ಕೃಷ್ಣ ಜನ್ಮಾಷ್ಟಮಿ: ಇಸ್ಕಾನ್​ನಲ್ಲಿ ಈ ಬಾರಿ ಭಕ್ತರಿಗಿಲ್ಲ ನೇರ ದರ್ಶನ ಭಾಗ್ಯ, ಆದರೆ..

ಬೆಂಗಳೂರು:ಕೊರೊನಾ ಸೋಂಕು ದೇಶದಲ್ಲಿ ವ್ಯಾಪಕವಾಗಿ ಹಬ್ಬುತ್ತಿದೆ. ಹೀಗಾಗಿ ಆಡಳಿತವರ್ಗವು ಧಾರ್ಮಿಕ ಹಬ್ಬಗಳ ಅದ್ದೂರಿ ಆಚರಣೆಗೆ ಬ್ರೇಕ್ ಹಾಕಿದೆ. ಇದೀಗ ನಗರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಇಸ್ಕಾನ್ ದೇಗುಲದ ಆಡಳಿತ ಮಂಡಳಿ ಈ ಬಾರಿಯ ಕೃಷ್ಣ ಜನ್ಮಾಷ್ಟಮಿಯನ್ನು ಸರಳವಾಗಿ ಆಚರಿಸಲು ನಿರ್ಧರಿಸಿದೆ. ಹೀಗಾಗಿ, ಈ ಸಲ ಭಕ್ತರಿಗೆ ನೇರ ದರ್ಶನಕ್ಕೆ ಪ್ರವೇಶ ನಿರಾಕರಿಸಿದೆ. ಆದರೆ, ಭಕ್ತರ ಅನುಕೂಲಕ್ಕಾಗಿ ದೇಗುಲದಲ್ಲಿ ನಡೆಯುವ ಕೃಷ್ಣ ಜನ್ಮಾಷ್ಟಮಿಯ ಆಚರಣೆಯನ್ನು ಭಕ್ತರು ಯೂಟ್ಯೂಬ್ ಮುಖಾಂತರ ವೀಕ್ಷಿಸಬಹುದು ಎಂಬ ಮಾಹಿತಿ ನೀಡಿದೆ. ದೇವಸ್ಥಾನದಲ್ಲಿ […]

ಕೃಷ್ಣ ಜನ್ಮಾಷ್ಟಮಿ: ಇಸ್ಕಾನ್​ನಲ್ಲಿ ಈ ಬಾರಿ ಭಕ್ತರಿಗಿಲ್ಲ ನೇರ ದರ್ಶನ ಭಾಗ್ಯ, ಆದರೆ..
ಸಾಧು ಶ್ರೀನಾಥ್​ Edited By:

Updated on: Jul 27, 2020 | 3:07 PM

ಬೆಂಗಳೂರು:ಕೊರೊನಾ ಸೋಂಕು ದೇಶದಲ್ಲಿ ವ್ಯಾಪಕವಾಗಿ ಹಬ್ಬುತ್ತಿದೆ. ಹೀಗಾಗಿ ಆಡಳಿತವರ್ಗವು ಧಾರ್ಮಿಕ ಹಬ್ಬಗಳ ಅದ್ದೂರಿ ಆಚರಣೆಗೆ ಬ್ರೇಕ್ ಹಾಕಿದೆ.

ಇದೀಗ ನಗರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಇಸ್ಕಾನ್ ದೇಗುಲದ ಆಡಳಿತ ಮಂಡಳಿ ಈ ಬಾರಿಯ ಕೃಷ್ಣ ಜನ್ಮಾಷ್ಟಮಿಯನ್ನು ಸರಳವಾಗಿ ಆಚರಿಸಲು ನಿರ್ಧರಿಸಿದೆ. ಹೀಗಾಗಿ, ಈ ಸಲ ಭಕ್ತರಿಗೆ ನೇರ ದರ್ಶನಕ್ಕೆ ಪ್ರವೇಶ ನಿರಾಕರಿಸಿದೆ.

ಆದರೆ, ಭಕ್ತರ ಅನುಕೂಲಕ್ಕಾಗಿ ದೇಗುಲದಲ್ಲಿ ನಡೆಯುವ ಕೃಷ್ಣ ಜನ್ಮಾಷ್ಟಮಿಯ ಆಚರಣೆಯನ್ನು ಭಕ್ತರು ಯೂಟ್ಯೂಬ್ ಮುಖಾಂತರ ವೀಕ್ಷಿಸಬಹುದು ಎಂಬ ಮಾಹಿತಿ ನೀಡಿದೆ. ದೇವಸ್ಥಾನದಲ್ಲಿ ನಡೆಯುವ ಎಲ್ಲಾ ಪೂಜೆ-ಪುನಸ್ಕಾರ ಹಾಗೂ ಅಭಿಷೇಕವನ್ನು ಯೂಟ್ಯೂಬ್ನಲ್ಲಿ ನೇರ ಪ್ರಸಾರ ಮಾಡಲು ದೇವಾಲಯದ ಆಡಳಿತ ಮಂಡಳಿ ನಿರ್ಧರಿಸಿದೆ.

Published On - 4:49 pm, Sun, 26 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us