AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರೀ ಮಳೆಗೆ ತುಂಬಿ ಹರಿಯುವ ನದಿಯಲ್ಲಿ ಹುಡುಗಿಯರ ‘ಸೆಲ್ಫಿ’ ಚೆಲ್ಲಾಟ

ಬೆಳಗಾವಿ: ರಾಜ್ಯದಲ್ಲಿ ಹಲವೆಡೆ ಭಾರೀ ಮಳೆ ಸುರಿಯುತ್ತಿದೆ. ಹಾಗೇನೆ ಪಕ್ಕದ ಮಹಾರಾಷ್ಟ್ರದಲ್ಲಿ ಕೂಡಾ ಸತತವಾಗಿ ಮಳೆಯಾಗುತ್ತಿದೆ. ಹೀಗಾಗಿ ಮಹಾರಾಷ್ಟ್ರದಿಂದ ರಾಜ್ಯದಲ್ಲಿ ಹಾದು ಹೋಗುವ ನದಿಗಳಲ್ಲಿ ಮಹಾಪೂರ ಬಂದಿದ್ದು, ತುಂಬಿ ಹರಿಯುತ್ತಿವೆ. ಅದ್ರಲ್ಲೂ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗ್ರಾಮವೊಂದರ ಸೇತುವೆ ನೀರಲ್ಲಿ ಮುಳುಗಿದ್ದು, ಸ್ಥಳೀಯರು ಸರಿಯಾದ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ. ಪರಿಣಾಮ ಚಿಕ್ಕ ಮಕ್ಕಳು ಹರಿಯುವ ನದಿನೀರಿನಲ್ಲಿಯೇ ಆಟವಾಡುತ್ತಿದ್ದಾರೆ. ಹೌದು ಸತತ ಮಳೆಯ ಅಬ್ಬರಕ್ಕೆ ಬೆಳಗಾವಿಯೂ ನಲುಗುತ್ತಿದೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಸುರಿಯುತ್ತಿರೋದ್ರಿಂದ ಬೆಳಗಾವಿ ಜಿಲ್ಲೆಯ […]

ಭಾರೀ ಮಳೆಗೆ ತುಂಬಿ ಹರಿಯುವ ನದಿಯಲ್ಲಿ ಹುಡುಗಿಯರ 'ಸೆಲ್ಫಿ' ಚೆಲ್ಲಾಟ
Guru
Guru| Edited By: ಸಾಧು ಶ್ರೀನಾಥ್​|

Updated on: Aug 06, 2020 | 5:59 PM

Share

ಬೆಳಗಾವಿ: ರಾಜ್ಯದಲ್ಲಿ ಹಲವೆಡೆ ಭಾರೀ ಮಳೆ ಸುರಿಯುತ್ತಿದೆ. ಹಾಗೇನೆ ಪಕ್ಕದ ಮಹಾರಾಷ್ಟ್ರದಲ್ಲಿ ಕೂಡಾ ಸತತವಾಗಿ ಮಳೆಯಾಗುತ್ತಿದೆ. ಹೀಗಾಗಿ ಮಹಾರಾಷ್ಟ್ರದಿಂದ ರಾಜ್ಯದಲ್ಲಿ ಹಾದು ಹೋಗುವ ನದಿಗಳಲ್ಲಿ ಮಹಾಪೂರ ಬಂದಿದ್ದು, ತುಂಬಿ ಹರಿಯುತ್ತಿವೆ. ಅದ್ರಲ್ಲೂ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗ್ರಾಮವೊಂದರ ಸೇತುವೆ ನೀರಲ್ಲಿ ಮುಳುಗಿದ್ದು, ಸ್ಥಳೀಯರು ಸರಿಯಾದ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ. ಪರಿಣಾಮ ಚಿಕ್ಕ ಮಕ್ಕಳು ಹರಿಯುವ ನದಿನೀರಿನಲ್ಲಿಯೇ ಆಟವಾಡುತ್ತಿದ್ದಾರೆ.

ಹೌದು ಸತತ ಮಳೆಯ ಅಬ್ಬರಕ್ಕೆ ಬೆಳಗಾವಿಯೂ ನಲುಗುತ್ತಿದೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಸುರಿಯುತ್ತಿರೋದ್ರಿಂದ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಪಾರಿಶ್ವಾಡ ಗ್ರಾಮದಲ್ಲಿರುವ ಸೇತುವೆ ಮುಳುಗಿ ಮಲಪ್ರಭಾ ನದಿ ಅಪಾಯ ಮಟ್ಟದಲ್ಲಿ ಹರಿಯುತ್ತಿದೆ. ಆದ್ರೂ ಮುಳುಗಡೆಯಾದ ಸೇತುವೆ ಮೇಲೆ ಮಹಿಳೆಯರು ಮತ್ತು ಮಕ್ಕಳು ಮೋಜು ಮಾಡುತ್ತಿದ್ದಾರೆ.

ರಭಸವಾಗಿ ಹರಿಯುವ ನದಿ ನೀರಿನಲ್ಲಿ ಮಕ್ಕಳೊಂದಿಗೆ ಮಹಿಳೆಯರು ಮತ್ತು ಯುವತಿಯರು ಕೂಡಾ ಮಕ್ಕಳಿಗೆ ತಿಳಿವಳಿಕೆ ಹೇಳುವುದನ್ನು ಬಿಟ್ಟು ಅವರೊಂದಿಗೆ ಆಟವಾಡುತ್ತಿದ್ದಾರೆ.

ಇದಕ್ಕಿಂತ ಆಘಾತಕಾರಿಯಂದ್ರೆ ಕೆಲವರು ತುಂಬಿ ಹರಿಯುವ ನದಿಯಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ. ಹಿರೇಮುನವಳ್ಳಿ ಗ್ರಾಮದ ಕೆಲ ಜನರ ಈ ಬೇಜವಾಬ್ದಾರಿ ಈಗ ಆತಂಕಕ್ಕೆ ಕಾರಣವಾಗಿದೆ.

ಸ್ಥಳೀಯ ಪೊಲೀಸರು ಕೂಡಾ ಮುಳುಗಡೆಯಾದ ಸೇತುವೆಗೆ ಬ್ಯಾರಿಕೇಡ್ ಹಾಕಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ. ಪಾರಿಶ್ವಾಡದಿಂದ ಹಿರೇಮುನವಳ್ಳಿ ಗ್ರಾಮಕ್ಕೆ ಸಂಪರ್ಕಿಸುವ ಸೇತುವೆ ಮುಳುಗಡೆಯಾಗಿರೋದ್ರಿಂದ ಪಾರಿಶ್ವಾಡ ಗ್ರಾಮಕ್ಕೆ ಸಂಪರ್ಕಿಸುವ ಹಿರೇಮುನವಳ್ಳಿ, ಚಿಕ್ಕಮುನವಳ್ಳಿ, ಅಂಗ್ರೊಳ್ಳಿ, ಕರ್ತನಬಾಗೇವಾಡಿ, ಇಟಗಿ, ಮುನ್ಯಾನಟ್ಟಿ, ಹಂದೂರು, ಬೀಡಿ ಸೇರಿದಂತೆ ಒಂಬತ್ತು ಗ್ರಾಮಗಳ ಸಂಪರ್ಕ ಸಂಪೂರ್ಣವಾಗಿ ಸ್ಥಗಿತವಾಗಿದೆ.

Follow Us
Guru
Guru
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ