AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಿಗ ದೇವದತ್ ಪಡಿಕ್ಕಲ್​ಗೆ ಗುರುವಾದ ಕ್ಯಾಪ್ಟನ್ ಕೊಹ್ಲಿ

ಕನ್ನಡಿಗ ದೇವದತ್ ಪಡಿಕ್ಕಲ್ ಬೊಂಬಾಟ್ ಬ್ಯಾಟಿಂಗ್, ಆರ್​ಸಿಬಿ ತಂಡದ ಎರಡು ಗೆಲುವಿಗೆ ಪ್ರಮುಖ ಕಾರಣವಾಗಿದೆ. ಯಾಕಂದ್ರೆ ಎರಡೂ ಪಂದ್ಯದಲ್ಲೂ ಪಡಿಕ್ಕಲ್ ಆರಂಭಿಕನಾಗಿ ಎರಡು ಅರ್ಧಶತಕ ಸಿಡಿಸಿ, ಆರ್​ಸಿಬಿ ಗೆಲುವಿನ ರೂವಾರಿಗಳಲ್ಲಿ ಒಬ್ಬನಾಗಿ ಮಿಂಚಿದ್ದಾನೆ. ಆರ್​ಸಿಬಿ ಪರ ಇನ್ನು ಮುಂದಿನ ಪಂದ್ಯಗಳಲ್ಲಿ ದೇವದತ್ ಪಡಿಕ್ಕಲ್, ಇನ್ನು ಹೆಚ್ಚಿನ ಕೊಡುಗೆ ನೀಡೋದ್ರಲ್ಲಿ ಅನುಮಾನವೇ ಇಲ್ಲ. ಯಾಕೇ ಅಂತೀರಾ. ಸ್ವತಃ ಕ್ಯಾಪ್ಟನ್ ವಿರಾಟ್ ಕೊಹ್ಲಿಯೇ, ಪಡಿಕ್ಕಲ್​ಗೆ ಕೋಚ್ ಆಗಿ ಪಾಠ ಹೇಳಿಕೊಡ್ತಿದ್ದಾರೆ. ನಿಜ.. ಆರ್​ಸಿಬಿ ತಂಡದ ನಿರ್ದೇಶಕ ಮೈಕ್ ಹಸನ್, ತಂಡದಲ್ಲಿ […]

ಕನ್ನಡಿಗ ದೇವದತ್ ಪಡಿಕ್ಕಲ್​ಗೆ ಗುರುವಾದ ಕ್ಯಾಪ್ಟನ್ ಕೊಹ್ಲಿ
ಆಯೇಷಾ ಬಾನು
|

Updated on: Oct 02, 2020 | 8:43 AM

Share

ಕನ್ನಡಿಗ ದೇವದತ್ ಪಡಿಕ್ಕಲ್ ಬೊಂಬಾಟ್ ಬ್ಯಾಟಿಂಗ್, ಆರ್​ಸಿಬಿ ತಂಡದ ಎರಡು ಗೆಲುವಿಗೆ ಪ್ರಮುಖ ಕಾರಣವಾಗಿದೆ. ಯಾಕಂದ್ರೆ ಎರಡೂ ಪಂದ್ಯದಲ್ಲೂ ಪಡಿಕ್ಕಲ್ ಆರಂಭಿಕನಾಗಿ ಎರಡು ಅರ್ಧಶತಕ ಸಿಡಿಸಿ, ಆರ್​ಸಿಬಿ ಗೆಲುವಿನ ರೂವಾರಿಗಳಲ್ಲಿ ಒಬ್ಬನಾಗಿ ಮಿಂಚಿದ್ದಾನೆ.

ಆರ್​ಸಿಬಿ ಪರ ಇನ್ನು ಮುಂದಿನ ಪಂದ್ಯಗಳಲ್ಲಿ ದೇವದತ್ ಪಡಿಕ್ಕಲ್, ಇನ್ನು ಹೆಚ್ಚಿನ ಕೊಡುಗೆ ನೀಡೋದ್ರಲ್ಲಿ ಅನುಮಾನವೇ ಇಲ್ಲ. ಯಾಕೇ ಅಂತೀರಾ. ಸ್ವತಃ ಕ್ಯಾಪ್ಟನ್ ವಿರಾಟ್ ಕೊಹ್ಲಿಯೇ, ಪಡಿಕ್ಕಲ್​ಗೆ ಕೋಚ್ ಆಗಿ ಪಾಠ ಹೇಳಿಕೊಡ್ತಿದ್ದಾರೆ.

ನಿಜ.. ಆರ್​ಸಿಬಿ ತಂಡದ ನಿರ್ದೇಶಕ ಮೈಕ್ ಹಸನ್, ತಂಡದಲ್ಲಿ ಹೊಸದೊಂದು ನಿಯಮ ತಂದಿದ್ದಾರೆ. ಅದೇ ಮೆಂಟರ್​ಶಿಪ್ ಪ್ರೊಗ್ರಾಮ್. ಅಂದ್ರೆ ತಂಡದಲ್ಲಿರೋ ಹಿರಿಯ ಕ್ರಿಕೆಟಿಗರು, ತಮ್ಮ ಅನುಭವವನ್ನ ಯುವ ಕ್ರಿಕೆಟಿಗರಿಗೆ ಧಾರೆಯೆರೆದು ಅವರನ್ನ ಬೆಳೆಸೋದು. ಈ ಮೆಂಟರ್​ಶಿಪ್ ಪ್ರೋಗ್ರಾಮ್​ನಲ್ಲಿ ಕ್ಯಾಪ್ಟನ್ ಕೊಹ್ಲಿಗೆ ಜೊತೆಯಾಗಿದ್ದು ನಮ್ಮ ಹೆಮ್ಮೆಯ ಕನ್ನಡಿಗ ದೇವದತ್ ಪಡಿಕ್ಕಲ್.

ದೇವದತ್ ಪಡಿಕ್ಕಲ್​ಗೆ ಕೊಹ್ಲಿ ಮಾರ್ಗದರ್ಶಕರಾಗಿ ಕೆಲಸ ಮಾಡಲಿದ್ದಾರೆ. ಪಡಿಕ್ಕಲ್​ಗೂ ವೈಯಕ್ತಿಕ ಮಾರ್ಗದರ್ಶಕರಿಲ್ಲ. ಇಬ್ಬರು ಆರಂಭಿಕರಾಗಿ ಯಶಸ್ಸು ಕಂಡವರೆ ಆಗಿದ್ದಾರೆ. ಇದು ಪಡಿಕ್ಕಲ್​​ಗೆ ನೆರವಾಗಲಿದೆ ಎಂದು ಮೈಕ್ ಹಸನ್ ಹೇಳಿದ್ದರೆ.

ನಿಜಕ್ಕೂ ಇದೊಂದು ಅದ್ಭುತವಾದ ಐಡಿಯಾ. ಈಗಾಗಲೇ ಫುಟ್ಬಾಲ್ ಪಂದ್ಯಗಳಲ್ಲಿ ಈ ಐಡಿಯಾ ಯಶಸ್ಸು ಕಂಡಿದೆ. ಹೀಗಾಗಿ ಆರ್​ಸಿಬಿ ತಂಡದ ಹೆಡ್ ಕೋಚ್ ಸೈಮನ್ ಕಾಟಿಚ್, ಈ ಪ್ರೋಗ್ರಾಮ್ ಅನ್ನ ಆರ್​ಸಿಬಿ ತಂಡದಲ್ಲೂ ತಂದಿದ್ದಾರೆ.

ಈ ಮೆಂಟರ್​ಶಿಪ್ ಪ್ರೊಗ್ರಾಮ್ ಈಗಾಗಲೇ ಆರ್​ಸಿಬಿ ಆಟಗಾರರು ಅಳವಡಿಸಿಕೊಂಡಿದ್ದಾರೆ. ಹೀಗಾಗಿ ಕ್ಯಾಪ್ಟನ್ ಕೊಹ್ಲಿ, ನಿನ್ನೆ ದಿನವಿಡಿ ದೇವದತ್ ಪಡಿಕ್ಕಲ್ ಜೊತೆಯೆ ಪ್ರಾಕ್ಟೀಸ್ ಮಾಡಿದ್ದಾರೆ. ಪಡಿಕ್ಕಲ್​​ಗೆ ಉಪಯುಕ್ತವಾದ ಮಾಹಿತಿ ನೀಡಿದ್ದಾರೆ.

ಇನ್ನು ಮುಂಬೈ ವಿರುದ್ಧದ ಪಂದ್ಯದಲ್ಲಿ ಸೂಪರ್ ಓವರ್​ನಲ್ಲಿ ಆರ್​ಸಿಬಿಗೆ ಗೆಲುವು ತಂದು ಕೊಟ್ಟ ನವದೀಪ್ ಸೈನಿಗೆ, ದಕ್ಷಿಣ ಆಫ್ರಿಕಾದ ಡೇಲ್ ಸ್ಟೇನ್ ಮೆಂಟರ್ ಆಗಿದ್ದಾರೆ. ಹೀಗಾಗಿ ಸೈನಿಗೆ ಸ್ಟೇನ್, ತಮ್ಮ ಅನುಭವವನ್ನ ಧಾರೆಯೆರೆಯುತ್ತಿದ್ದಾರೆ.

ಮುಂಬೈ ವಿರುದ್ಧ ಸೂಪರ್ ಓವರ್​ನಲ್ಲಿ ಗೆದ್ದು ಬೀಗಿರೋ ಆರ್​ಸಿಬಿ ಮತ್ತೆ ಗೆಲುವಿನ ಟ್ರ್ಯಾಕ್​ಗೆ ಬಂದಿದೆ. ಹೀಗಾಗಿ ಕೋಚಿಂಗ್ ಸ್ಟಾಫ್ ತಂಡದಲ್ಲಿ ಮೆಂಟರ್​ಶಿಪ್ ಪ್ರೋಗ್ರಾಮ್ ಜಾರಿಗೆ ತಂದಿದೆ. ಆ ಮೂಲಕ ಇನ್ನು ಉತ್ತಮ ಪ್ರದರ್ಶನ ಹೊರ ತಗೆಯೋದಕ್ಕೆ ಮುಂದಾಗಿರೋ ಆರ್​ಸಿಬಿ ಕೋಚಿಂಗ್ ಸ್ಟಾಫ್​ಗೆ ಯಶಸ್ಸು ಸಿಗುತ್ತೆ ಅನ್ನೋ ನಂಬಿಕೆ ಅಭಿಮಾನಿಗಳಿಗೂ ಇದೆ.

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ