟರೂ ತಪ್ಪಿಸಿಕೊಳ್ಳುತ್ತಿದೆ ಚಾಲಾಕಿ ಚಿರತೆ; ಆತಂಕದಲ್ಲಿ ಸ್ಥಳೀಯರು
ರಾತ್ರಿ ಓಡಾಡುತ್ತಿರುವ ಚಿರತೆ, ಚಿರತೆ ಸೆರೆ ಹಿಡಿಯಲು ಇಟ್ಟಿರುವ ಬೋನ್
sandhya thejappa
| Edited By: |

Updated on:Jan 25, 2021 | 12:22 PM

Share

ಹಾವೇರಿ: ಇಲ್ಲಿನ ರಟ್ಟೀಹಳ್ಳಿ ತಾಲೂಕಿನ ನಾಗವಂದ ಗ್ರಾಮದಲ್ಲಿ ಚಿರತೆ ಆತಂಕ ತಂದಿಟ್ಟಿದೆ. ಇದು ದಟ್ಟವಾದ ಗುಡ್ಡಗಾಡು ಪ್ರದೇಶವಾಗಿದ್ದು, ಕುರಿಗಾಹಿಗಳು, ಶಾಲಾ ಮಕ್ಕಳು ಭಯದಲ್ಲಿಯೇ ಓಡಾಡುವಂತಾಗಿದೆ.

ಕೆಲವು ದಿನಗಳಿಂದ ಗ್ರಾಮದ ಬಳಿ ಚಿರತೆಯೊಂದು ಬಿಂದಾಸ್ ಆಗಿ ಓಡಾಡುತ್ತ ಗ್ರಾಮದ ಬಳಿ  ನಾಯಿಗಳು, ಕುರಿ, ಮೇಕೆಗಳನ್ನು ತಿನ್ನುತ್ತಿದೆ. ರಾತ್ರಿ ಆಗುತ್ತಿದ್ದಂತೆ ದೊಡ್ಡಿಗಳಿಗೆ ಬರುವ ಚಿರತೆ ಕುರಿ, ಮೇಕೆಗಳನ್ನು ತಿಂದು ಯಾರ ಭಯ, ಅಂಜಿಕೆ ಇಲ್ಲದಂತೆ ಓಡಾಡಿಕೊಂಡಿದೆ. ಈಗಾಗಲೇ ಹತ್ತಕ್ಕೂ ಅಧಿಕ ಕುರಿ ಮತ್ತು ಮೇಕೆಗಳನ್ನು ತಿಂದು ಹಾಕಿರುವ ಚಿರತೆ ನಾಗವಂದ ಮಾತ್ರವಲ್ಲ ಸುತ್ತಮುತ್ತಲಿನ ಅಣಜಿ, ಹಳಿಯಾಳ, ಮೇದೂರು, ತಡಕನಹಳ್ಳಿ, ಆರೀಕಟ್ಟಿ ತಾಂಡಾದ ಜನರಲ್ಲಿ ಎಲ್ಲಿಲ್ಲದ ಭಯ ಸೃಷ್ಟಿಸಿದೆ.

ಗ್ರಾಮದ ಹೊರವಲಯದಲ್ಲಿರುವ ಶಾಲೆಗೆ ನಡೆದುಕೊಂಡು ಹೋಗುವ ಶಾಲಾ ಮಕ್ಕಳು ಚಿರತೆ ಕಾಣಿಸಿಕೊಂಡಿದೆ ಎನ್ನುವ ಸುದ್ದಿ ಹರಿದಾಡಿದಾಗಿನಿಂದ ಭಯದಲ್ಲಿ ಹೆಜ್ಜೆ ಹಾಕುತ್ತಿದ್ದಾರೆ. ಆಗಾಗ ಗ್ರಾಮದ ಬಳಿ ಕಾಣಿಸಿಕೊಳ್ಳುತ್ತಿರುವ ಚಿರತೆಯಿಂದ ಶಾಲೆಯ ಶಿಕ್ಷಕರಿಗೂ ಮಕ್ಕಳದ್ದೆ ದೊಡ್ಡ ಚಿಂತೆಯಾಗಿದೆ ಎಂದು ಶಿಕ್ಷಕ ಪರಮೇಶ್ವರಪ್ಪ ತಿಳಿಸಿದ್ದಾರೆ.

ಚಿರತೆಗೆ ಬೋನು ಕೆಲವು ದಿನಗಳ ಹಿಂದೆ ರಾತ್ರಿ ವೇಳೆಯಲ್ಲಿ ಗ್ರಾಮದ ಸಮೀಪದ ರಸ್ತೆಯಲ್ಲಿ ಓಡಾಡುತ್ತಿದ್ದ ಚಿರತೆಯ ದೃಶ್ಯವನ್ನು ಗ್ರಾಮಸ್ಥರೊಬ್ಬರು ತಮ್ಮ ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾರೆ. ಚಿರತೆ ಕಾಣಿಸಿಕೊಂಡಿರುವ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಗಮನಕ್ಕೆ ತಂದಿದ್ದಾರೆ. ನಂತರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಇರುವ ಬಗ್ಗೆ ಖಚಿತ ಮಾಡಿಕೊಂಡು ಚಿರತೆ ಸೆರೆಗೆ ಶಾಲೆಯ ಸಮೀಪದ ರೈತರೊಬ್ಬರ ಜಮೀನಿನಲ್ಲಿ ಬೋನ್ ಇಟ್ಟಿದ್ದಾರೆ. ರಾತ್ರಿ ವೇಳೆ ಬೋನಿನಲ್ಲಿ ನಾಯಿಯೊಂದನ್ನು ಕಟ್ಟಿ ಹಾಕಿ, ನಾಯಿಯ ಒದರಾಟ ಕೇಳಿ ಚಿರತೆ ನಾಯಿ ತಿನ್ನಲು ಬಂದು ಬೋನಿಗೆ ಬೀಳಬಹುದು ಎಂಬ ಲೆಕ್ಕಾಚಾರದಲ್ಲಿ ಬೋನ್ ಇಡಲಾಗಿದೆ. ಆದರೆ ಚಾಲಾಕಿ ಚಿರತೆ ಮಾತ್ರ ಬೋನಿಗೆ ಬೀಳದಂತೆ ಓಡಾಡುತ್ತಿದೆ. ಇದು ನಾಗವಂದ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರ ನಿದ್ದೆಗೆಡಿಸಿದೆ. ಕುರಿಗಾಹಿಗಳಂತೂ ಅರಣ್ಯ ಪ್ರದೇಶ, ಗುಡ್ಡಗಾಡು ಪ್ರದೇಶ ಬಿಟ್ಟು ಗ್ರಾಮದ ಬಳಿ ಬಂದು ಟೆಂಟ್ ಹಾಕಿದ್ದಾರೆ.

ಆದಷ್ಟು ಬೇಗ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆ ಹಿಡಿದು ಜನವಸತಿ ಇಲ್ಲದ ಕಡೆ ಇರುವ ಅರಣ್ಯ ಪ್ರದೇಶಕ್ಕೆ ಬಿಟ್ಟು ಬಂದಾಗ ಮಾತ್ರ ಜನರಲ್ಲಿ ಮನೆ ಮಾಡಿರುವ ಆತಂಕ ದೂರವಾಗಲಿದೆ.

ಭಾರತದಲ್ಲಿ ಚಿರತೆ ಸಂಖ್ಯೆ ಏರಿಕೆ: ಕರ್ನಾಟಕಕ್ಕೆ ಎರಡನೇ ಸ್ಥಾನ

Published On - 12:19 pm, Mon, 25 January 21

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ