AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸಿರು ಕಾನನದ ಮಧ್ಯೆ ಮನಸಿಗೆ ಮುದ ನೀಡುತ್ತಿದೆ ವನ್ಯಜೀವಿಗಳ ವಿಹಾರ.. ಪ್ರವಾಸಿಗರು ಖುಷ್

ಚಾಮರಾಜನಗರ: ಹಸಿರನ್ನೇ ಹೊದ್ದು ನಿಂತಿರೋ ಕಾನನ. ಸ್ವಚ್ಛಂದ ತಾಣದಲ್ಲಿ ವನ್ಯಜೀವಿಗಳ ಸುಂದರ ನೋಟ. ಕಂಡಲ್ಲೆಲ್ಲ ಓಡಾಡುತ್ತಿರುವ ಜಿಂಕೆಗಳ ಹಿಂಡು. ನೀರಿನಲ್ಲಿ ವಿಶಾಂತ್ರಿ ಪಡೆಯುತ್ತಿರುವ ಹುಲಿರಾಯ. ಪ್ರಕೃತಿ ಮಾತೆಯ ಸೊಬಗು ಸವಿಯೋಕೆ ಬರ್ತಿರೋ ಪ್ರವಾಸಿಗರ ಹಿಂಡು. ಚಾಮರಾಜನಗರ ಜಿಲ್ಲೆಯಲ್ಲಿರುವ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಈಗ ಹಸಿರು ಸೀರೆಯುಟ್ಟ ನಾರಿಯಂತೆ ಕಂಗೊಳಿಸುತ್ತಿದೆ. ನಿಧಾನಗತಿಯಲ್ಲಿ ಕೆರೆಕಟ್ಟೆಗಳು ತುಂಬಲಾರಂಭಿಸಿವೆ. ಎತ್ತ ನೋಡಿದರೂ ಹಸಿರ ವನರಾಶಿ ಕಂಡುಬರುತ್ತಿದೆ. ಕೊರೊನಾದಿಂದ ಪ್ರವಾಸಿಗರಿಲ್ಲದೆ ಖಾಲಿ ಖಾಲಿಯಾಗಿದ್ದ ಸಫಾರಿ ಈಗ ತುಂಬಿ ತುಳುಕುತ್ತಿದೆ. ಅದರಲ್ಲೂ ವಿಕೆಂಡ್ ದಿನಗಳಲ್ಲಿ […]

ಹಸಿರು ಕಾನನದ ಮಧ್ಯೆ ಮನಸಿಗೆ ಮುದ ನೀಡುತ್ತಿದೆ ವನ್ಯಜೀವಿಗಳ ವಿಹಾರ.. ಪ್ರವಾಸಿಗರು ಖುಷ್
ಆಯೇಷಾ ಬಾನು
| Edited By: |

Updated on:Oct 08, 2020 | 3:41 PM

Share

ಚಾಮರಾಜನಗರ: ಹಸಿರನ್ನೇ ಹೊದ್ದು ನಿಂತಿರೋ ಕಾನನ. ಸ್ವಚ್ಛಂದ ತಾಣದಲ್ಲಿ ವನ್ಯಜೀವಿಗಳ ಸುಂದರ ನೋಟ. ಕಂಡಲ್ಲೆಲ್ಲ ಓಡಾಡುತ್ತಿರುವ ಜಿಂಕೆಗಳ ಹಿಂಡು. ನೀರಿನಲ್ಲಿ ವಿಶಾಂತ್ರಿ ಪಡೆಯುತ್ತಿರುವ ಹುಲಿರಾಯ. ಪ್ರಕೃತಿ ಮಾತೆಯ ಸೊಬಗು ಸವಿಯೋಕೆ ಬರ್ತಿರೋ ಪ್ರವಾಸಿಗರ ಹಿಂಡು.

ಚಾಮರಾಜನಗರ ಜಿಲ್ಲೆಯಲ್ಲಿರುವ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಈಗ ಹಸಿರು ಸೀರೆಯುಟ್ಟ ನಾರಿಯಂತೆ ಕಂಗೊಳಿಸುತ್ತಿದೆ. ನಿಧಾನಗತಿಯಲ್ಲಿ ಕೆರೆಕಟ್ಟೆಗಳು ತುಂಬಲಾರಂಭಿಸಿವೆ. ಎತ್ತ ನೋಡಿದರೂ ಹಸಿರ ವನರಾಶಿ ಕಂಡುಬರುತ್ತಿದೆ. ಕೊರೊನಾದಿಂದ ಪ್ರವಾಸಿಗರಿಲ್ಲದೆ ಖಾಲಿ ಖಾಲಿಯಾಗಿದ್ದ ಸಫಾರಿ ಈಗ ತುಂಬಿ ತುಳುಕುತ್ತಿದೆ. ಅದರಲ್ಲೂ ವಿಕೆಂಡ್ ದಿನಗಳಲ್ಲಿ ಪ್ರವಾಸಿಗರು ಸಾಗರೋಪಾದಿಯಲ್ಲಿ ಹರಿದು ಬರ್ತಿದ್ದಾರೆ.

ಚಾಮರಾಜನಗರ ಜಿಲ್ಲೆಯಲ್ಲಿ ಹಿಂಗಾರು ಮಳೆ ಬೀಳುತ್ತಿವುದರಿಂದ ಅಕ್ಪೋಬರ್ ತಿಂಗಳಲ್ಲೂ ಬಂಡೀಪುರ ಕಳೆಗಟ್ಟಿದೆ. ನೀರು ಹಾಗೂ ಮೇವಿನ ಚಿಂತೆ ಇಲ್ಲದೆ ವನ್ಯಜೀವಿಗಳು ಸ್ವಚ್ಚಂದವಾಗಿ ವಿಹರಿಸುವ ದೃಶ್ಯ ಸಾಮಾನ್ಯವಾಗಿ ಕಂಡುಬರುತ್ತಿದೆ. ಕೆರೆಕಟ್ಟೆಗಳಲ್ಲಿ ನೀರು ಕುಡಿಯಲು, ಇಲ್ಲವೇ ಹಸಿರು ಹುಲ್ಲು ಮೇಯಲು ಬರುವ ಕಾಡೆಮ್ಮೆ, ಜಿಂಕೆ, ಕಡವೆಯಂತಹ ಪ್ರಾಣಿಗಳನ್ನ ನೋಡಿದರೆ ಮನಸು ಮುದಗೊಳ್ಳುತ್ತದೆ.

ಒಟ್ನಲ್ಲಿ ಕೊರೊನಾದಿಂದ ಪ್ರವಾಸಿಗರಿಲ್ಲದೇ ಬಿಕೋ ಎನ್ನುತ್ತಿದ್ದ ಬಂಡಿಪುರ ಈಗ ಕಳೆಗಟ್ಟಲಾರಂಭಿಸಿದ್ದು, ಪ್ರವಾಸಿಗರು ಸಖತ್ ಎಂಜಾಯ್ ಮಾಡುತ್ತಿದ್ದಾರೆ.

Published On - 3:40 pm, Thu, 8 October 20

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ