AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಲಕರ್ಣಿ ಇಂದು ಕೋರ್ಟ್​ಗೆ: ಯಾರೆಲ್ಲ ಕೋರ್ಟ್​ಗೆ ಬಂದಿದ್ದಾರೆ? ಪೊಲೀಸ್​ ಭದ್ರತೆ ಹೇಗಿದೆ ಗೊತ್ತಾ?

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್​ ಗೌಡ ಹತ್ಯೆ ಪ್ರಕರಣದಲ್ಲಿ ಸದ್ಯ ಸಿಬಿಐ ಕಸ್ಟಡಿಯಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ಕಸ್ಟಡಿ ಅವಧಿ ಇಂದಿಗೆ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಅವರನ್ನು ಕೋರ್ಟ್‌ಗೆ ಕರೆದೊಯ್ದರು. ಮಾಜಿ ಸಚಿವರನ್ನು ಹುಬ್ಬಳ್ಳಿಯ ಸಿಎಆರ್ ಮೈದಾನದಿಂದ ಕರೆದೊಯ್ದು ಧಾರವಾಡದ 3ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್‌ಗೆ ಹಾಜರುಪಡಿಸಿದರು. ಆದರೆ, ಇಂದು ನ್ಯಾಯಾಲಯದಲ್ಲಿ ವಿನಯ್​ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಅಸಾಧ್ಯವೆಂಬ ಮಾಹಿತಿ ಸಿಕ್ಕಿದೆ. ಮಾಜಿ ಸಚಿವರ ಪರ ಜಾಮೀನು ಅರ್ಜಿ ಸಲ್ಲಿಸಿಲಾಗಿದ್ದರೂ ಸಿಬಿಐ ತನ್ನ ಆಕ್ಷೆಪಣೆ […]

ಕುಲಕರ್ಣಿ ಇಂದು ಕೋರ್ಟ್​ಗೆ: ಯಾರೆಲ್ಲ ಕೋರ್ಟ್​ಗೆ ಬಂದಿದ್ದಾರೆ? ಪೊಲೀಸ್​ ಭದ್ರತೆ ಹೇಗಿದೆ ಗೊತ್ತಾ?
KUSHAL V
| Edited By: |

Updated on:Nov 30, 2020 | 5:21 PM

Share

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್​ ಗೌಡ ಹತ್ಯೆ ಪ್ರಕರಣದಲ್ಲಿ ಸದ್ಯ ಸಿಬಿಐ ಕಸ್ಟಡಿಯಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ಕಸ್ಟಡಿ ಅವಧಿ ಇಂದಿಗೆ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಅವರನ್ನು ಕೋರ್ಟ್‌ಗೆ ಕರೆದೊಯ್ದರು. ಮಾಜಿ ಸಚಿವರನ್ನು ಹುಬ್ಬಳ್ಳಿಯ ಸಿಎಆರ್ ಮೈದಾನದಿಂದ ಕರೆದೊಯ್ದು ಧಾರವಾಡದ 3ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್‌ಗೆ ಹಾಜರುಪಡಿಸಿದರು.

ಆದರೆ, ಇಂದು ನ್ಯಾಯಾಲಯದಲ್ಲಿ ವಿನಯ್​ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಅಸಾಧ್ಯವೆಂಬ ಮಾಹಿತಿ ಸಿಕ್ಕಿದೆ. ಮಾಜಿ ಸಚಿವರ ಪರ ಜಾಮೀನು ಅರ್ಜಿ ಸಲ್ಲಿಸಿಲಾಗಿದ್ದರೂ ಸಿಬಿಐ ತನ್ನ ಆಕ್ಷೆಪಣೆ ಇನ್ನು ಸಲ್ಲಿಸಲ್ಲ. ಹಾಗಾಗಿ, ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯುವುದಿಲ್ಲ ಎಂದು ಹೇಳಲಾಗಿದೆ.

ಕೋರ್ಟ್‌ಗೆ ಖಾಕಿ ಸರ್ಪಗಾವಲು ಇತ್ತ, ವಿನಯ್​ ಕುಲಕರ್ಣಿಯನ್ನು ಕೋರ್ಟ್​ಗೆ ಹಾಜರುಪಡಿಸಿದ ಹಿನ್ನೆಲೆಯಲ್ಲಿ ಭದ್ರತೆಗೆಂದು ನ್ಯಾಯಾಲಯದ ನಾಲ್ಕು ಕಡೆಗಳಲ್ಲಿ ಚೆಕ್ ಪೋಸ್ಟ್ ಅಳವಡಿಸಲಾಗಿದೆ. ಜೊತೆಗೆ, ಮಾಜಿ ಸಚಿವರನ್ನು ಕರೆತಂದ ಸಿಬಿಐ ವಾಹನವನ್ನು ಯಾರೂ ಹಿಂಬಾಲಿಸದಂತೆ ಪೊಲೀಸರು ಸೂಕ್ತ ಕ್ರಮ ಕೈಗೊಂಡಿದ್ದರು. ಧಾರವಾಡ ಎಸ್‌.ಪಿಗೆ ಅನಾರೋಗ್ಯವಿರುವ ಹಿನ್ನೆಲೆ ದಾವಣಗೆರೆ ಐಜಿಪಿ ಎಸ್.ರವಿ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗಿದೆ.

ಅಷ್ಟೇ ಅಲ್ಲದೆ, ಧಾರವಾಡದ ನ್ಯಾಯಾಲಯದ ಬಳಿ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿತ್ತು. ಇಬ್ಬರು ಡಿಸಿಪಿಗಳ ನೇತೃತ್ವದಲ್ಲಿ ಕೋರ್ಟ್ ಬಳಿ ಭದ್ರತೆ ನೀಡಲಾಗಿದ್ದು 3 ಡಿವೈಎಸ್‌ಪಿ, 10 ಇನ್ಸ್‌ಪೆಕ್ಟರ್‌ಗಳು, 15 PSI ಸೇರಿದಂತೆ 130ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಜೊತೆಗೆ, 3 ಕೆಎಸ್‌ಆರ್‌ಪಿ ಹಾಗೂ 5 ಸಿಎಆರ್ ತುಕಡಿಗಳನ್ನು ನ್ಯಾಯಾಲಯದ ಬಳಿ ನಿಯೋಜನೆ ಮಾಡಲಾಗಿತ್ತು. ಕೋರ್ಟ್ ಹೊರಗಡೆ ವಾಹನಗಳ ನಿಲುಗಡೆಗೆ ಸಹ ನಿರ್ಬಂಧ ಹೇರಲಾಗಿದೆ.

ಕೋರ್ಟ್‌ಗೆ ಆಗಮಿಸಿದ ಯೋಗೀಶ್ ಸಹೋದರಿ ಇತ್ತ, ವಿನಯ್ ಕುಲಕರ್ಣಿ ಕೋರ್ಟ್‌ಗೆ ಹಾಜರಾದ ಹಿನ್ನೆಲೆಯಲ್ಲಿ ಅವರೊಟ್ಟಿಗೆ ಸಿಬಿಐ ಅಧಿಕಾರಿಗಳು ಸಹ ಆಗಮಿಸಿದರು. ಕೆಲವು ದಾಖಲೆಗಳ ಸಹಿತ ಸಿಬಿಐ ಅಧಿಕಾರಿಗಳು ಕೋರ್ಟ್​ಗೆ ಆಗಮಿಸಿದರು. ಸಿಬಿಐ ಅಧಿಕಾರಿ ರಾಕೇಶ್ ರಂಜನ್ ನೇತೃತ್ವದ ಸಿಬಿಐ ತಂಡ ಆಗಮಿಸಿತು. ಇದಲ್ಲದೆ, ಧಾರವಾಡ ಕೋರ್ಟ್‌ಗೆ ಯೋಗೀಶ್ ಸಹೋದರಿ ಸಹ ಆಗಮಿಸಿದರು. ಮೃತ ಯೋಗೀಶ್‌ ಗೌಡ ಸಹೋದರಿ ಅಕ್ಕಮಹಾದೇವಿ ಸಹ ಕೋರ್ಟ್​ ವಿಚಾರಣೆ ವೀಕ್ಷಿಸಲು ಆಗಮಿಸಿದರು. ಅಕ್ಕಮಹಾದೇವಿಯೊಂದಿಗೆ ಮತ್ತೊಬ್ಬ ಸಹೋದರಿ ವಿಜಯಲಕ್ಷ್ಮಿ ಕೂಡ ಬಂದಿದ್ದರು.

Published On - 11:14 am, Mon, 9 November 20

Follow Us
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್