AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರೀ ಮಳೆಗೆ ತುಂಬಿ ಹರಿಯುವ ನದಿಯಲ್ಲಿ ಹುಡುಗಿಯರ ‘ಸೆಲ್ಫಿ’ ಚೆಲ್ಲಾಟ

ಬೆಳಗಾವಿ: ರಾಜ್ಯದಲ್ಲಿ ಹಲವೆಡೆ ಭಾರೀ ಮಳೆ ಸುರಿಯುತ್ತಿದೆ. ಹಾಗೇನೆ ಪಕ್ಕದ ಮಹಾರಾಷ್ಟ್ರದಲ್ಲಿ ಕೂಡಾ ಸತತವಾಗಿ ಮಳೆಯಾಗುತ್ತಿದೆ. ಹೀಗಾಗಿ ಮಹಾರಾಷ್ಟ್ರದಿಂದ ರಾಜ್ಯದಲ್ಲಿ ಹಾದು ಹೋಗುವ ನದಿಗಳಲ್ಲಿ ಮಹಾಪೂರ ಬಂದಿದ್ದು, ತುಂಬಿ ಹರಿಯುತ್ತಿವೆ. ಅದ್ರಲ್ಲೂ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗ್ರಾಮವೊಂದರ ಸೇತುವೆ ನೀರಲ್ಲಿ ಮುಳುಗಿದ್ದು, ಸ್ಥಳೀಯರು ಸರಿಯಾದ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ. ಪರಿಣಾಮ ಚಿಕ್ಕ ಮಕ್ಕಳು ಹರಿಯುವ ನದಿನೀರಿನಲ್ಲಿಯೇ ಆಟವಾಡುತ್ತಿದ್ದಾರೆ. ಹೌದು ಸತತ ಮಳೆಯ ಅಬ್ಬರಕ್ಕೆ ಬೆಳಗಾವಿಯೂ ನಲುಗುತ್ತಿದೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಸುರಿಯುತ್ತಿರೋದ್ರಿಂದ ಬೆಳಗಾವಿ ಜಿಲ್ಲೆಯ […]

ಭಾರೀ ಮಳೆಗೆ ತುಂಬಿ ಹರಿಯುವ ನದಿಯಲ್ಲಿ ಹುಡುಗಿಯರ 'ಸೆಲ್ಫಿ' ಚೆಲ್ಲಾಟ
Guru
| Edited By: |

Updated on: Aug 06, 2020 | 5:59 PM

Share

ಬೆಳಗಾವಿ: ರಾಜ್ಯದಲ್ಲಿ ಹಲವೆಡೆ ಭಾರೀ ಮಳೆ ಸುರಿಯುತ್ತಿದೆ. ಹಾಗೇನೆ ಪಕ್ಕದ ಮಹಾರಾಷ್ಟ್ರದಲ್ಲಿ ಕೂಡಾ ಸತತವಾಗಿ ಮಳೆಯಾಗುತ್ತಿದೆ. ಹೀಗಾಗಿ ಮಹಾರಾಷ್ಟ್ರದಿಂದ ರಾಜ್ಯದಲ್ಲಿ ಹಾದು ಹೋಗುವ ನದಿಗಳಲ್ಲಿ ಮಹಾಪೂರ ಬಂದಿದ್ದು, ತುಂಬಿ ಹರಿಯುತ್ತಿವೆ. ಅದ್ರಲ್ಲೂ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗ್ರಾಮವೊಂದರ ಸೇತುವೆ ನೀರಲ್ಲಿ ಮುಳುಗಿದ್ದು, ಸ್ಥಳೀಯರು ಸರಿಯಾದ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ. ಪರಿಣಾಮ ಚಿಕ್ಕ ಮಕ್ಕಳು ಹರಿಯುವ ನದಿನೀರಿನಲ್ಲಿಯೇ ಆಟವಾಡುತ್ತಿದ್ದಾರೆ.

ಹೌದು ಸತತ ಮಳೆಯ ಅಬ್ಬರಕ್ಕೆ ಬೆಳಗಾವಿಯೂ ನಲುಗುತ್ತಿದೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಸುರಿಯುತ್ತಿರೋದ್ರಿಂದ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಪಾರಿಶ್ವಾಡ ಗ್ರಾಮದಲ್ಲಿರುವ ಸೇತುವೆ ಮುಳುಗಿ ಮಲಪ್ರಭಾ ನದಿ ಅಪಾಯ ಮಟ್ಟದಲ್ಲಿ ಹರಿಯುತ್ತಿದೆ. ಆದ್ರೂ ಮುಳುಗಡೆಯಾದ ಸೇತುವೆ ಮೇಲೆ ಮಹಿಳೆಯರು ಮತ್ತು ಮಕ್ಕಳು ಮೋಜು ಮಾಡುತ್ತಿದ್ದಾರೆ.

ರಭಸವಾಗಿ ಹರಿಯುವ ನದಿ ನೀರಿನಲ್ಲಿ ಮಕ್ಕಳೊಂದಿಗೆ ಮಹಿಳೆಯರು ಮತ್ತು ಯುವತಿಯರು ಕೂಡಾ ಮಕ್ಕಳಿಗೆ ತಿಳಿವಳಿಕೆ ಹೇಳುವುದನ್ನು ಬಿಟ್ಟು ಅವರೊಂದಿಗೆ ಆಟವಾಡುತ್ತಿದ್ದಾರೆ.

ಇದಕ್ಕಿಂತ ಆಘಾತಕಾರಿಯಂದ್ರೆ ಕೆಲವರು ತುಂಬಿ ಹರಿಯುವ ನದಿಯಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ. ಹಿರೇಮುನವಳ್ಳಿ ಗ್ರಾಮದ ಕೆಲ ಜನರ ಈ ಬೇಜವಾಬ್ದಾರಿ ಈಗ ಆತಂಕಕ್ಕೆ ಕಾರಣವಾಗಿದೆ.

ಸ್ಥಳೀಯ ಪೊಲೀಸರು ಕೂಡಾ ಮುಳುಗಡೆಯಾದ ಸೇತುವೆಗೆ ಬ್ಯಾರಿಕೇಡ್ ಹಾಕಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ. ಪಾರಿಶ್ವಾಡದಿಂದ ಹಿರೇಮುನವಳ್ಳಿ ಗ್ರಾಮಕ್ಕೆ ಸಂಪರ್ಕಿಸುವ ಸೇತುವೆ ಮುಳುಗಡೆಯಾಗಿರೋದ್ರಿಂದ ಪಾರಿಶ್ವಾಡ ಗ್ರಾಮಕ್ಕೆ ಸಂಪರ್ಕಿಸುವ ಹಿರೇಮುನವಳ್ಳಿ, ಚಿಕ್ಕಮುನವಳ್ಳಿ, ಅಂಗ್ರೊಳ್ಳಿ, ಕರ್ತನಬಾಗೇವಾಡಿ, ಇಟಗಿ, ಮುನ್ಯಾನಟ್ಟಿ, ಹಂದೂರು, ಬೀಡಿ ಸೇರಿದಂತೆ ಒಂಬತ್ತು ಗ್ರಾಮಗಳ ಸಂಪರ್ಕ ಸಂಪೂರ್ಣವಾಗಿ ಸ್ಥಗಿತವಾಗಿದೆ.

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!