AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿಯಿಂದ ಪ್ರಶಂಸೆ ಪಡೆದ ಕಾಮೇಗೌಡ ಕ್ರಿಮಿನಲ್ ವ್ಯಕ್ತಿ: DCಗೆ ದೂರು ನೀಡಿದ ಗ್ರಾಮಸ್ಥರು

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರಿಂದ ಪ್ರಶಂಸೆಗೊಳಪಟ್ಪಿದ್ದ ಕೆರೆ ಕಾಮೇಗೌಡರ ವಿರುದ್ಧ ಅವರ ಗ್ರಾಮಸ್ಥರೇ ತಿರುಗಿ ಬಿದ್ದಿದ್ದಾರೆ. ಕಾಮೇಗೌಡ ಒಬ್ಬ ಡೋಂಗಿ ಪರಿಸರ ಪ್ರೇಮಿ. ಅವರಿಗೆ ನೀಡಿರುವ ಬಿರುದು, ಪ್ರಶಸ್ತಿ, ಸನ್ಮಾನಗಳನ್ನು ಮರು ಪರಿಶೀಲಿಸಿ ಎಂದು ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮಸ್ಥರು ನೇರವಾಗಿ ಮಂಡ್ಯ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದ್ದಾರೆ. ಹೌದು, ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಅವರ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಗ್ರಾಮೀಣ ಭಾಗದ ಪರಿಸರವಾದಿ ಎಂದು ಕಾಮೇಗೌಡ ಪ್ರಶಂಸೆ […]

ಪ್ರಧಾನಿಯಿಂದ ಪ್ರಶಂಸೆ ಪಡೆದ ಕಾಮೇಗೌಡ ಕ್ರಿಮಿನಲ್  ವ್ಯಕ್ತಿ: DCಗೆ ದೂರು ನೀಡಿದ ಗ್ರಾಮಸ್ಥರು
Guru
| Edited By: |

Updated on:Jul 15, 2020 | 1:35 PM

Share

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರಿಂದ ಪ್ರಶಂಸೆಗೊಳಪಟ್ಪಿದ್ದ ಕೆರೆ ಕಾಮೇಗೌಡರ ವಿರುದ್ಧ ಅವರ ಗ್ರಾಮಸ್ಥರೇ ತಿರುಗಿ ಬಿದ್ದಿದ್ದಾರೆ. ಕಾಮೇಗೌಡ ಒಬ್ಬ ಡೋಂಗಿ ಪರಿಸರ ಪ್ರೇಮಿ. ಅವರಿಗೆ ನೀಡಿರುವ ಬಿರುದು, ಪ್ರಶಸ್ತಿ, ಸನ್ಮಾನಗಳನ್ನು ಮರು ಪರಿಶೀಲಿಸಿ ಎಂದು ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮಸ್ಥರು ನೇರವಾಗಿ ಮಂಡ್ಯ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದ್ದಾರೆ.

ಹೌದು, ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಅವರ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಗ್ರಾಮೀಣ ಭಾಗದ ಪರಿಸರವಾದಿ ಎಂದು ಕಾಮೇಗೌಡ ಪ್ರಶಂಸೆ ಗೊಳಪಟ್ಪಿದ್ದರು. ಆದ್ರೆ ಈಗ ಅವರದೇ ಗ್ರಾಮದ ಜನರು ಅವರ ವಿರುದ್ಧ ತಿರುಗಿಬಿದ್ದಿದ್ದಾರೆ. ಕಾಮೇಗೌಡ ಕೆರೆ-ಕಟ್ಟೆಗಳನ್ನ ಕಟ್ಟಿಸಿದ್ದು, ಗಿಡಗಳನ್ನ ನೆಟ್ಟು ಪೋಷಿಸಿದ್ದೆಲ್ಲಾ ಸುಳ್ಳು. ಯಾರೋ ಕಟ್ಟಿದ ಕೆರೆ-ಕಟ್ಟೆಗಳನ್ನ ನಾನು ಕಟ್ಟಿದ್ದು ಅಂತಾರೆ. ಎರಡು ಸಾವಿರ ಗಿಡಗಳನ್ನ ನೆಟ್ಟಿರೋದೂ ಕೂಡಾ ಸುಳ್ಳು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಕಾಮೇಗೌಡ ಒಬ್ಬ ಅನಾಗರಿಕ ಮತ್ತು ಕ್ರಿಮಿನಲ್ ಹಿನ್ನೆಲೆ ಉಳ್ಳ ವ್ಯಕ್ತಿ. ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಕಾಮೇಗೌಡರ ವಿರುದ್ಧ ಕೇಸುಗಳಿವೆ. ಮಹಿಳೆಯರು ಮತ್ತು ಮಕ್ಕಳಿಗೆ ಅವರು ಮರ್ಯಾದೆ ಕೊಡಲ್ಲ. ಅನಾಗರಿಕನಂತೆ, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ಸ್ವತಃ ಅವರ ತಾಯಿ ತೀರಿಕೊಂಡಾಗಲೂ ಮೃತ ತಾಯಿಯ ಮುಖ ನೋಡಲೂ ಬಂದಿರಲಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ಕಾಮೇಗೌಡ ಸರ್ಕಾರದ ಸಹಾಯದಿಂದ ಗ್ರಾಮಸ್ಥರಿಗೆ ಕಿರುಕುಳ ನೀಡುತ್ತಿದ್ದಾರೆ. ನಿತ್ಯ ಒಂದಲ್ಲ, ಒಂದು ಆರೋಪ ಮಾಡಿ ಮೇಲಾಧಿಕಾರಿಗೆ ದೂರು ಸಲ್ಲಿಸುತ್ತಾರೆ. ಈ ಸಂಬಂಧ ಸರ್ಕಾರದ ಅಧಿಕಾರಿಗಳೇ ಪರಿಶೀಲನೆ ಮಾಡಿ, ಇಡೀ ಗ್ರಾಮಸ್ಥರ ವೈಯಕ್ತಿಕ ಅಭಿಪ್ರಾಯ ಪಡೆದು ಅವರು ನಿಜವಾಗಿಯೂ ಸಮಾಜ ಸೇವಕನಾ ಎಂಬುದನ್ನ ಪರೀಕ್ಷಿಸಿ ಎಂದು ಮಂಡ್ಯ ಡಿಸಿಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.

Published On - 1:34 pm, Wed, 15 July 20

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ