AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಕ್ತಿಯ ಪರಾಕಾಷ್ಠೆ.. ದೇವಸ್ಥಾನದ ದಾರಿಗಾಗಿ ತಮ್ಮ ಮನೆಗಳನ್ನೇ ಒಡೆದುಹಾಕಿದ ಗ್ರಾಮಸ್ಥರು!

ಬಾಗಲಕೋಟೆ: ಗ್ರಾಮದ ಐತಿಹಾಸಿಕ ಮಹಾಲಕ್ಷ್ಮೀ ದೇವಸ್ಥಾನದ ದಾರಿಗಾಗಿ ಗ್ರಾಮಸ್ಥರು ತಮ್ಮ ಮನೆಗಳನ್ನೆ ಒಡೆದು ಹಾಕಿದ ಅಪರೂಪದ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಮಧುರಕಂಡಿ ಗ್ರಾಮದಲ್ಲಿ ನಡೆದಿದೆ. ಮಧುರಖಂಡಿ ಗ್ರಾಮದ ಐತಿಹಾಸಿಕ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಇಕ್ಕಟ್ಟಾದ ಗಲ್ಲಿಯ ಮೂಲಕ ತೆರಳುವಂತ ಸ್ಥಿತಿ ಇತ್ತು. ಪ್ರತಿ ವರ್ಷ ದವನದ ಹುಣ್ಣಿಮೆ ನಂತರ ನಡೆಯುವ ಫಲ್ಲಕ್ಕಿ ಉತ್ಸವಕ್ಕೆ 8ರಿಂದ 10 ಸಾವಿರಕ್ಕೂ ಅಧಿಕ ಜನರು ದೇವಿ ದರ್ಶನಕ್ಕೆ ಆಗಮಿಸುತ್ತಾರೆ. ಮನೆಗಳನ್ನೇ ಬಿಟ್ಟುಕೊಟ್ಟು ಭಕ್ತಿ ಮೆರೆದ ಭಕ್ತರು: ಆದರೆ ಈ ಉತ್ಸವಕ್ಕೆ […]

ಭಕ್ತಿಯ ಪರಾಕಾಷ್ಠೆ.. ದೇವಸ್ಥಾನದ ದಾರಿಗಾಗಿ ತಮ್ಮ ಮನೆಗಳನ್ನೇ ಒಡೆದುಹಾಕಿದ ಗ್ರಾಮಸ್ಥರು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 29, 2020 | 12:23 PM

Share

ಬಾಗಲಕೋಟೆ: ಗ್ರಾಮದ ಐತಿಹಾಸಿಕ ಮಹಾಲಕ್ಷ್ಮೀ ದೇವಸ್ಥಾನದ ದಾರಿಗಾಗಿ ಗ್ರಾಮಸ್ಥರು ತಮ್ಮ ಮನೆಗಳನ್ನೆ ಒಡೆದು ಹಾಕಿದ ಅಪರೂಪದ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಮಧುರಕಂಡಿ ಗ್ರಾಮದಲ್ಲಿ ನಡೆದಿದೆ. ಮಧುರಖಂಡಿ ಗ್ರಾಮದ ಐತಿಹಾಸಿಕ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಇಕ್ಕಟ್ಟಾದ ಗಲ್ಲಿಯ ಮೂಲಕ ತೆರಳುವಂತ ಸ್ಥಿತಿ ಇತ್ತು. ಪ್ರತಿ ವರ್ಷ ದವನದ ಹುಣ್ಣಿಮೆ ನಂತರ ನಡೆಯುವ ಫಲ್ಲಕ್ಕಿ ಉತ್ಸವಕ್ಕೆ 8ರಿಂದ 10 ಸಾವಿರಕ್ಕೂ ಅಧಿಕ ಜನರು ದೇವಿ ದರ್ಶನಕ್ಕೆ ಆಗಮಿಸುತ್ತಾರೆ.

ಮನೆಗಳನ್ನೇ ಬಿಟ್ಟುಕೊಟ್ಟು ಭಕ್ತಿ ಮೆರೆದ ಭಕ್ತರು: ಆದರೆ ಈ ಉತ್ಸವಕ್ಕೆ ದೇವಸ್ಥಾನಕ್ಕೆ ಹೋಗಲು ಸೂಕ್ತ ದಾರಿ ಇರಲಿಲ್ಲ. ಇದರಿಂದ ದೇವಸ್ಥಾನಕ್ಕೆ ನೇರವಾಗಿ ತೆರಳಲು ಗ್ರಾಮದ ಜನರು ತಮ್ಮ ಮನೆಗಳನ್ನೇ ದೇವಸ್ಥಾನ ದಾರಿಗೆ ಬಿಟ್ಟುಕೊಟ್ಟು ಭಕ್ತಿ ಮೆರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಮದ ಪ್ರಮುಖರು ಸೇರಿ ದೇವಸ್ಥಾನಕ್ಕೆ ಹೊಸದಾಗಿ ದಾರಿ ಮಾಡುವ ಸಂಕಲ್ಪ ತೊಟ್ಟು ದೇವಸ್ಥಾನಕ್ಕೆ ನೇರವಾಗುವಂತೆ ಯೋಜನೆ ರೂಪಿಸಿ ಈಗಾಗಲೇ 20ಕ್ಕೂ ಹೆಚ್ಚು ಮನೆಗಳನ್ನು ತೆರವುಗೊಳಿಸಿದ್ದಾರೆ.

ರಸ್ತೆ ಅಗಲೀಕರಣಕ್ಕೆ ಜಾಗ ದಾನ ನೀಡಿದ ಜನ:  ಗ್ರಾಮದ ಮನೆ ಮಾಲೀಕರು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಮನೆಗಳನ್ನು ಬಿಟ್ಟುಕೊಟ್ಟಿದ್ದಾರೆ. ಕೆಲವರು ಆಶ್ರಯ ಮನೆಗಳಿಗೆ ಶಿಫ್ಟ್​ ಆಗಿ ಸಹಕಾರ ನೀಡಿದ್ದಾರೆ. ದೇವಸ್ಥಾನದ ದಾರಿಗೆ ಮನೆಗಳನ್ನ ಬಿಟ್ಟುಕೊಟ್ಟವರಿಗೆ ಗ್ರಾಮದ ಕೆಲ ಪ್ರಮುಖರು ತಮ್ಮ ಜಾಗೆಗಗಳನ್ನೇ ಉಚಿತವಾಗಿ ನೀಡಿ ತ್ಯಾಗ ಮಾಡುವುದರೊಂದಿಗೆ ಮಾದರಿಯಾಗಿದ್ದಾರೆ. ಗ್ರಾಮದಲ್ಲಿನ 5-6 ಗಲ್ಲಿಗಳಲ್ಲಿನ ಎಲ್ಲ ಸಮಾಜದವರು ಒಂದೊಂದು ದಿನ ನೇಮಿಸಿಕೊಂಡು ಟ್ಯಾಂಕರ್, ಜೆಸಿಬಿಗಳನ್ನು ಬಳಸಿಕೊಂಡು ಶ್ರಮದಾನದಿಂದ ಕೇವಲ 8 ದಿನಗಳಲ್ಲಿ 23 ಅಡಿ ಅಗಲ, 550 ಅಡಿ ಉದ್ದದ ರಸ್ತೆಯನ್ನು ನಿರ್ಮಿಸಿ ಶ್ರಮದಾನದ ಮಹತ್ವ ಸಾರಿದ್ದಾರೆ.

Published On - 12:14 pm, Sat, 29 February 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ