AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೋನ್​ ಇಟ್ಟರೂ ತಪ್ಪಿಸಿಕೊಳ್ಳುತ್ತಿದೆ ಚಾಲಾಕಿ ಚಿರತೆ; ಆತಂಕದಲ್ಲಿ ಸ್ಥಳೀಯರು

ಕೆಲವು ದಿನಗಳಿಂದ ಗ್ರಾಮದ ಬಳಿ ಚಿರತೆಯೊಂದು ಬಿಂದಾಸ್ ಆಗಿ ಓಡಾಡುತ್ತ ಗ್ರಾಮದ ಬಳಿ ಓಡಾಡುವ ನಾಯಿಗಳು, ಕುರಿ, ಮೇಕೆಗಳನ್ನು ತಿನ್ನುತ್ತಿದೆ. ರಾತ್ರಿ ಆಗುತ್ತಿದ್ದಂತೆ ದೊಡ್ಡಿಗಳಿಗೆ ಬರುವ ಚಿರತೆ ಕುರಿ, ಮೇಕೆಗಳನ್ನು ತಿಂದು ಯಾರ ಭಯ, ಅಂಜಿಕೆ ಇಲ್ಲದಂತೆ ಓಡಾಡಿಕೊಂಡಿದೆ.

ಬೋನ್​ ಇಟ್ಟರೂ ತಪ್ಪಿಸಿಕೊಳ್ಳುತ್ತಿದೆ ಚಾಲಾಕಿ ಚಿರತೆ; ಆತಂಕದಲ್ಲಿ ಸ್ಥಳೀಯರು
ರಾತ್ರಿ ಓಡಾಡುತ್ತಿರುವ ಚಿರತೆ, ಚಿರತೆ ಸೆರೆ ಹಿಡಿಯಲು ಇಟ್ಟಿರುವ ಬೋನ್
Follow us
sandhya thejappa
| Updated By: Lakshmi Hegde

Updated on:Jan 25, 2021 | 12:22 PM

ಹಾವೇರಿ: ಇಲ್ಲಿನ ರಟ್ಟೀಹಳ್ಳಿ ತಾಲೂಕಿನ ನಾಗವಂದ ಗ್ರಾಮದಲ್ಲಿ ಚಿರತೆ ಆತಂಕ ತಂದಿಟ್ಟಿದೆ. ಇದು ದಟ್ಟವಾದ ಗುಡ್ಡಗಾಡು ಪ್ರದೇಶವಾಗಿದ್ದು, ಕುರಿಗಾಹಿಗಳು, ಶಾಲಾ ಮಕ್ಕಳು ಭಯದಲ್ಲಿಯೇ ಓಡಾಡುವಂತಾಗಿದೆ.

ಕೆಲವು ದಿನಗಳಿಂದ ಗ್ರಾಮದ ಬಳಿ ಚಿರತೆಯೊಂದು ಬಿಂದಾಸ್ ಆಗಿ ಓಡಾಡುತ್ತ ಗ್ರಾಮದ ಬಳಿ  ನಾಯಿಗಳು, ಕುರಿ, ಮೇಕೆಗಳನ್ನು ತಿನ್ನುತ್ತಿದೆ. ರಾತ್ರಿ ಆಗುತ್ತಿದ್ದಂತೆ ದೊಡ್ಡಿಗಳಿಗೆ ಬರುವ ಚಿರತೆ ಕುರಿ, ಮೇಕೆಗಳನ್ನು ತಿಂದು ಯಾರ ಭಯ, ಅಂಜಿಕೆ ಇಲ್ಲದಂತೆ ಓಡಾಡಿಕೊಂಡಿದೆ. ಈಗಾಗಲೇ ಹತ್ತಕ್ಕೂ ಅಧಿಕ ಕುರಿ ಮತ್ತು ಮೇಕೆಗಳನ್ನು ತಿಂದು ಹಾಕಿರುವ ಚಿರತೆ ನಾಗವಂದ ಮಾತ್ರವಲ್ಲ ಸುತ್ತಮುತ್ತಲಿನ ಅಣಜಿ, ಹಳಿಯಾಳ, ಮೇದೂರು, ತಡಕನಹಳ್ಳಿ, ಆರೀಕಟ್ಟಿ ತಾಂಡಾದ ಜನರಲ್ಲಿ ಎಲ್ಲಿಲ್ಲದ ಭಯ ಸೃಷ್ಟಿಸಿದೆ.

ಗ್ರಾಮದ ಹೊರವಲಯದಲ್ಲಿರುವ ಶಾಲೆಗೆ ನಡೆದುಕೊಂಡು ಹೋಗುವ ಶಾಲಾ ಮಕ್ಕಳು ಚಿರತೆ ಕಾಣಿಸಿಕೊಂಡಿದೆ ಎನ್ನುವ ಸುದ್ದಿ ಹರಿದಾಡಿದಾಗಿನಿಂದ ಭಯದಲ್ಲಿ ಹೆಜ್ಜೆ ಹಾಕುತ್ತಿದ್ದಾರೆ. ಆಗಾಗ ಗ್ರಾಮದ ಬಳಿ ಕಾಣಿಸಿಕೊಳ್ಳುತ್ತಿರುವ ಚಿರತೆಯಿಂದ ಶಾಲೆಯ ಶಿಕ್ಷಕರಿಗೂ ಮಕ್ಕಳದ್ದೆ ದೊಡ್ಡ ಚಿಂತೆಯಾಗಿದೆ ಎಂದು ಶಿಕ್ಷಕ ಪರಮೇಶ್ವರಪ್ಪ ತಿಳಿಸಿದ್ದಾರೆ.

ಚಿರತೆಗೆ ಬೋನು ಕೆಲವು ದಿನಗಳ ಹಿಂದೆ ರಾತ್ರಿ ವೇಳೆಯಲ್ಲಿ ಗ್ರಾಮದ ಸಮೀಪದ ರಸ್ತೆಯಲ್ಲಿ ಓಡಾಡುತ್ತಿದ್ದ ಚಿರತೆಯ ದೃಶ್ಯವನ್ನು ಗ್ರಾಮಸ್ಥರೊಬ್ಬರು ತಮ್ಮ ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾರೆ. ಚಿರತೆ ಕಾಣಿಸಿಕೊಂಡಿರುವ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಗಮನಕ್ಕೆ ತಂದಿದ್ದಾರೆ. ನಂತರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಇರುವ ಬಗ್ಗೆ ಖಚಿತ ಮಾಡಿಕೊಂಡು ಚಿರತೆ ಸೆರೆಗೆ ಶಾಲೆಯ ಸಮೀಪದ ರೈತರೊಬ್ಬರ ಜಮೀನಿನಲ್ಲಿ ಬೋನ್ ಇಟ್ಟಿದ್ದಾರೆ. ರಾತ್ರಿ ವೇಳೆ ಬೋನಿನಲ್ಲಿ ನಾಯಿಯೊಂದನ್ನು ಕಟ್ಟಿ ಹಾಕಿ, ನಾಯಿಯ ಒದರಾಟ ಕೇಳಿ ಚಿರತೆ ನಾಯಿ ತಿನ್ನಲು ಬಂದು ಬೋನಿಗೆ ಬೀಳಬಹುದು ಎಂಬ ಲೆಕ್ಕಾಚಾರದಲ್ಲಿ ಬೋನ್ ಇಡಲಾಗಿದೆ. ಆದರೆ ಚಾಲಾಕಿ ಚಿರತೆ ಮಾತ್ರ ಬೋನಿಗೆ ಬೀಳದಂತೆ ಓಡಾಡುತ್ತಿದೆ. ಇದು ನಾಗವಂದ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರ ನಿದ್ದೆಗೆಡಿಸಿದೆ. ಕುರಿಗಾಹಿಗಳಂತೂ ಅರಣ್ಯ ಪ್ರದೇಶ, ಗುಡ್ಡಗಾಡು ಪ್ರದೇಶ ಬಿಟ್ಟು ಗ್ರಾಮದ ಬಳಿ ಬಂದು ಟೆಂಟ್ ಹಾಕಿದ್ದಾರೆ.

ಆದಷ್ಟು ಬೇಗ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆ ಹಿಡಿದು ಜನವಸತಿ ಇಲ್ಲದ ಕಡೆ ಇರುವ ಅರಣ್ಯ ಪ್ರದೇಶಕ್ಕೆ ಬಿಟ್ಟು ಬಂದಾಗ ಮಾತ್ರ ಜನರಲ್ಲಿ ಮನೆ ಮಾಡಿರುವ ಆತಂಕ ದೂರವಾಗಲಿದೆ.

ಭಾರತದಲ್ಲಿ ಚಿರತೆ ಸಂಖ್ಯೆ ಏರಿಕೆ: ಕರ್ನಾಟಕಕ್ಕೆ ಎರಡನೇ ಸ್ಥಾನ

Published On - 12:19 pm, Mon, 25 January 21

ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್