AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಕ್ತಿಯ ಪರಾಕಾಷ್ಠೆ.. ದೇವಸ್ಥಾನದ ದಾರಿಗಾಗಿ ತಮ್ಮ ಮನೆಗಳನ್ನೇ ಒಡೆದುಹಾಕಿದ ಗ್ರಾಮಸ್ಥರು!

ಬಾಗಲಕೋಟೆ: ಗ್ರಾಮದ ಐತಿಹಾಸಿಕ ಮಹಾಲಕ್ಷ್ಮೀ ದೇವಸ್ಥಾನದ ದಾರಿಗಾಗಿ ಗ್ರಾಮಸ್ಥರು ತಮ್ಮ ಮನೆಗಳನ್ನೆ ಒಡೆದು ಹಾಕಿದ ಅಪರೂಪದ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಮಧುರಕಂಡಿ ಗ್ರಾಮದಲ್ಲಿ ನಡೆದಿದೆ. ಮಧುರಖಂಡಿ ಗ್ರಾಮದ ಐತಿಹಾಸಿಕ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಇಕ್ಕಟ್ಟಾದ ಗಲ್ಲಿಯ ಮೂಲಕ ತೆರಳುವಂತ ಸ್ಥಿತಿ ಇತ್ತು. ಪ್ರತಿ ವರ್ಷ ದವನದ ಹುಣ್ಣಿಮೆ ನಂತರ ನಡೆಯುವ ಫಲ್ಲಕ್ಕಿ ಉತ್ಸವಕ್ಕೆ 8ರಿಂದ 10 ಸಾವಿರಕ್ಕೂ ಅಧಿಕ ಜನರು ದೇವಿ ದರ್ಶನಕ್ಕೆ ಆಗಮಿಸುತ್ತಾರೆ. ಮನೆಗಳನ್ನೇ ಬಿಟ್ಟುಕೊಟ್ಟು ಭಕ್ತಿ ಮೆರೆದ ಭಕ್ತರು: ಆದರೆ ಈ ಉತ್ಸವಕ್ಕೆ […]

ಭಕ್ತಿಯ ಪರಾಕಾಷ್ಠೆ.. ದೇವಸ್ಥಾನದ ದಾರಿಗಾಗಿ ತಮ್ಮ ಮನೆಗಳನ್ನೇ ಒಡೆದುಹಾಕಿದ ಗ್ರಾಮಸ್ಥರು!
ಸಾಧು ಶ್ರೀನಾಥ್​
|

Updated on:Feb 29, 2020 | 12:23 PM

Share

ಬಾಗಲಕೋಟೆ: ಗ್ರಾಮದ ಐತಿಹಾಸಿಕ ಮಹಾಲಕ್ಷ್ಮೀ ದೇವಸ್ಥಾನದ ದಾರಿಗಾಗಿ ಗ್ರಾಮಸ್ಥರು ತಮ್ಮ ಮನೆಗಳನ್ನೆ ಒಡೆದು ಹಾಕಿದ ಅಪರೂಪದ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಮಧುರಕಂಡಿ ಗ್ರಾಮದಲ್ಲಿ ನಡೆದಿದೆ. ಮಧುರಖಂಡಿ ಗ್ರಾಮದ ಐತಿಹಾಸಿಕ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಇಕ್ಕಟ್ಟಾದ ಗಲ್ಲಿಯ ಮೂಲಕ ತೆರಳುವಂತ ಸ್ಥಿತಿ ಇತ್ತು. ಪ್ರತಿ ವರ್ಷ ದವನದ ಹುಣ್ಣಿಮೆ ನಂತರ ನಡೆಯುವ ಫಲ್ಲಕ್ಕಿ ಉತ್ಸವಕ್ಕೆ 8ರಿಂದ 10 ಸಾವಿರಕ್ಕೂ ಅಧಿಕ ಜನರು ದೇವಿ ದರ್ಶನಕ್ಕೆ ಆಗಮಿಸುತ್ತಾರೆ.

ಮನೆಗಳನ್ನೇ ಬಿಟ್ಟುಕೊಟ್ಟು ಭಕ್ತಿ ಮೆರೆದ ಭಕ್ತರು: ಆದರೆ ಈ ಉತ್ಸವಕ್ಕೆ ದೇವಸ್ಥಾನಕ್ಕೆ ಹೋಗಲು ಸೂಕ್ತ ದಾರಿ ಇರಲಿಲ್ಲ. ಇದರಿಂದ ದೇವಸ್ಥಾನಕ್ಕೆ ನೇರವಾಗಿ ತೆರಳಲು ಗ್ರಾಮದ ಜನರು ತಮ್ಮ ಮನೆಗಳನ್ನೇ ದೇವಸ್ಥಾನ ದಾರಿಗೆ ಬಿಟ್ಟುಕೊಟ್ಟು ಭಕ್ತಿ ಮೆರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಮದ ಪ್ರಮುಖರು ಸೇರಿ ದೇವಸ್ಥಾನಕ್ಕೆ ಹೊಸದಾಗಿ ದಾರಿ ಮಾಡುವ ಸಂಕಲ್ಪ ತೊಟ್ಟು ದೇವಸ್ಥಾನಕ್ಕೆ ನೇರವಾಗುವಂತೆ ಯೋಜನೆ ರೂಪಿಸಿ ಈಗಾಗಲೇ 20ಕ್ಕೂ ಹೆಚ್ಚು ಮನೆಗಳನ್ನು ತೆರವುಗೊಳಿಸಿದ್ದಾರೆ.

ರಸ್ತೆ ಅಗಲೀಕರಣಕ್ಕೆ ಜಾಗ ದಾನ ನೀಡಿದ ಜನ:  ಗ್ರಾಮದ ಮನೆ ಮಾಲೀಕರು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಮನೆಗಳನ್ನು ಬಿಟ್ಟುಕೊಟ್ಟಿದ್ದಾರೆ. ಕೆಲವರು ಆಶ್ರಯ ಮನೆಗಳಿಗೆ ಶಿಫ್ಟ್​ ಆಗಿ ಸಹಕಾರ ನೀಡಿದ್ದಾರೆ. ದೇವಸ್ಥಾನದ ದಾರಿಗೆ ಮನೆಗಳನ್ನ ಬಿಟ್ಟುಕೊಟ್ಟವರಿಗೆ ಗ್ರಾಮದ ಕೆಲ ಪ್ರಮುಖರು ತಮ್ಮ ಜಾಗೆಗಗಳನ್ನೇ ಉಚಿತವಾಗಿ ನೀಡಿ ತ್ಯಾಗ ಮಾಡುವುದರೊಂದಿಗೆ ಮಾದರಿಯಾಗಿದ್ದಾರೆ. ಗ್ರಾಮದಲ್ಲಿನ 5-6 ಗಲ್ಲಿಗಳಲ್ಲಿನ ಎಲ್ಲ ಸಮಾಜದವರು ಒಂದೊಂದು ದಿನ ನೇಮಿಸಿಕೊಂಡು ಟ್ಯಾಂಕರ್, ಜೆಸಿಬಿಗಳನ್ನು ಬಳಸಿಕೊಂಡು ಶ್ರಮದಾನದಿಂದ ಕೇವಲ 8 ದಿನಗಳಲ್ಲಿ 23 ಅಡಿ ಅಗಲ, 550 ಅಡಿ ಉದ್ದದ ರಸ್ತೆಯನ್ನು ನಿರ್ಮಿಸಿ ಶ್ರಮದಾನದ ಮಹತ್ವ ಸಾರಿದ್ದಾರೆ.

Published On - 12:14 pm, Sat, 29 February 20

ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ