AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೊಹ್ಲಿಗೆ ಮಾಡಿದ ಅನ್ಯಾಯದ ಫಲ.. ಕರ್ಮ ಯಾರನ್ನು ಬಿಡುವುದಿಲ್ಲ’; ಗಂಗೂಲಿ ಕಾಲೆಳೆದ ನೆಟ್ಟಿಗರು

ಐಸಿಸಿ ಈವೆಂಟ್​ಗಳನ್ನು ಗೆಲ್ಲದಿದ್ದರು ಕೊಹ್ಲಿ ತಂಡವನ್ನು ಗೆಲುವಿನ ಲಯದಲ್ಲಿರಿಸಿದ್ದರು. ಆದರೆ ನೀವು ಏಕಾಏಕಿ ಅವರನ್ನು ಟಿ20 ನಾಯಕತ್ವದಿಂದ ಕೆಳಗಿಳಿಸಿದಿರಿ. ಈ ನಿರ್ಧಾರದಿಂದ ಬೇಸರಗೊಂಡ ಕೊಹ್ಲಿ ಒಂದು ತಿಂಗಳ ಬಳಿಕ ಟೆಸ್ಟ್ ನಾಯಕತ್ವದಿಂದ ಕೆಳಗಿಳಿಯುವ ನಿರ್ಧಾರ ಮಾಡಿದರು.

‘ಕೊಹ್ಲಿಗೆ ಮಾಡಿದ ಅನ್ಯಾಯದ ಫಲ.. ಕರ್ಮ ಯಾರನ್ನು ಬಿಡುವುದಿಲ್ಲ’; ಗಂಗೂಲಿ ಕಾಲೆಳೆದ ನೆಟ್ಟಿಗರು
ಕೊಹ್ಲಿ- ಗಂಗೂಲಿImage Credit source: hindustan times
TV9 Web
| Edited By: |

Updated on:Oct 14, 2022 | 10:44 AM

Share

ಬಿಸಿಸಿಐ (BCCI) ಅಧ್ಯಕ್ಷರಾಗಿ ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ (Sourav Ganguly) ಅವರ ಅಧಿಕಾರಾವಧಿ ಮುಗಿದಿದ್ದು, ಅವರ ಸ್ಥಾನಕ್ಕೆ ಈಗ ಭಾರತದ ಮತ್ತೊಬ್ಬ ಮಾಜಿ ಕ್ರಿಕೆಟಿಗ ರೋಜರ್ ಬಿನ್ನಿ (Roger Binny) ಅವರನ್ನು ಆಯ್ಕೆ ಮಢಲು ನಿರ್ಧರಿಸಲಾಗಿದೆ. ಗಂಗೂಲಿ ಅವರಿಗೆ ಎರಡನೇ ಅವಧಿಗೂ ಬಿಸಿಸಿಐ ಮುಖ್ಯಸ್ಥರಾಗಿ ಮುಂದುವರಿಯುವ ಆಸೆ ಇತ್ತು. ಆದರೆ ಅವರ ಈ ನಿರ್ಧಾರವನ್ನು ಬಿಸಿಸಿಐ ಪುರಸ್ಕರಿಸಲಿಲ್ಲ ಎಂದು ವರದಿಯಾಗಿದೆ. ಆದರೆ ಜಯ್ ಶಾ ಮಾತ್ರ ಎಂದಿನಂತೆ ಬಿಸಿಸಿಐ ಕಾರ್ಯದರ್ಶಿಯಾಗಿ ಮುಂದುವರಿಯಲಿದ್ದಾರೆ. ಈ ವಿಚಾರವಾಗಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಊಹಾಪೋಹಾಗಳ ಬಗ್ಗೆ ಗಂಗೂಲಿ ಕೊನೆಗೂ ನಿನ್ನೆ ಮೌನ ಮುರಿದಿದ್ದಾರೆ. ಗಂಗೂಲಿ ಹೇಳಿಕೆ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ವಿರಾಟ್ ಕೊಹ್ಲಿ (Virat Kohli) ಅಭಿಮಾನಿಗಳು ದಾದಾ ಅವರನ್ನು ಕಾಲೆಳೆಯಲು ಆರಂಭಿಸಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಗಂಗೂಲಿಯನ್ನು ತರಾಟೆಗೆ ತೆಗೆದುಕೊಂಡಿರುವ ಅಭಿಮಾನಿಗಳು ಇದೆಲ್ಲ ನೀವು ಕೊಹ್ಲಿಗೆ ಮಾಡಿದ ಅನ್ಯಾದ ಫಲ ಎಂದಿದ್ದಾರೆ. ಐಸಿಸಿ ಈವೆಂಟ್​ಗಳನ್ನು ಗೆಲ್ಲದಿದ್ದರು ಕೊಹ್ಲಿ ತಂಡವನ್ನು ಗೆಲುವಿನ ಲಯದಲ್ಲಿರಿಸಿದ್ದರು. ಆದರೆ ನೀವು ಏಕಾಏಕಿ ಅವರನ್ನು ಟಿ20 ನಾಯಕತ್ವದಿಂದ ಕೆಳಗಿಳಿಸಿದಿರಿ. ಈ ನಿರ್ಧಾರದಿಂದ ಬೇಸರಗೊಂಡ ಕೊಹ್ಲಿ ಒಂದು ತಿಂಗಳ ಬಳಿಕ ಟೆಸ್ಟ್ ನಾಯಕತ್ವದಿಂದ ಕೆಳಗಿಳಿಯುವ ನಿರ್ಧಾರ ಮಾಡಿದರು. ಆ ಬಳಿಕ ಏಕದಿನ ನಾಯಕತ್ವವನ್ನು ಅವರಿಂದ ಕಿತ್ತುಕೊಂಡಿರಿ. ಹೀಗಾಗಿ ಈಗ ನೀವು ಅನುಭವಿಸುತ್ತಿರುವ ಅವಮಾನ ಅಂದು ಕೊಹ್ಲಿಗೆ ಮಾಡಿದ ಪಾಪದ ಫಲ ಎಂದು ನೆಟ್ಟಿಗರು ಟ್ವೀಟ್ ಮಾಡಲು ಆರಂಭಿಸಿದ್ದಾರೆ.

ಕೊಹ್ಲಿ- ಗಂಗೂಲಿ ನಡುವಿನ ಮುಸುಕಿನ ಗುದ್ದಾಟ

ವಾಸ್ತವವಾಗಿ, ಬಿಸಿಸಿಐ ಅಧ್ಯಕ್ಷರಾಗಿದ್ದ ವೇಳೆ ಸೌರವ್ ಗಂಗೂಲಿ ಮತ್ತು ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ನಡುವೆ ವೈಮನಸ್ಸು ಮೂಡಿತ್ತು. ಇದಕ್ಕೆ ಮುಖ್ಯ ಕಾರಣ ಕೊಹ್ಲಿಯನ್ನು ನಾಯಕನ ಸ್ಥಾನದಿಂದ ಕೆಳಗಿಳಿಸಿದ್ದು. ದಕ್ಷಿಣ ಆಫ್ರಿಕಾ ಸರಣಿಗೂ ಮುನ್ನ ಏಕದಿನ ತಂಡದ ನಾಯಕತ್ವದಿಂದ ಕೊಹ್ಲಿಯನ್ನು ವಜಾಗೊಳಿಸಲಾಗಿತ್ತು. ಇದಕ್ಕೂ ಮುನ್ನ ಕೊಹ್ಲಿ ಟಿ20 ನಾಯಕತ್ವ ತ್ಯಜಿಸಿದ್ದರು. ಆದರೆ ವಿರಾಟ್ ಕೊಹ್ಲಿ ಟಿ20 ನಾಯಕತ್ವವನ್ನು ತ್ಯಜಿಸಿದ ಕಾರಣ ಅವರನ್ನು ಏಕದಿನ ತಂಡದ ಕಪ್ತಾನನ ಸ್ಥಾನದಿಂದ ಕೆಳಗಿಳಿಸಲಾಗಿದೆ ಎಂದು ಬಿಸಿಸಿಐ ಸ್ಪಷ್ಟನೆ ನೀಡಿತ್ತು.

ಅಲ್ಲದೆ ಈ ವೇಳೆ ಗಂಗೂಲಿ ನಾನು ಕೊಹ್ಲಿಗೆ ಟಿ20 ನಾಯಕತ್ವ ತ್ಯಜಿಸದಂತೆ ಮನವಿ ಮಾಡಿದ್ದೆ ಎಂದು ತಿಳಿಸಿದ್ದರು. ಆದರೆ ಇದಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕೊಹ್ಲಿ, ಟಿ20 ನಾಯಕತ್ವವನ್ನು ಬಿಟ್ಟುಕೊಡದಂತೆ ಯಾರೂ ಕೂಡ ನನಗೆ ಹೇಳಿಲ್ಲ ಎಂದಿದ್ದರು. ನನ್ನೊಂದಿಗೆ ಈ ಬಗ್ಗೆ ಯಾರು ಕೂಡ ಚರ್ಚಿಸಿಲ್ಲ. ಏಕದಿನ ತಂಡದ ನಾಯಕನ ಸ್ಥಾನದಿಂದ ಕೆಳಗಿಳಿಸುವ ಗಂಟೆಗೂ ಮೊದಲು ನನಗೆ ಕರೆ ಮಾಡಿ ತಿಳಿಸಿದ್ದರು ಎಂದು ಕೊಹ್ಲಿ ಹೇಳಿದ್ದರು.

ಗಂಗೂಲಿ ಸ್ಪಷ್ಟನೆ ಹೀಗಿದೆ

ಬಿಸಿಸಿಐ ಅಧ್ಯಕ್ಷಗಿರಿಯಿಂದ ಕೆಳಗಿಳಿಸಿದ ಬಳಿಕ ಕಾರ್ಯಕ್ರಮವೊಂದರಲ್ಲಿ ಈ ಬಗ್ಗೆ ಮಾತನಾಡಿದ ಗಂಗೂಲಿ, ನಾನು ಅಡ್ಮಿನಿಸ್ಟ್ರೇಟರ್ ಆಗಿ ಸುದೀರ್ಘ ಇನ್ನಿಂಗ್ಸ್ ಆಡಿದ್ದು, ಈಗ ಬೇರೆ ಕೆಲಸಗಳತ್ತ ಗಮನ ಹರಿಸುವ ಸಮಯ ಬಂದಿದೆ. ನೀವು ಶಾಶ್ವತವಾಗಿ ಆಟಗಾರರಾಗಿರಲು ಸಾಧ್ಯವಿಲ್ಲ. ಹಾಗೆಯೇ ಶಾಶ್ವತವಾಗಿ ಅಡ್ಮಿನಿಸ್ಟ್ರೇಟರ್ ಆಗಿ ಇರುವುದಕ್ಕೂ ಸಾಧ್ಯವಿಲ್ಲ. ಆದರೆ ನಾನು ಈ ಎರಡನ್ನೂ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದೇನೆ. ನಾನು ದೀರ್ಘ ಕಾಲದಿಂದ ಆಡಳಿತದ ಚುಕ್ಕಾಣಿ ಹಿಡಿದಿದ್ದೆ. ಆದರೆ, ಈಗ ನಾನು ನನ್ನ ಜೀವನದಲ್ಲಿ ಬೇರೆಡೆ ಗಮನಹರಿಸುವ ಉದ್ದೇಶ ಹೊಂದಿದ್ದೇನೆ ಎಂದು ಗಂಗೂಲಿ ಹೇಳಿಕೊಂಡಿದ್ದಾರೆ.

ಗಂಗೂಲಿಯನ್ನು ನೆಟ್ಟಿಗರು ಕಾಲೆಳೆದಿದ್ದು ಹೀಗೆ

Published On - 9:48 am, Fri, 14 October 22

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!