AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿಯಿಂದ ಪ್ರಶಂಸೆ ಪಡೆದ ಕಾಮೇಗೌಡ ಕ್ರಿಮಿನಲ್ ವ್ಯಕ್ತಿ: DCಗೆ ದೂರು ನೀಡಿದ ಗ್ರಾಮಸ್ಥರು

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರಿಂದ ಪ್ರಶಂಸೆಗೊಳಪಟ್ಪಿದ್ದ ಕೆರೆ ಕಾಮೇಗೌಡರ ವಿರುದ್ಧ ಅವರ ಗ್ರಾಮಸ್ಥರೇ ತಿರುಗಿ ಬಿದ್ದಿದ್ದಾರೆ. ಕಾಮೇಗೌಡ ಒಬ್ಬ ಡೋಂಗಿ ಪರಿಸರ ಪ್ರೇಮಿ. ಅವರಿಗೆ ನೀಡಿರುವ ಬಿರುದು, ಪ್ರಶಸ್ತಿ, ಸನ್ಮಾನಗಳನ್ನು ಮರು ಪರಿಶೀಲಿಸಿ ಎಂದು ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮಸ್ಥರು ನೇರವಾಗಿ ಮಂಡ್ಯ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದ್ದಾರೆ. ಹೌದು, ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಅವರ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಗ್ರಾಮೀಣ ಭಾಗದ ಪರಿಸರವಾದಿ ಎಂದು ಕಾಮೇಗೌಡ ಪ್ರಶಂಸೆ […]

ಪ್ರಧಾನಿಯಿಂದ ಪ್ರಶಂಸೆ ಪಡೆದ ಕಾಮೇಗೌಡ ಕ್ರಿಮಿನಲ್  ವ್ಯಕ್ತಿ: DCಗೆ ದೂರು ನೀಡಿದ ಗ್ರಾಮಸ್ಥರು
Guru
| Edited By: |

Updated on:Jul 15, 2020 | 1:35 PM

Share

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರಿಂದ ಪ್ರಶಂಸೆಗೊಳಪಟ್ಪಿದ್ದ ಕೆರೆ ಕಾಮೇಗೌಡರ ವಿರುದ್ಧ ಅವರ ಗ್ರಾಮಸ್ಥರೇ ತಿರುಗಿ ಬಿದ್ದಿದ್ದಾರೆ. ಕಾಮೇಗೌಡ ಒಬ್ಬ ಡೋಂಗಿ ಪರಿಸರ ಪ್ರೇಮಿ. ಅವರಿಗೆ ನೀಡಿರುವ ಬಿರುದು, ಪ್ರಶಸ್ತಿ, ಸನ್ಮಾನಗಳನ್ನು ಮರು ಪರಿಶೀಲಿಸಿ ಎಂದು ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮಸ್ಥರು ನೇರವಾಗಿ ಮಂಡ್ಯ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದ್ದಾರೆ.

ಹೌದು, ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಅವರ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಗ್ರಾಮೀಣ ಭಾಗದ ಪರಿಸರವಾದಿ ಎಂದು ಕಾಮೇಗೌಡ ಪ್ರಶಂಸೆ ಗೊಳಪಟ್ಪಿದ್ದರು. ಆದ್ರೆ ಈಗ ಅವರದೇ ಗ್ರಾಮದ ಜನರು ಅವರ ವಿರುದ್ಧ ತಿರುಗಿಬಿದ್ದಿದ್ದಾರೆ. ಕಾಮೇಗೌಡ ಕೆರೆ-ಕಟ್ಟೆಗಳನ್ನ ಕಟ್ಟಿಸಿದ್ದು, ಗಿಡಗಳನ್ನ ನೆಟ್ಟು ಪೋಷಿಸಿದ್ದೆಲ್ಲಾ ಸುಳ್ಳು. ಯಾರೋ ಕಟ್ಟಿದ ಕೆರೆ-ಕಟ್ಟೆಗಳನ್ನ ನಾನು ಕಟ್ಟಿದ್ದು ಅಂತಾರೆ. ಎರಡು ಸಾವಿರ ಗಿಡಗಳನ್ನ ನೆಟ್ಟಿರೋದೂ ಕೂಡಾ ಸುಳ್ಳು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಕಾಮೇಗೌಡ ಒಬ್ಬ ಅನಾಗರಿಕ ಮತ್ತು ಕ್ರಿಮಿನಲ್ ಹಿನ್ನೆಲೆ ಉಳ್ಳ ವ್ಯಕ್ತಿ. ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಕಾಮೇಗೌಡರ ವಿರುದ್ಧ ಕೇಸುಗಳಿವೆ. ಮಹಿಳೆಯರು ಮತ್ತು ಮಕ್ಕಳಿಗೆ ಅವರು ಮರ್ಯಾದೆ ಕೊಡಲ್ಲ. ಅನಾಗರಿಕನಂತೆ, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ಸ್ವತಃ ಅವರ ತಾಯಿ ತೀರಿಕೊಂಡಾಗಲೂ ಮೃತ ತಾಯಿಯ ಮುಖ ನೋಡಲೂ ಬಂದಿರಲಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ಕಾಮೇಗೌಡ ಸರ್ಕಾರದ ಸಹಾಯದಿಂದ ಗ್ರಾಮಸ್ಥರಿಗೆ ಕಿರುಕುಳ ನೀಡುತ್ತಿದ್ದಾರೆ. ನಿತ್ಯ ಒಂದಲ್ಲ, ಒಂದು ಆರೋಪ ಮಾಡಿ ಮೇಲಾಧಿಕಾರಿಗೆ ದೂರು ಸಲ್ಲಿಸುತ್ತಾರೆ. ಈ ಸಂಬಂಧ ಸರ್ಕಾರದ ಅಧಿಕಾರಿಗಳೇ ಪರಿಶೀಲನೆ ಮಾಡಿ, ಇಡೀ ಗ್ರಾಮಸ್ಥರ ವೈಯಕ್ತಿಕ ಅಭಿಪ್ರಾಯ ಪಡೆದು ಅವರು ನಿಜವಾಗಿಯೂ ಸಮಾಜ ಸೇವಕನಾ ಎಂಬುದನ್ನ ಪರೀಕ್ಷಿಸಿ ಎಂದು ಮಂಡ್ಯ ಡಿಸಿಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.

Published On - 1:34 pm, Wed, 15 July 20

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು