AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವು ಹಿಡಿಯುವ ಕಲೆಯೂ ಗೊತ್ತು ಉಡುಪಿಯ ಈ ಸ್ವಾಮೀಜಿಗೆ

ಉಡುಪಿ: ಬಹಳಷ್ಟು ಜನಕ್ಕೆ ಗೊತ್ತಿರಲಿಕ್ಕಿಲ್ಲ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗೆ ಹಾವು ಹಿಡಿಯುವ ಕಲೆಯೂ ಗೊತ್ತು ಅಂತಾ. ಇದನ್ನು ಇತ್ತೀಚೆಗೆ ಅವರು ತಮ್ಮ ಶಿಷ್ಯವೃಂದಕ್ಕೆ ಪ್ರದರ್ಶಿಸುವ ಮೂಲಕ ತಾವು ಬಹು ವಿದ್ಯೆ ಪಾರಂಗತರು ಎನ್ನುವ ಅಚ್ಚರಿ ನೀಡಿದ್ದಾರೆ. ಹೌದು ಉಡುಪಿಯ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ವಿಭಿನ್ನ ಅಭಿರುಚಿಯ ಯತಿ. ಸನ್ಯಾಸದ ಜೊತೆ ಕೃಷಿ ಚಟುವಟಿಕೆ, ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳುತ್ತಾರೆ. ಈ ನಡುವೆ ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ತಮ್ಮ ಮಠದ ನೀಲಾವರ ಗೋಶಾಲೆಯ […]

ಹಾವು ಹಿಡಿಯುವ ಕಲೆಯೂ ಗೊತ್ತು ಉಡುಪಿಯ ಈ ಸ್ವಾಮೀಜಿಗೆ
ಸಾಧು ಶ್ರೀನಾಥ್​
| Updated By: Guru|

Updated on:Jul 30, 2020 | 9:59 PM

Share

ಉಡುಪಿ: ಬಹಳಷ್ಟು ಜನಕ್ಕೆ ಗೊತ್ತಿರಲಿಕ್ಕಿಲ್ಲ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗೆ ಹಾವು ಹಿಡಿಯುವ ಕಲೆಯೂ ಗೊತ್ತು ಅಂತಾ. ಇದನ್ನು ಇತ್ತೀಚೆಗೆ ಅವರು ತಮ್ಮ ಶಿಷ್ಯವೃಂದಕ್ಕೆ ಪ್ರದರ್ಶಿಸುವ ಮೂಲಕ ತಾವು ಬಹು ವಿದ್ಯೆ ಪಾರಂಗತರು ಎನ್ನುವ ಅಚ್ಚರಿ ನೀಡಿದ್ದಾರೆ.

ಹೌದು ಉಡುಪಿಯ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ವಿಭಿನ್ನ ಅಭಿರುಚಿಯ ಯತಿ. ಸನ್ಯಾಸದ ಜೊತೆ ಕೃಷಿ ಚಟುವಟಿಕೆ, ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳುತ್ತಾರೆ. ಈ ನಡುವೆ ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ತಮ್ಮ ಮಠದ ನೀಲಾವರ ಗೋಶಾಲೆಯ ಆವರಣದಲ್ಲಿ ಹೆಬ್ಬಾವಿನ ‌ಮರಿಯೊಂದು ಕಾಣಿಸಿಕೊಂಡಿದೆ. ಆಗ ಹಾವನ್ನು ಸರಳವಾಗಿ, ಯಾವುದೇ ಅಪಾಯವಿಲ್ಲದೇ ಹಿಡಿಯುವ ವಿಧಾನ ವಿವರಿಸಿ, ಪ್ರಾತ್ಯಕ್ಷಿಕೆ ಮಾಡಿ ಪೇಜಾವರಶ್ರೀ ಎಲ್ಲರ ಹುಬ್ಬೇರಿಸಿದ್ದಾರೆ. ಪೇಜಾವರ ಶ್ರೀಗಳ ಸಾಹಸವನ್ನು ಕಂಡು ಅವರ ಶಿಷ್ಯರೇ ಅಚ್ಚರಿಪಟ್ಟಿದ್ದಾರೆ.

ತೆಂಗಿನ ಮರದ ಗರಿಯ ಕಡ್ಡಿಯಲ್ಲಿ ಹಾವು ಹಿಡಿಯುವ ಪ್ರಕ್ರಿಯೆ ಎಲ್ಲರ ಸಹಜ ಕುತೂಹಲಕ್ಕೆ ಕಾರಣವಾಗಿದೆ. ಪೇಜಾವರ ಶ್ರೀ ಸುಲಲಿತವಾಗಿ ಹಾವು ಹಿಡಿದು ಗೋಣಿಚೀಲಕ್ಕೆ ತುಂಬಿಸುವ ಸಂದರ್ಭ ಗೋಣಿ ಹಿಡಿದ ಶಿಷ್ಯ ಭಯದಲ್ಲಿ ಗಲಿಬಿಲಿಗೊಂಡ ಪರಿಯೂ ವಿಡಿಯೋದಲ್ಲಿ ಸೆರೆಯಾಗಿದೆ. ಶ್ರೀಗಳು ಈ ಹಿಂದೆ ಮೂರ್ನಾಲ್ಕು ಬಾರಿ ಹಾವುಗಳನ್ನು ಹಿಡಿದು ಸಂರಕ್ಷಣೆ ಮಾಡಿದ್ದರು.-ಹರೀಶ್ ಪಾಲೆಚ್ಚಾರ್ 

Published On - 9:59 pm, Thu, 30 July 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ