AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಒಂದೇ ಕೈಯಲ್ಲಿ ಎಮ್ಮೆ, ಕುದುರೆ, ಒಂಟೆಗಳನ್ನು ಸಲೀಸಾಗಿ ಎತ್ತುವ ಈತನೇ ಕಲಿಯುಗದ ಭೀಮ!

150 ಕೆಜಿ ತೂಕದ ಎಮ್ಮೆಯನ್ನು ಸಲೀಸಾಗಿ ಎತ್ತಿಕೊಂಡಿದ್ದಾರೆ. ಒಂದಲ್ಲ ಎರಡಲ್ಲ..ಬರೋಬ್ಬರಿ 63 ಗಿನ್ನಿಸ್ ರೆಕಾರ್ಡ್​ಗಳನ್ನು ಇವರು ಮಾಡಿದ್ದಾರೆ. ಈ ಮೂಲಕ ಸಾಧನೆಯ ಪರ್ವತ ಹತ್ತಿದ್ದಾರೆ.

Viral Video: ಒಂದೇ ಕೈಯಲ್ಲಿ ಎಮ್ಮೆ, ಕುದುರೆ, ಒಂಟೆಗಳನ್ನು ಸಲೀಸಾಗಿ ಎತ್ತುವ ಈತನೇ ಕಲಿಯುಗದ ಭೀಮ!
ಅಬ್ಬಬ್ಬಾ..ಈ ವ್ಯಕ್ತಿಯ ಶಕ್ತಿಯೇ!
guruganesh bhat
| Edited By: |

Updated on:Mar 09, 2021 | 5:39 PM

Share

ನೀವು ಭೀಮನ ಶಕ್ತಿಯ ಕಥೆಯನ್ನು ಕೇಳಿದ್ದೀರಿ..ಶಕ್ತಿಯ ಕುರಿತು ಬಲ ಭೀಮನ ಎಂಬ ವಿಶೇಷಣವನ್ನೇ ಬಳಸುತ್ತೇವೆ. ದೈತ್ಯದೇಹಿಗಳನ್ನು ಭೀಮಕಾಯ ಎಂದು ಕರೆಯುತ್ತೇವೆ. ಹೌದಪ್ಪಾ ಹೌದು, ಭೀಮನ ಕಥೆ ನಮಗೂ ಗೊತ್ತು. ಆದರೆ ಈಗ ಭೀಮನಂತ ಇರುವವರು ಯಾರು ತಾನೇ ಸಿಗ್ತಾರೆ? ಎಂದು ಕೇಳಿದರೆ ಈ ವ್ಯಕ್ತಿಯೇ ಉತ್ತರ. ಉಕ್ರೇನ್ ಮೂಲದ ಡಿಮಿಟ್ರೋ ಖಲಾಝಿ ಎಂಬ ವ್ಯಕ್ತಿಯನ್ನೇ ಕಲಿಯುಗದ ಭೀಮ ಎನ್ನಬಹುದು. ಇವರ ಇನ್ಸ್​ಟಾಗ್ರಾಂ ಖಾತೆಯನ್ನೊಮ್ಮೆ ನೀವು ನೋಡಬೇಕು..ಅಬ್ಬಾ! ಎಂದು ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವುದು ಖಚಿತ.

ಈ ವಿಡಿಯೋದಲ್ಲಿ ಉಕ್ರೇನಿನ ಈ ವ್ಯಕ್ತಿಯ ಭೀಮಬಲವನ್ನು ವೀಕ್ಷಿಸಬಹುದು. 150 ಕೆಜಿ ತೂಕವನ್ನು ಒಂದೇ ಕೈಯಲ್ಲಿ ಎತ್ತುವ ಸಾಮರ್ಥ್ಯ ಈತನಿಗಿದೆ. ಅಲ್ಲದೇ, ಎಮ್ಮೆ, ಕುದುರೆ, ಒಂಟೆಗಳನ್ನು ಸಲೀಸಾಗಿ ತನ್ನ ಹೆಗಲ ಮೇಲೆ ಹೊತ್ತೊಯ್ಯುತ್ತಾನೆ. ಅವರ ಸಾಹಸವನ್ನು ನೋಡಿ ಇತರರು ಬೆಕ್ಕಸಬೆರಗಾಗಿದ್ದಾರಂತೆ.

ಅವರಿಗೆ ಭೀಮ ಎಂದು ಅಭಿದಾನ ಕೊಟ್ರೆ ಯಾರೂ ಚಕಾರ ಎತ್ತುವುದಿಲ್ಲ. ಅಷ್ಟು ಶಕ್ತಿಶಾಲಿ ಉಕ್ರೇನ್ ಮೂಲದ ಡಿಮಿಟ್ರೋ ಖಲಾಝಿ. ಅವರ ಇನ್ಸ್​ಟಾಗ್ರಾಂ ಖಾತೆಯಲ್ಲಿ ಇಂತಹ ವಿಡಿಯೋಗಳು ತುಂಬಿ ತುಳುಕುತ್ತಿವೆ. ಅಲ್ಲದೇ ಅವರಿಗೆ ಇನ್ಸ್​ಟಾಗ್ರಾಂನಲ್ಲಿ 12 ಸಾವಿರಕ್ಕಿಂತಲೂ ಹೆಚ್ಚು ಫಾಲೊವರ್ಸ್​ಗಳಿದ್ದಾರೆ.

ಇಷ್ಟೇ ಅಲ್ಲ. ಈ ಭೀಮನಿಗೆ ಸಾಹಿತ್ಯದಲ್ಲೂ ಆಸಕ್ತಿ ಇದೆಯಂತೆ. ಹಿಂದೆ ಸರ್ಕಸ್​ನಲ್ಲಿ ಕೆಲಸ ಮಾಡಿದ್ದ ಅವರು ಅಥ್ಲೀಟ್​ಗಳ ಬಗ್ಗೆ ಪುಸ್ತಕವನ್ನು ಬರೆದಿದ್ದಾರೆ. ಅಲ್ಲದೇ 2010ರಲ್ಲಿ ಗೋಲ್ಡನ್ ಪೆನ್ ಆಫ್ ರಷ್ಯಾ ಪ್ರಶಸ್ತಿಯೂ ಬಂದಿದೆ.

ಗಿನ್ನಿಸ್ ರೆಕಾರ್ಡನ್ನೂ ಮಾಡಿದ್ದಾರೆ.. ಒಂದಲ್ಲ ಎರಡಲ್ಲ..ಬರೋಬ್ಬರಿ 63 ಗಿನ್ನಿಸ್ ರೆಕಾರ್ಡ್​ಗಳನ್ನು ಇವರು ಮಾಡಿದ್ದಾರೆ. ಈ ಮೂಲಕ ಸಾಧನೆಯ ಪರ್ವತ ಹತ್ತಿದ್ದಾರೆ. 2013ರಲ್ಲಿ ಒಮದು ಚಲನಚಿತ್ರದಲ್ಲಿಯೂ ಇವರು ಅಭಿನಯಿಸಿದ್ದರು.

ಇದನ್ನೂ ಓದಿ: ಗಂಡ ಝೂಮ್ ಮೀಟಿಂಗ್​ನಲ್ಲಿದ್ದಾಗಲೇ ಜುಮ್ಮನೆ ಮುತ್ತಿಕ್ಕಲು ಬಂದ ಪತ್ನಿ! ನಂತರ ಆಗಿದ್ದು ಮಾತ್ರ

Viral Video: ಅಂಗಡಿಯವನಿಂದ ಧಮ್ಕಿ: ಸಾರ್ವಜನಿಕವಾಗಿ ಪ್ಯಾಂಟಿಯನ್ನೇ ತೆಗೆದು ಮಾಸ್ಕ್​ ಮಾಡಿಕೊಂಡ ಮಹಿಳೆ

Published On - 5:26 pm, Tue, 9 March 21

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು